Advertisement
MIRROR FOCUS

ನಿಗದಿ ಪಡಿಸಿದ ವೇಳೆಯಲ್ಲಿಯೇ ಅನಿಲ ಟ್ಯಾಂಕರ್ ಸಂಚಾರ |ಅಧಿಕಾರಿಗಳ ನಿಗಾಕ್ಕೆ ಜಿಲ್ಲಾಧಿಕಾರಿ ಸೂಚನೆ |

Share

ನಿಗದಿಪಡಿಸಿರುವ (ಹಗಲು) ವೇಳೆಯಲ್ಲಿಯೇ ಅನಿಲ್ ಟ್ಯಾಂಕರುಗಳು ಸಂಚರಿಸುವ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.

ಅವರು ಫೆ.14ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯನ್ನು ಹಾದುಹೋಗುವ ಹೆದ್ದಾರಿಗಳಲ್ಲಿ ಗ್ಯಾಸ್ ಟ್ಯಾಂಕರ್ ಗಳ ಅಸುರಕ್ಷಿತ ಚಾಲನೆ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತದೆ, ಅಲ್ಲದೇ ಅದು ಸಾರ್ವಜನಿಕರ ಸುಗಮ ಸಂಚಾರಕ್ಕೂ ಅನಾನುಕೂಲವಾಗುತ್ತದೆ, ಒಂದು ವೇಳೆ ಅವುಗಳು ಅಪಘಾತಕ್ಕೀಡಾದಲ್ಲಿ ಹೆಚ್ಚಿನ ಅನಾಹುತವು ಸಂಭವಿಸುತ್ತದೆ, ಈ ಕಾರಣಗಳಿಂದಾಗಿ ಗ್ಯಾಸ್ ಟ್ಯಾಂಕರ್ ಗಳ ಚಾಲನೆಗೆ ನಿಗದಿ ಪಡಿಸಿದ ಅವಧಿಯಲ್ಲಿ ಮಾತ್ರ ಅವುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು, ಅದನ್ನು ಉಲ್ಲಂಘಿಸಿದಲ್ಲಿ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಎಚ್ಚರಿಸಿದರು.

ಅನಿಲ ಟ್ಯಾಂಕರ್ ಗಳು ಅಪಘಾತಕ್ಕಿಡಾದಾಗ ರಸ್ತೆಗಳು ಹೆಚ್ಚು ಕಾಲ ಬಂದ್ ಆಗಿ, ವಾಹನ ಸಂಚಾರ ತೀವ್ರ ಅಡಚಣೆಯುಂಟಾಗುತ್ತದೆ, ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ವಿಪರೀತವಾಗುತ್ತದೆ, ಅಪಘಾತವಾದ ಸಂದರ್ಭದಲ್ಲಿ ಗ್ಯಾಸ್ ಟ್ಯಾಂಕರ್ ಗಳನ್ನು ತೆರವುಗೊಳಿಸಲು ಗ್ಯಾಸ್ ಕಂಪನಿಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಬೇಕು ಎಂಬ ನಿರ್ದೇಶನವನ್ನು ಅವರು ನೀಡಿದರು.

ಟ್ಯಾಂಕರ್ ಗಳಿಗೆ ಕಡ್ಡಾಯವಾಗಿ ಇಬ್ಬರು ಚಾಲಕರಿರಬೇಕು, ರಾತ್ರಿ ವೇಳೆಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು, ಒಂದು ವೇಳೆ ಟ್ಯಾಂಕರ್ ಗಳು ರಾತ್ರಿ ಸಂಚರಿಸಬೇಕಾದಲ್ಲೀ ಜಿಪಿಎಸ್‍ಅನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

6 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

12 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

21 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

24 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago