Advertisement
Opinion

#Bhagavadgeeta | ಹಿಂದೂ ಸಂಪ್ರದಾಯ, ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಗೊಳಿಸಲು ಸಜ್ಜು | ಕೋಲ್ಕತ್ತಾದಲ್ಲಿ ಲಕ್ಷಾಂತರ ಜನರಿಂದ ಭಗವದ್ಗೀತೆ ಪಠಣ ಕಾರ್ಯ |

Share

RSS ಹಿಂದೂ ಧರ್ಮ ಉಳಿವಿಗಾಗಿ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಿರುತ್ತದೆ. ಮುಂದಿನ ವರ್ಷ ಲೋಕಸಭೆ ಚುನಾವಣೆ ಬರುವ ಹಿನ್ನೆಲೆಯಲ್ಲಿ ಕೂಡ ಇದು ಬಿಜೆಪಿಗೆ ಬಲ ತುಂಬುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘನ ಶಾಖೆಯಾದ ಅಖಿಲ ಭಾರತೀಯ ಸಂಸ್ಕೃತ ಪರಿಷತ್ತು ಕೋಲ್ಕತ್ತಾದ ಬ್ರಿಗೇಡ್ ಮೈದಾನಲ್ಲಿ ಭಗವದ್ಗೀತೆ ಪಠಣ ಕಾರ್ಯಕ್ರಮವನ್ನು ಆಯೋಜಿಸಿದೆ.

ಮೂಲಗಳ ಪ್ರಕಾರ, ದೇಶದ ರಾಷ್ಟ್ರಪತಿ  ದ್ರೌಪದಿ ಮುರ್ಮು, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತದೆ. ಲೋಕಸಭೆ ಚುನಾವಣೆಗೂ ಮುನ್ನ ಬೃಹತ್ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮವು ಡಿಸೆಂಬರ್ 24ರಂದು ನಡೆಯಲಿದೆ, ಹಿಂದೂ ಸಂಪ್ರದಾಯ, ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಗೊಳಿಸಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕಾರ್ಯಕ್ರಮ ಮೂರು ಗಂಟೆಗಳ ಕಾಲ ಇರಲಿದೆ, ಇದರಲ್ಲಿ ಐದು ಅಧ್ಯಾಯಗಳನ್ನು ತಾವು ಓದುವುದಾಗಿ ಅಖಿಲ ಭಾರತೀಯ ಸಂಸ್ಕೃತ ಪರಿಷತ್ತಿನ ಗೌರವ್ ತಿಳಿಸಿದ್ದಾರೆ. ಉತ್ತರ ಹಾಗೂ ಪಶ್ಚಿಮ ಬಂಗಾಳ ಹಾಗೂ ಹೊರಗಡೆಯಿಂದಲೂ ಜನರು ಆಗಮಿಸುತ್ತಿದ್ದಾರೆ, ಡಿಸೆಂಬರ್ 24 ರಂದು ಗೀತಾ ಜಯಂತಿಯಂದು ಈ ಕಾರ್ಯಕ್ರಮ ನಡೆಯಲಿದೆ.

ಬ್ರಿಗೇಡ್ ಮೈದಾನವು ಫೋರ್ಟ್​ ವಿಲಿಯಂ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ಇಲ್ಲಿ ಯಾವುದೇ ಕಾರ್ಯಕ್ರಮಕ್ಕೆ ಸೇನೆಯ ಅನುಮತಿ ಬೇಕಾಗುತ್ತದೆ. ಮೂಲಗಳ ಪ್ರಕಾರ ಈಗಾಗಲೇ ಸೇನೆಯಿಂದ ಅನುಮತಿ ಪಡೆಯಲಾಗಿದೆ. ವಿವಿಧ ಮಠ, ಮಂದಿರಗಳಿಗೂ ಆಹ್ವಾನ ನೀಡಲಾಗುತ್ತದೆ. ಬ್ರಿಗೇಡ್​ನಲ್ಲಿ ಗೀತಾ ವಾಚನದ ಕುರಿತು ಸಿಪಿಎಂ ಮುಖಂಡ ಸುಜನ್ ಚಕ್ರವರ್ತಿ ಮಾತನಾಡಿ, ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಮತಾಂಧತೆ ಹಾಗೂ ಕೋಮುವಾದವನ್ನು ತುಂಬಲು ಬಿಜೆಪಿ ಸಿದ್ಧವಾಗಿದೆ. ವರ್ಷಕ್ಕೆ 2 ಕೋಟಿ ರೂ ಉದ್ಯೋಗಗಳ ಭರವಸೆ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದಾರೆ. ಮತ್ತೊಂದೆಡೆ, ತೃಣಮೂಲ ವಕ್ತಾರ ಕುನಾಲ್ ಘೋಷ್ ಮಾತನಾಡಿ, ಗೀತಾವನ್ನು ರಾಜಕೀಯಕ್ಕೆ ತರಬೇಡಿ ಎಂದು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

24 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago