Advertisement
ಸುದ್ದಿಗಳು

ಕಿಚ್ಚ ಸುದೀಪ್ ಗೆ ಅವಮಾನ ಮಾಡಿದ ಕಾಂಗ್ರೆಸ್, ಜೆಡಿಎಸ್ ಗೆ ಜನರಿಂದ ತಕ್ಕ ಉತ್ತರ | ಗೌರವ್ ಭಾಟಿಯಾ

Share

ಕನ್ನಡಿಗರ ನೆಚ್ಚಿನ ನಟ ಕಿಚ್ಚ ಸುದೀಪ್ ಅವರ ನಿಲುವನ್ನು ಪ್ರಶ್ನಿಸುವ ಮತ್ತು ಅವರನ್ನು ಅವಮಾನಿಸಿರುವ ಕಾಂಗ್ರೆಸ್- ಜೆಡಿಎಸ್ ಪಕ್ಷಕ್ಕೆ ಪ್ರಜ್ಞಾವಂತ ಜನತೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಹೇಳಿದ್ದಾರೆ.

ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಪಕ್ಷದ ಮುಖಂಡರು ತಮ್ಮ ಮೂಗಿನ ನೇರಕ್ಕೆ ಮಾತನಾಡುತ್ತಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ತಮಗೆ ಬೇಕಾದಂತೆ ವಿಶ್ಲೇಷಿಸಿ ಬಳಸುತ್ತಾರೆ. ಸುದೀಪ್ ಪ್ರಜಾಸತ್ತೆಯ ಸ್ವಾತಂತ್ರ್ಯದ ಆಧಾರದಲ್ಲಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಬೆಂಬಲಿಸುವ ನಿರ್ಣಯ ತೆಗೆದುಕೊಂಡಿದ್ದಾರೆ. ಆದರೆ, ಅವರ ವಿರುದ್ಧ ಇವೆರಡು ಪಕ್ಷಗಳು ವಿರುದ್ಧ ಟೀಕೆ ಮಾಡುತ್ತಿವೆ. ವಿವಿಧ ಏಜೆನ್ಸಿಗಳಿಂದ ತನಿಖೆ ತಪ್ಪಿಸಿಕೊಳ್ಳಲು ಹೀಗೆ ಮಾಡಿದ್ದಾಗಿ ಟೀಕಿಸುತ್ತಿವೆ ಎಂದು ಆಕ್ಷೇಪಿಸಿದರು.

ಭಾರತ್ ಜೋಡೋ ಹೆಸರಿನ ಭಾರತ್ ತೋಡೋ ಯಾತ್ರೆ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜೊತೆ ದೇಶದ್ರೋಹಿಗಳು, ತುಕ್ಡೇ ತುಕ್ಡೇ ಗ್ಯಾಂಗಿನವರು ಹೆಜ್ಜೆ ಹಾಕಿದ್ದರು. ರಾಹುಲ್ ಗಾಂಧಿಯವರಿಗೆ ಜನಪ್ರಿಯತೆ ಇಲ್ಲದ ಕಾರಣ ಸ್ವರಾ ಭಾಸ್ಕರ್ ಅವರಂಥವರು ಬೇಕಾಯಿತೇ ಎಂದು ಪ್ರಶ್ನಿಸಿದರು. ದೇಶದ ವಿರುದ್ಧ ಘೋಷಣೆ ಕೂಗುವವರು ಅವರಿಗೆ ಬೇಕಾಯಿತು ಎಂದು ಆರೋಪಿಸಿದರು.

ಕಾಂಗ್ರೆಸ್- ಜೆಡಿಎಸ್‍ನದು ಅನಾರೋಗ್ಯದ ಮನಸ್ಥಿತಿ, ಬೂಟಾಟಿಕೆ ಎಂದು ಟೀಕಿಸಿದ ಅವರು,  ಸುದೀಪ್  ಪರಿಶ್ರಮದಿಂದ ಸ್ವತಃ ಜನರ ನಡುವೆ ಬೆಳೆದು ಅಪಾರ ಜನಪ್ರಿಯತೆ ಗಳಿಸಿದವರು. ರಾಹುಲ್ ಗಾಂಧಿಯಂತೆ ಕುಟುಂಬದ ಆಧಾರದಲ್ಲಿ ಬಂದವರಲ್ಲ. ಈ ಮೂಲಕ ಬುಡಕಟ್ಟು ಸಮಾಜದವರನ್ನು ಟೀಕಿಸುತ್ತಿದ್ದಾರೆ. ಇದು ಕನ್ನಡಿಗರಿಗೆ ಮಾಡಿದ ಅವಮಾನವಲ್ಲವೇ? ಸುದೀಪ್ ಅವರಂಥ ಸಿನಿತಾರೆ ತಮ್ಮ ಬೆಂಬಲವನ್ನು ಯಾರಿಗೆ ಕೊಡಬೇಕೆಂದು ಆಯ್ಕೆ ಮಾಡುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಅಲ್ಲವೇ? ಎಂದು ಕೇಳಿದರು. ಬಿಜೆಪಿ ರಾಷ್ಟ್ರಪತಿ ಸ್ಥಾನವನ್ನು ಬುಡುಕಟ್ಟು ಸಮುದಾಯಕ್ಕೆ ಕೊಟ್ಟಿದೆ ಎಂದು ನೆನಪಿಸಿದರು.

ಕರ್ನಾಟಕದ ಜನತೆ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಕಡೆ ಆದ್ಯತೆ ಕೊಟ್ಟು ಬಿಜೆಪಿಯ ಕಡೆ ಒಲವು ತೋರುತ್ತಿದ್ದಾರೆ. ದುರ್ಬಲ ಸಮುದಾಯಕ್ಕೆ ಒಳ ಮೀಸಲಾತಿ ಕೊಟ್ಟ ಸರಕಾರ ನಮ್ಮ ಬಿಜೆಪಿಯದು. ಸುದೀಪ್ ಬೆಂಬಲದಿಂದ ಕಾಂಗ್ರೆಸ್ -ಜೆಡಿಎಸ್ ಇನ್ನಷ್ಟು ದುರ್ಬಲವಾಗುವ ಆತಂಕ ಅವೆರಡು ಪಕ್ಷದವರಲ್ಲಿದೆ. ಅವರ ವಿರುದ್ಧ ಮಾಡಿದ ಟೀಕೆ ಕನ್ನಡಿಗರಿಗೆ ಮಾಡಿದ ಅವಮಾನವಾಗಿದೆ. ಈ ಚುನಾವಣಾ ಸಮರ ರಾಷ್ಟ್ರಹಿತ ವಿಚಾರಧಾರೆಯ ಆಧಾರದಲ್ಲಿ ಮುಂದುವರಿಯಲಿದೆ ಎಂದು ಅವರು ತಿಳಿಸಿದರು. ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

2 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

3 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

4 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

18 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

18 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago