3 ದಿನದಲ್ಲಿ ನೂರಾರು ಎಕರೆ ಕಾಡಿಗೆ ಹಾನಿ | ಗೌರಿಬಿದನೂರು ಎಮ್ಮೆಗುಡ್ಡಕ್ಕೆ ಕಿಡಿಗೇಡಿಗಳಿಂದ ಬೆಂಕಿ | ಅನೇಕ ಪ್ರಬೇಧದ ಗಿಡಗಳಿಗೆ ಹಾನಿ |

April 12, 2022
9:58 PM

ಗೌರಿಬಿದನೂರು ಬಳಿಯ ಎಮ್ಮೆ ಗುಡ್ಡ ಪ್ರದೇಶದಲ್ಲಿ ಅರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಾಕಿದ ಕಾರಣ ನೂರಾರು  ಎಕರೆ ಪ್ರದೇಶದ ಅರಣ್ಯಕ್ಕೆ ಹಾನಿಯಾಗಿದೆ. ಇಲ್ಲಿರುವ ಅನೇಕ ಪ್ರಬೇಧದ ಗಿಡಗಳಿಗೆ ಹಾನಿಯಾಗಿದೆ ಎಂದು ಪರಿಸರವಾದಿ ಚೌಡಪ್ಪ ಹೇಳಿದ್ದಾರೆ.

Advertisement
Advertisement
Advertisement
Advertisement

ಕಳೆದ ಮೂರು ದಿನಗಳಿಂದ ಎಮ್ಮೆ ಗುಡ್ಡ ಅರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಾಕುತ್ತಿದ್ದರು. ಹೀಗಾಗಿ ಸಂಬಂದಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು, ಪರಿಸರ ಪ್ರೇಮಿಗಳೊಂದಿಗೆ ಭೇಟಿ ನೀಡಿದರು. ಈ ಸಂದರ್ಭ ವಿಶೇಷ ತಂಡ ರಚನೆ ಮಾಡಿ ಪರಿಸರ ರಕ್ಷಣೆಯ ಕಡೆಗೆ ಗಮನಹರಿಸುವಂತೆ ಪರಿಸರ ಪ್ರೇಮಿಗಳು ಮನವಿ ಮಾಡಿದರು.  ಇಲಾಖಾ ಅಧಿಕಾರಿಗಳು  ಕೂಡಲೇ ಗಮನಹರಿಸಿ, ಅರಣ್ಯ ಉಳಿಸಬೇಕೆಂದು ಪರಿಸರ ಪ್ರೇಮಿಗಳು ಮನವಿ ಮಾಡಿದರು.

Advertisement

ಎಮ್ಮೆ ಗುಡ್ಡೆ ಈ ಪ್ರದೇಶದಲ್ಲಿ ಸುಮಾರು 400 ಎಕರೆ ಅರಣ್ಯ ಪ್ರದೇಶವು ಇದ್ದು ಪಶ್ಚಿಮ ಘಟ್ಟದ ವಿಶೇಷ ಗಿಡಗಳು ಇರುವ ಪ್ರದೇಶವೂ ಇದಾಗಿದೆ. ಈಚೆಗೆ ಕಿಡಿಗೇಡಿಗಳು ಕಾಡಿಗೆ ಬೆಂಕಿ ಹಚ್ಚುತ್ತಿರುವ ಕಾರಣದಿಂದ ಇಲ್ಲಿನ  ಜೀವವೈವಿಧ್ಯಕ್ಕೆ ಹಾನಿಯಾಗಿದೆ. ಹೀಗಾಗಿ ಜನರಿಗೆ ಜಾಗೃತಿ ಹಾಗೂ ಇಲಾಖಾ ಅಧಿಕಾರಿಗಳ ಎಚ್ಚರಿಗೆ ಅಗತ್ಯವಾಗಿ ಬೇಕಿದೆ ಎಂದು ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ | ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ.16 |
February 26, 2025
6:49 AM
by: The Rural Mirror ಸುದ್ದಿಜಾಲ
ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ 22 ಕೋಟಿ ರೂಪಾಯಿ ಬಿಡುಗಡೆ | ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಚಾಲನೆ
February 26, 2025
6:40 AM
by: The Rural Mirror ಸುದ್ದಿಜಾಲ
ಮಹಾಕುಂಭಮೇಳ ಸಂಪನ್ನ | ಮಹಾಶಿವರಾತ್ರಿಯಂದು ಕೊನೆಯ ಪುಣ್ಯಸ್ನಾನ
February 26, 2025
6:30 AM
by: The Rural Mirror ಸುದ್ದಿಜಾಲ
ಮಹಿಳಾ ಸ್ವಾವಲಂಬನೆಗೆ ಆದ್ಯತೆ | ಶಿವಮೊಗ್ಗದಲ್ಲಿ ‘ಅವ್ವ ಸಂತೆ’ ಆಯೋಜನೆ
February 26, 2025
6:26 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror