ಗೌರಿಬಿದನೂರು ಬಳಿಯ ಎಮ್ಮೆ ಗುಡ್ಡ ಪ್ರದೇಶದಲ್ಲಿ ಅರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಾಕಿದ ಕಾರಣ ನೂರಾರು ಎಕರೆ ಪ್ರದೇಶದ ಅರಣ್ಯಕ್ಕೆ ಹಾನಿಯಾಗಿದೆ. ಇಲ್ಲಿರುವ ಅನೇಕ ಪ್ರಬೇಧದ ಗಿಡಗಳಿಗೆ ಹಾನಿಯಾಗಿದೆ ಎಂದು ಪರಿಸರವಾದಿ ಚೌಡಪ್ಪ ಹೇಳಿದ್ದಾರೆ.
ಕಳೆದ ಮೂರು ದಿನಗಳಿಂದ ಎಮ್ಮೆ ಗುಡ್ಡ ಅರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಾಕುತ್ತಿದ್ದರು. ಹೀಗಾಗಿ ಸಂಬಂದಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು, ಪರಿಸರ ಪ್ರೇಮಿಗಳೊಂದಿಗೆ ಭೇಟಿ ನೀಡಿದರು. ಈ ಸಂದರ್ಭ ವಿಶೇಷ ತಂಡ ರಚನೆ ಮಾಡಿ ಪರಿಸರ ರಕ್ಷಣೆಯ ಕಡೆಗೆ ಗಮನಹರಿಸುವಂತೆ ಪರಿಸರ ಪ್ರೇಮಿಗಳು ಮನವಿ ಮಾಡಿದರು. ಇಲಾಖಾ ಅಧಿಕಾರಿಗಳು ಕೂಡಲೇ ಗಮನಹರಿಸಿ, ಅರಣ್ಯ ಉಳಿಸಬೇಕೆಂದು ಪರಿಸರ ಪ್ರೇಮಿಗಳು ಮನವಿ ಮಾಡಿದರು.
ಎಮ್ಮೆ ಗುಡ್ಡೆ ಈ ಪ್ರದೇಶದಲ್ಲಿ ಸುಮಾರು 400 ಎಕರೆ ಅರಣ್ಯ ಪ್ರದೇಶವು ಇದ್ದು ಪಶ್ಚಿಮ ಘಟ್ಟದ ವಿಶೇಷ ಗಿಡಗಳು ಇರುವ ಪ್ರದೇಶವೂ ಇದಾಗಿದೆ. ಈಚೆಗೆ ಕಿಡಿಗೇಡಿಗಳು ಕಾಡಿಗೆ ಬೆಂಕಿ ಹಚ್ಚುತ್ತಿರುವ ಕಾರಣದಿಂದ ಇಲ್ಲಿನ ಜೀವವೈವಿಧ್ಯಕ್ಕೆ ಹಾನಿಯಾಗಿದೆ. ಹೀಗಾಗಿ ಜನರಿಗೆ ಜಾಗೃತಿ ಹಾಗೂ ಇಲಾಖಾ ಅಧಿಕಾರಿಗಳ ಎಚ್ಚರಿಗೆ ಅಗತ್ಯವಾಗಿ ಬೇಕಿದೆ ಎಂದು ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.
ಮಹಾಕುಂಭ ಮೇಳದ ಮೂಲಕ ಹೊಸದೊಂದು ಸಂಕಲ್ಪವನ್ನು ಜನರು ಮಾಡಬೇಕು. ಈ ಬಾರಿ ಕುಂಭಮೇಳದಲ್ಲಿ…
ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು…
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ…
ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ…
ಶಿವಮೊಗ್ಗ ಜಿಲ್ಲೆಯ ಸಾಗರದ ಜೀವನ್ಮುಖಿ ಸಂಘಟನೆ ಹಾಗೂ ಭೀಮನಕೋಟೆಯ ಚರಕ ಮಹಿಳಾ ವಿವಿಧೋದ್ದೇಶ…
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…