ಗೌರಿಬಿದನೂರು ಬಳಿಯ ಎಮ್ಮೆ ಗುಡ್ಡ ಪ್ರದೇಶದಲ್ಲಿ ಅರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಾಕಿದ ಕಾರಣ ನೂರಾರು ಎಕರೆ ಪ್ರದೇಶದ ಅರಣ್ಯಕ್ಕೆ ಹಾನಿಯಾಗಿದೆ. ಇಲ್ಲಿರುವ ಅನೇಕ ಪ್ರಬೇಧದ ಗಿಡಗಳಿಗೆ ಹಾನಿಯಾಗಿದೆ ಎಂದು ಪರಿಸರವಾದಿ ಚೌಡಪ್ಪ ಹೇಳಿದ್ದಾರೆ.
ಕಳೆದ ಮೂರು ದಿನಗಳಿಂದ ಎಮ್ಮೆ ಗುಡ್ಡ ಅರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಾಕುತ್ತಿದ್ದರು. ಹೀಗಾಗಿ ಸಂಬಂದಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು, ಪರಿಸರ ಪ್ರೇಮಿಗಳೊಂದಿಗೆ ಭೇಟಿ ನೀಡಿದರು. ಈ ಸಂದರ್ಭ ವಿಶೇಷ ತಂಡ ರಚನೆ ಮಾಡಿ ಪರಿಸರ ರಕ್ಷಣೆಯ ಕಡೆಗೆ ಗಮನಹರಿಸುವಂತೆ ಪರಿಸರ ಪ್ರೇಮಿಗಳು ಮನವಿ ಮಾಡಿದರು. ಇಲಾಖಾ ಅಧಿಕಾರಿಗಳು ಕೂಡಲೇ ಗಮನಹರಿಸಿ, ಅರಣ್ಯ ಉಳಿಸಬೇಕೆಂದು ಪರಿಸರ ಪ್ರೇಮಿಗಳು ಮನವಿ ಮಾಡಿದರು.
ಎಮ್ಮೆ ಗುಡ್ಡೆ ಈ ಪ್ರದೇಶದಲ್ಲಿ ಸುಮಾರು 400 ಎಕರೆ ಅರಣ್ಯ ಪ್ರದೇಶವು ಇದ್ದು ಪಶ್ಚಿಮ ಘಟ್ಟದ ವಿಶೇಷ ಗಿಡಗಳು ಇರುವ ಪ್ರದೇಶವೂ ಇದಾಗಿದೆ. ಈಚೆಗೆ ಕಿಡಿಗೇಡಿಗಳು ಕಾಡಿಗೆ ಬೆಂಕಿ ಹಚ್ಚುತ್ತಿರುವ ಕಾರಣದಿಂದ ಇಲ್ಲಿನ ಜೀವವೈವಿಧ್ಯಕ್ಕೆ ಹಾನಿಯಾಗಿದೆ. ಹೀಗಾಗಿ ಜನರಿಗೆ ಜಾಗೃತಿ ಹಾಗೂ ಇಲಾಖಾ ಅಧಿಕಾರಿಗಳ ಎಚ್ಚರಿಗೆ ಅಗತ್ಯವಾಗಿ ಬೇಕಿದೆ ಎಂದು ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…