Advertisement
MIRROR FOCUS

ನಿಗದಿ ಪಡಿಸಿದ ವೇಳೆಯಲ್ಲಿಯೇ ಅನಿಲ ಟ್ಯಾಂಕರ್ ಸಂಚಾರ |ಅಧಿಕಾರಿಗಳ ನಿಗಾಕ್ಕೆ ಜಿಲ್ಲಾಧಿಕಾರಿ ಸೂಚನೆ |

Share

ನಿಗದಿಪಡಿಸಿರುವ (ಹಗಲು) ವೇಳೆಯಲ್ಲಿಯೇ ಅನಿಲ್ ಟ್ಯಾಂಕರುಗಳು ಸಂಚರಿಸುವ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.

ಅವರು ಫೆ.14ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Advertisement

ಜಿಲ್ಲೆಯನ್ನು ಹಾದುಹೋಗುವ ಹೆದ್ದಾರಿಗಳಲ್ಲಿ ಗ್ಯಾಸ್ ಟ್ಯಾಂಕರ್ ಗಳ ಅಸುರಕ್ಷಿತ ಚಾಲನೆ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತದೆ, ಅಲ್ಲದೇ ಅದು ಸಾರ್ವಜನಿಕರ ಸುಗಮ ಸಂಚಾರಕ್ಕೂ ಅನಾನುಕೂಲವಾಗುತ್ತದೆ, ಒಂದು ವೇಳೆ ಅವುಗಳು ಅಪಘಾತಕ್ಕೀಡಾದಲ್ಲಿ ಹೆಚ್ಚಿನ ಅನಾಹುತವು ಸಂಭವಿಸುತ್ತದೆ, ಈ ಕಾರಣಗಳಿಂದಾಗಿ ಗ್ಯಾಸ್ ಟ್ಯಾಂಕರ್ ಗಳ ಚಾಲನೆಗೆ ನಿಗದಿ ಪಡಿಸಿದ ಅವಧಿಯಲ್ಲಿ ಮಾತ್ರ ಅವುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು, ಅದನ್ನು ಉಲ್ಲಂಘಿಸಿದಲ್ಲಿ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಎಚ್ಚರಿಸಿದರು.

ಅನಿಲ ಟ್ಯಾಂಕರ್ ಗಳು ಅಪಘಾತಕ್ಕಿಡಾದಾಗ ರಸ್ತೆಗಳು ಹೆಚ್ಚು ಕಾಲ ಬಂದ್ ಆಗಿ, ವಾಹನ ಸಂಚಾರ ತೀವ್ರ ಅಡಚಣೆಯುಂಟಾಗುತ್ತದೆ, ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ವಿಪರೀತವಾಗುತ್ತದೆ, ಅಪಘಾತವಾದ ಸಂದರ್ಭದಲ್ಲಿ ಗ್ಯಾಸ್ ಟ್ಯಾಂಕರ್ ಗಳನ್ನು ತೆರವುಗೊಳಿಸಲು ಗ್ಯಾಸ್ ಕಂಪನಿಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಬೇಕು ಎಂಬ ನಿರ್ದೇಶನವನ್ನು ಅವರು ನೀಡಿದರು.

Advertisement

ಟ್ಯಾಂಕರ್ ಗಳಿಗೆ ಕಡ್ಡಾಯವಾಗಿ ಇಬ್ಬರು ಚಾಲಕರಿರಬೇಕು, ರಾತ್ರಿ ವೇಳೆಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು, ಒಂದು ವೇಳೆ ಟ್ಯಾಂಕರ್ ಗಳು ರಾತ್ರಿ ಸಂಚರಿಸಬೇಕಾದಲ್ಲೀ ಜಿಪಿಎಸ್‍ಅನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

12 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

15 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

15 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

23 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago