Advertisement
ಸುದ್ದಿಗಳು

3 ದಿನದಲ್ಲಿ ನೂರಾರು ಎಕರೆ ಕಾಡಿಗೆ ಹಾನಿ | ಗೌರಿಬಿದನೂರು ಎಮ್ಮೆಗುಡ್ಡಕ್ಕೆ ಕಿಡಿಗೇಡಿಗಳಿಂದ ಬೆಂಕಿ | ಅನೇಕ ಪ್ರಬೇಧದ ಗಿಡಗಳಿಗೆ ಹಾನಿ |

Share

ಗೌರಿಬಿದನೂರು ಬಳಿಯ ಎಮ್ಮೆ ಗುಡ್ಡ ಪ್ರದೇಶದಲ್ಲಿ ಅರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಾಕಿದ ಕಾರಣ ನೂರಾರು  ಎಕರೆ ಪ್ರದೇಶದ ಅರಣ್ಯಕ್ಕೆ ಹಾನಿಯಾಗಿದೆ. ಇಲ್ಲಿರುವ ಅನೇಕ ಪ್ರಬೇಧದ ಗಿಡಗಳಿಗೆ ಹಾನಿಯಾಗಿದೆ ಎಂದು ಪರಿಸರವಾದಿ ಚೌಡಪ್ಪ ಹೇಳಿದ್ದಾರೆ.

ಕಳೆದ ಮೂರು ದಿನಗಳಿಂದ ಎಮ್ಮೆ ಗುಡ್ಡ ಅರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಾಕುತ್ತಿದ್ದರು. ಹೀಗಾಗಿ ಸಂಬಂದಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು, ಪರಿಸರ ಪ್ರೇಮಿಗಳೊಂದಿಗೆ ಭೇಟಿ ನೀಡಿದರು. ಈ ಸಂದರ್ಭ ವಿಶೇಷ ತಂಡ ರಚನೆ ಮಾಡಿ ಪರಿಸರ ರಕ್ಷಣೆಯ ಕಡೆಗೆ ಗಮನಹರಿಸುವಂತೆ ಪರಿಸರ ಪ್ರೇಮಿಗಳು ಮನವಿ ಮಾಡಿದರು.  ಇಲಾಖಾ ಅಧಿಕಾರಿಗಳು  ಕೂಡಲೇ ಗಮನಹರಿಸಿ, ಅರಣ್ಯ ಉಳಿಸಬೇಕೆಂದು ಪರಿಸರ ಪ್ರೇಮಿಗಳು ಮನವಿ ಮಾಡಿದರು.

ಎಮ್ಮೆ ಗುಡ್ಡೆ ಈ ಪ್ರದೇಶದಲ್ಲಿ ಸುಮಾರು 400 ಎಕರೆ ಅರಣ್ಯ ಪ್ರದೇಶವು ಇದ್ದು ಪಶ್ಚಿಮ ಘಟ್ಟದ ವಿಶೇಷ ಗಿಡಗಳು ಇರುವ ಪ್ರದೇಶವೂ ಇದಾಗಿದೆ. ಈಚೆಗೆ ಕಿಡಿಗೇಡಿಗಳು ಕಾಡಿಗೆ ಬೆಂಕಿ ಹಚ್ಚುತ್ತಿರುವ ಕಾರಣದಿಂದ ಇಲ್ಲಿನ  ಜೀವವೈವಿಧ್ಯಕ್ಕೆ ಹಾನಿಯಾಗಿದೆ. ಹೀಗಾಗಿ ಜನರಿಗೆ ಜಾಗೃತಿ ಹಾಗೂ ಇಲಾಖಾ ಅಧಿಕಾರಿಗಳ ಎಚ್ಚರಿಗೆ ಅಗತ್ಯವಾಗಿ ಬೇಕಿದೆ ಎಂದು ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

26 minutes ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

8 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago