Advertisement
Opinion

#Bhagavadgeeta | ಹಿಂದೂ ಸಂಪ್ರದಾಯ, ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಗೊಳಿಸಲು ಸಜ್ಜು | ಕೋಲ್ಕತ್ತಾದಲ್ಲಿ ಲಕ್ಷಾಂತರ ಜನರಿಂದ ಭಗವದ್ಗೀತೆ ಪಠಣ ಕಾರ್ಯ |

Share

RSS ಹಿಂದೂ ಧರ್ಮ ಉಳಿವಿಗಾಗಿ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಿರುತ್ತದೆ. ಮುಂದಿನ ವರ್ಷ ಲೋಕಸಭೆ ಚುನಾವಣೆ ಬರುವ ಹಿನ್ನೆಲೆಯಲ್ಲಿ ಕೂಡ ಇದು ಬಿಜೆಪಿಗೆ ಬಲ ತುಂಬುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘನ ಶಾಖೆಯಾದ ಅಖಿಲ ಭಾರತೀಯ ಸಂಸ್ಕೃತ ಪರಿಷತ್ತು ಕೋಲ್ಕತ್ತಾದ ಬ್ರಿಗೇಡ್ ಮೈದಾನಲ್ಲಿ ಭಗವದ್ಗೀತೆ ಪಠಣ ಕಾರ್ಯಕ್ರಮವನ್ನು ಆಯೋಜಿಸಿದೆ.

ಮೂಲಗಳ ಪ್ರಕಾರ, ದೇಶದ ರಾಷ್ಟ್ರಪತಿ  ದ್ರೌಪದಿ ಮುರ್ಮು, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತದೆ. ಲೋಕಸಭೆ ಚುನಾವಣೆಗೂ ಮುನ್ನ ಬೃಹತ್ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮವು ಡಿಸೆಂಬರ್ 24ರಂದು ನಡೆಯಲಿದೆ, ಹಿಂದೂ ಸಂಪ್ರದಾಯ, ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಗೊಳಿಸಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕಾರ್ಯಕ್ರಮ ಮೂರು ಗಂಟೆಗಳ ಕಾಲ ಇರಲಿದೆ, ಇದರಲ್ಲಿ ಐದು ಅಧ್ಯಾಯಗಳನ್ನು ತಾವು ಓದುವುದಾಗಿ ಅಖಿಲ ಭಾರತೀಯ ಸಂಸ್ಕೃತ ಪರಿಷತ್ತಿನ ಗೌರವ್ ತಿಳಿಸಿದ್ದಾರೆ. ಉತ್ತರ ಹಾಗೂ ಪಶ್ಚಿಮ ಬಂಗಾಳ ಹಾಗೂ ಹೊರಗಡೆಯಿಂದಲೂ ಜನರು ಆಗಮಿಸುತ್ತಿದ್ದಾರೆ, ಡಿಸೆಂಬರ್ 24 ರಂದು ಗೀತಾ ಜಯಂತಿಯಂದು ಈ ಕಾರ್ಯಕ್ರಮ ನಡೆಯಲಿದೆ.

ಬ್ರಿಗೇಡ್ ಮೈದಾನವು ಫೋರ್ಟ್​ ವಿಲಿಯಂ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ಇಲ್ಲಿ ಯಾವುದೇ ಕಾರ್ಯಕ್ರಮಕ್ಕೆ ಸೇನೆಯ ಅನುಮತಿ ಬೇಕಾಗುತ್ತದೆ. ಮೂಲಗಳ ಪ್ರಕಾರ ಈಗಾಗಲೇ ಸೇನೆಯಿಂದ ಅನುಮತಿ ಪಡೆಯಲಾಗಿದೆ. ವಿವಿಧ ಮಠ, ಮಂದಿರಗಳಿಗೂ ಆಹ್ವಾನ ನೀಡಲಾಗುತ್ತದೆ. ಬ್ರಿಗೇಡ್​ನಲ್ಲಿ ಗೀತಾ ವಾಚನದ ಕುರಿತು ಸಿಪಿಎಂ ಮುಖಂಡ ಸುಜನ್ ಚಕ್ರವರ್ತಿ ಮಾತನಾಡಿ, ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಮತಾಂಧತೆ ಹಾಗೂ ಕೋಮುವಾದವನ್ನು ತುಂಬಲು ಬಿಜೆಪಿ ಸಿದ್ಧವಾಗಿದೆ. ವರ್ಷಕ್ಕೆ 2 ಕೋಟಿ ರೂ ಉದ್ಯೋಗಗಳ ಭರವಸೆ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದಾರೆ. ಮತ್ತೊಂದೆಡೆ, ತೃಣಮೂಲ ವಕ್ತಾರ ಕುನಾಲ್ ಘೋಷ್ ಮಾತನಾಡಿ, ಗೀತಾವನ್ನು ರಾಜಕೀಯಕ್ಕೆ ತರಬೇಡಿ ಎಂದು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

5 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

5 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

19 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

19 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago