ನಿಗದಿಪಡಿಸಿರುವ (ಹಗಲು) ವೇಳೆಯಲ್ಲಿಯೇ ಅನಿಲ್ ಟ್ಯಾಂಕರುಗಳು ಸಂಚರಿಸುವ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.
ಅವರು ಫೆ.14ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯನ್ನು ಹಾದುಹೋಗುವ ಹೆದ್ದಾರಿಗಳಲ್ಲಿ ಗ್ಯಾಸ್ ಟ್ಯಾಂಕರ್ ಗಳ ಅಸುರಕ್ಷಿತ ಚಾಲನೆ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತದೆ, ಅಲ್ಲದೇ ಅದು ಸಾರ್ವಜನಿಕರ ಸುಗಮ ಸಂಚಾರಕ್ಕೂ ಅನಾನುಕೂಲವಾಗುತ್ತದೆ, ಒಂದು ವೇಳೆ ಅವುಗಳು ಅಪಘಾತಕ್ಕೀಡಾದಲ್ಲಿ ಹೆಚ್ಚಿನ ಅನಾಹುತವು ಸಂಭವಿಸುತ್ತದೆ, ಈ ಕಾರಣಗಳಿಂದಾಗಿ ಗ್ಯಾಸ್ ಟ್ಯಾಂಕರ್ ಗಳ ಚಾಲನೆಗೆ ನಿಗದಿ ಪಡಿಸಿದ ಅವಧಿಯಲ್ಲಿ ಮಾತ್ರ ಅವುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು, ಅದನ್ನು ಉಲ್ಲಂಘಿಸಿದಲ್ಲಿ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಎಚ್ಚರಿಸಿದರು.
ಅನಿಲ ಟ್ಯಾಂಕರ್ ಗಳು ಅಪಘಾತಕ್ಕಿಡಾದಾಗ ರಸ್ತೆಗಳು ಹೆಚ್ಚು ಕಾಲ ಬಂದ್ ಆಗಿ, ವಾಹನ ಸಂಚಾರ ತೀವ್ರ ಅಡಚಣೆಯುಂಟಾಗುತ್ತದೆ, ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ವಿಪರೀತವಾಗುತ್ತದೆ, ಅಪಘಾತವಾದ ಸಂದರ್ಭದಲ್ಲಿ ಗ್ಯಾಸ್ ಟ್ಯಾಂಕರ್ ಗಳನ್ನು ತೆರವುಗೊಳಿಸಲು ಗ್ಯಾಸ್ ಕಂಪನಿಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಬೇಕು ಎಂಬ ನಿರ್ದೇಶನವನ್ನು ಅವರು ನೀಡಿದರು.
ಟ್ಯಾಂಕರ್ ಗಳಿಗೆ ಕಡ್ಡಾಯವಾಗಿ ಇಬ್ಬರು ಚಾಲಕರಿರಬೇಕು, ರಾತ್ರಿ ವೇಳೆಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು, ಒಂದು ವೇಳೆ ಟ್ಯಾಂಕರ್ ಗಳು ರಾತ್ರಿ ಸಂಚರಿಸಬೇಕಾದಲ್ಲೀ ಜಿಪಿಎಸ್ಅನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…