ನಿಗದಿಪಡಿಸಿರುವ (ಹಗಲು) ವೇಳೆಯಲ್ಲಿಯೇ ಅನಿಲ್ ಟ್ಯಾಂಕರುಗಳು ಸಂಚರಿಸುವ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.
ಅವರು ಫೆ.14ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯನ್ನು ಹಾದುಹೋಗುವ ಹೆದ್ದಾರಿಗಳಲ್ಲಿ ಗ್ಯಾಸ್ ಟ್ಯಾಂಕರ್ ಗಳ ಅಸುರಕ್ಷಿತ ಚಾಲನೆ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತದೆ, ಅಲ್ಲದೇ ಅದು ಸಾರ್ವಜನಿಕರ ಸುಗಮ ಸಂಚಾರಕ್ಕೂ ಅನಾನುಕೂಲವಾಗುತ್ತದೆ, ಒಂದು ವೇಳೆ ಅವುಗಳು ಅಪಘಾತಕ್ಕೀಡಾದಲ್ಲಿ ಹೆಚ್ಚಿನ ಅನಾಹುತವು ಸಂಭವಿಸುತ್ತದೆ, ಈ ಕಾರಣಗಳಿಂದಾಗಿ ಗ್ಯಾಸ್ ಟ್ಯಾಂಕರ್ ಗಳ ಚಾಲನೆಗೆ ನಿಗದಿ ಪಡಿಸಿದ ಅವಧಿಯಲ್ಲಿ ಮಾತ್ರ ಅವುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು, ಅದನ್ನು ಉಲ್ಲಂಘಿಸಿದಲ್ಲಿ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಎಚ್ಚರಿಸಿದರು.
ಅನಿಲ ಟ್ಯಾಂಕರ್ ಗಳು ಅಪಘಾತಕ್ಕಿಡಾದಾಗ ರಸ್ತೆಗಳು ಹೆಚ್ಚು ಕಾಲ ಬಂದ್ ಆಗಿ, ವಾಹನ ಸಂಚಾರ ತೀವ್ರ ಅಡಚಣೆಯುಂಟಾಗುತ್ತದೆ, ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ವಿಪರೀತವಾಗುತ್ತದೆ, ಅಪಘಾತವಾದ ಸಂದರ್ಭದಲ್ಲಿ ಗ್ಯಾಸ್ ಟ್ಯಾಂಕರ್ ಗಳನ್ನು ತೆರವುಗೊಳಿಸಲು ಗ್ಯಾಸ್ ಕಂಪನಿಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಬೇಕು ಎಂಬ ನಿರ್ದೇಶನವನ್ನು ಅವರು ನೀಡಿದರು.
ಟ್ಯಾಂಕರ್ ಗಳಿಗೆ ಕಡ್ಡಾಯವಾಗಿ ಇಬ್ಬರು ಚಾಲಕರಿರಬೇಕು, ರಾತ್ರಿ ವೇಳೆಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು, ಒಂದು ವೇಳೆ ಟ್ಯಾಂಕರ್ ಗಳು ರಾತ್ರಿ ಸಂಚರಿಸಬೇಕಾದಲ್ಲೀ ಜಿಪಿಎಸ್ಅನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದರು.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…