ಗೌರಿಬಿದನೂರು ಬಳಿಯ ಎಮ್ಮೆ ಗುಡ್ಡ ಪ್ರದೇಶದಲ್ಲಿ ಅರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಾಕಿದ ಕಾರಣ ನೂರಾರು ಎಕರೆ ಪ್ರದೇಶದ ಅರಣ್ಯಕ್ಕೆ ಹಾನಿಯಾಗಿದೆ. ಇಲ್ಲಿರುವ ಅನೇಕ ಪ್ರಬೇಧದ ಗಿಡಗಳಿಗೆ ಹಾನಿಯಾಗಿದೆ ಎಂದು ಪರಿಸರವಾದಿ ಚೌಡಪ್ಪ ಹೇಳಿದ್ದಾರೆ.
ಕಳೆದ ಮೂರು ದಿನಗಳಿಂದ ಎಮ್ಮೆ ಗುಡ್ಡ ಅರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಾಕುತ್ತಿದ್ದರು. ಹೀಗಾಗಿ ಸಂಬಂದಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು, ಪರಿಸರ ಪ್ರೇಮಿಗಳೊಂದಿಗೆ ಭೇಟಿ ನೀಡಿದರು. ಈ ಸಂದರ್ಭ ವಿಶೇಷ ತಂಡ ರಚನೆ ಮಾಡಿ ಪರಿಸರ ರಕ್ಷಣೆಯ ಕಡೆಗೆ ಗಮನಹರಿಸುವಂತೆ ಪರಿಸರ ಪ್ರೇಮಿಗಳು ಮನವಿ ಮಾಡಿದರು. ಇಲಾಖಾ ಅಧಿಕಾರಿಗಳು ಕೂಡಲೇ ಗಮನಹರಿಸಿ, ಅರಣ್ಯ ಉಳಿಸಬೇಕೆಂದು ಪರಿಸರ ಪ್ರೇಮಿಗಳು ಮನವಿ ಮಾಡಿದರು.
ಎಮ್ಮೆ ಗುಡ್ಡೆ ಈ ಪ್ರದೇಶದಲ್ಲಿ ಸುಮಾರು 400 ಎಕರೆ ಅರಣ್ಯ ಪ್ರದೇಶವು ಇದ್ದು ಪಶ್ಚಿಮ ಘಟ್ಟದ ವಿಶೇಷ ಗಿಡಗಳು ಇರುವ ಪ್ರದೇಶವೂ ಇದಾಗಿದೆ. ಈಚೆಗೆ ಕಿಡಿಗೇಡಿಗಳು ಕಾಡಿಗೆ ಬೆಂಕಿ ಹಚ್ಚುತ್ತಿರುವ ಕಾರಣದಿಂದ ಇಲ್ಲಿನ ಜೀವವೈವಿಧ್ಯಕ್ಕೆ ಹಾನಿಯಾಗಿದೆ. ಹೀಗಾಗಿ ಜನರಿಗೆ ಜಾಗೃತಿ ಹಾಗೂ ಇಲಾಖಾ ಅಧಿಕಾರಿಗಳ ಎಚ್ಚರಿಗೆ ಅಗತ್ಯವಾಗಿ ಬೇಕಿದೆ ಎಂದು ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…