Advertisement
Opinion

#Bhagavadgeeta | ಹಿಂದೂ ಸಂಪ್ರದಾಯ, ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಗೊಳಿಸಲು ಸಜ್ಜು | ಕೋಲ್ಕತ್ತಾದಲ್ಲಿ ಲಕ್ಷಾಂತರ ಜನರಿಂದ ಭಗವದ್ಗೀತೆ ಪಠಣ ಕಾರ್ಯ |

Share

RSS ಹಿಂದೂ ಧರ್ಮ ಉಳಿವಿಗಾಗಿ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಿರುತ್ತದೆ. ಮುಂದಿನ ವರ್ಷ ಲೋಕಸಭೆ ಚುನಾವಣೆ ಬರುವ ಹಿನ್ನೆಲೆಯಲ್ಲಿ ಕೂಡ ಇದು ಬಿಜೆಪಿಗೆ ಬಲ ತುಂಬುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘನ ಶಾಖೆಯಾದ ಅಖಿಲ ಭಾರತೀಯ ಸಂಸ್ಕೃತ ಪರಿಷತ್ತು ಕೋಲ್ಕತ್ತಾದ ಬ್ರಿಗೇಡ್ ಮೈದಾನಲ್ಲಿ ಭಗವದ್ಗೀತೆ ಪಠಣ ಕಾರ್ಯಕ್ರಮವನ್ನು ಆಯೋಜಿಸಿದೆ.

ಮೂಲಗಳ ಪ್ರಕಾರ, ದೇಶದ ರಾಷ್ಟ್ರಪತಿ  ದ್ರೌಪದಿ ಮುರ್ಮು, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತದೆ. ಲೋಕಸಭೆ ಚುನಾವಣೆಗೂ ಮುನ್ನ ಬೃಹತ್ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮವು ಡಿಸೆಂಬರ್ 24ರಂದು ನಡೆಯಲಿದೆ, ಹಿಂದೂ ಸಂಪ್ರದಾಯ, ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಗೊಳಿಸಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕಾರ್ಯಕ್ರಮ ಮೂರು ಗಂಟೆಗಳ ಕಾಲ ಇರಲಿದೆ, ಇದರಲ್ಲಿ ಐದು ಅಧ್ಯಾಯಗಳನ್ನು ತಾವು ಓದುವುದಾಗಿ ಅಖಿಲ ಭಾರತೀಯ ಸಂಸ್ಕೃತ ಪರಿಷತ್ತಿನ ಗೌರವ್ ತಿಳಿಸಿದ್ದಾರೆ. ಉತ್ತರ ಹಾಗೂ ಪಶ್ಚಿಮ ಬಂಗಾಳ ಹಾಗೂ ಹೊರಗಡೆಯಿಂದಲೂ ಜನರು ಆಗಮಿಸುತ್ತಿದ್ದಾರೆ, ಡಿಸೆಂಬರ್ 24 ರಂದು ಗೀತಾ ಜಯಂತಿಯಂದು ಈ ಕಾರ್ಯಕ್ರಮ ನಡೆಯಲಿದೆ.

ಬ್ರಿಗೇಡ್ ಮೈದಾನವು ಫೋರ್ಟ್​ ವಿಲಿಯಂ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ಇಲ್ಲಿ ಯಾವುದೇ ಕಾರ್ಯಕ್ರಮಕ್ಕೆ ಸೇನೆಯ ಅನುಮತಿ ಬೇಕಾಗುತ್ತದೆ. ಮೂಲಗಳ ಪ್ರಕಾರ ಈಗಾಗಲೇ ಸೇನೆಯಿಂದ ಅನುಮತಿ ಪಡೆಯಲಾಗಿದೆ. ವಿವಿಧ ಮಠ, ಮಂದಿರಗಳಿಗೂ ಆಹ್ವಾನ ನೀಡಲಾಗುತ್ತದೆ. ಬ್ರಿಗೇಡ್​ನಲ್ಲಿ ಗೀತಾ ವಾಚನದ ಕುರಿತು ಸಿಪಿಎಂ ಮುಖಂಡ ಸುಜನ್ ಚಕ್ರವರ್ತಿ ಮಾತನಾಡಿ, ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಮತಾಂಧತೆ ಹಾಗೂ ಕೋಮುವಾದವನ್ನು ತುಂಬಲು ಬಿಜೆಪಿ ಸಿದ್ಧವಾಗಿದೆ. ವರ್ಷಕ್ಕೆ 2 ಕೋಟಿ ರೂ ಉದ್ಯೋಗಗಳ ಭರವಸೆ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದಾರೆ. ಮತ್ತೊಂದೆಡೆ, ತೃಣಮೂಲ ವಕ್ತಾರ ಕುನಾಲ್ ಘೋಷ್ ಮಾತನಾಡಿ, ಗೀತಾವನ್ನು ರಾಜಕೀಯಕ್ಕೆ ತರಬೇಡಿ ಎಂದು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago