Advertisement
Opinion

#Bhagavadgeeta | ಹಿಂದೂ ಸಂಪ್ರದಾಯ, ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಗೊಳಿಸಲು ಸಜ್ಜು | ಕೋಲ್ಕತ್ತಾದಲ್ಲಿ ಲಕ್ಷಾಂತರ ಜನರಿಂದ ಭಗವದ್ಗೀತೆ ಪಠಣ ಕಾರ್ಯ |

Share

RSS ಹಿಂದೂ ಧರ್ಮ ಉಳಿವಿಗಾಗಿ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಿರುತ್ತದೆ. ಮುಂದಿನ ವರ್ಷ ಲೋಕಸಭೆ ಚುನಾವಣೆ ಬರುವ ಹಿನ್ನೆಲೆಯಲ್ಲಿ ಕೂಡ ಇದು ಬಿಜೆಪಿಗೆ ಬಲ ತುಂಬುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘನ ಶಾಖೆಯಾದ ಅಖಿಲ ಭಾರತೀಯ ಸಂಸ್ಕೃತ ಪರಿಷತ್ತು ಕೋಲ್ಕತ್ತಾದ ಬ್ರಿಗೇಡ್ ಮೈದಾನಲ್ಲಿ ಭಗವದ್ಗೀತೆ ಪಠಣ ಕಾರ್ಯಕ್ರಮವನ್ನು ಆಯೋಜಿಸಿದೆ.

ಮೂಲಗಳ ಪ್ರಕಾರ, ದೇಶದ ರಾಷ್ಟ್ರಪತಿ  ದ್ರೌಪದಿ ಮುರ್ಮು, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತದೆ. ಲೋಕಸಭೆ ಚುನಾವಣೆಗೂ ಮುನ್ನ ಬೃಹತ್ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮವು ಡಿಸೆಂಬರ್ 24ರಂದು ನಡೆಯಲಿದೆ, ಹಿಂದೂ ಸಂಪ್ರದಾಯ, ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಗೊಳಿಸಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕಾರ್ಯಕ್ರಮ ಮೂರು ಗಂಟೆಗಳ ಕಾಲ ಇರಲಿದೆ, ಇದರಲ್ಲಿ ಐದು ಅಧ್ಯಾಯಗಳನ್ನು ತಾವು ಓದುವುದಾಗಿ ಅಖಿಲ ಭಾರತೀಯ ಸಂಸ್ಕೃತ ಪರಿಷತ್ತಿನ ಗೌರವ್ ತಿಳಿಸಿದ್ದಾರೆ. ಉತ್ತರ ಹಾಗೂ ಪಶ್ಚಿಮ ಬಂಗಾಳ ಹಾಗೂ ಹೊರಗಡೆಯಿಂದಲೂ ಜನರು ಆಗಮಿಸುತ್ತಿದ್ದಾರೆ, ಡಿಸೆಂಬರ್ 24 ರಂದು ಗೀತಾ ಜಯಂತಿಯಂದು ಈ ಕಾರ್ಯಕ್ರಮ ನಡೆಯಲಿದೆ.

ಬ್ರಿಗೇಡ್ ಮೈದಾನವು ಫೋರ್ಟ್​ ವಿಲಿಯಂ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ಇಲ್ಲಿ ಯಾವುದೇ ಕಾರ್ಯಕ್ರಮಕ್ಕೆ ಸೇನೆಯ ಅನುಮತಿ ಬೇಕಾಗುತ್ತದೆ. ಮೂಲಗಳ ಪ್ರಕಾರ ಈಗಾಗಲೇ ಸೇನೆಯಿಂದ ಅನುಮತಿ ಪಡೆಯಲಾಗಿದೆ. ವಿವಿಧ ಮಠ, ಮಂದಿರಗಳಿಗೂ ಆಹ್ವಾನ ನೀಡಲಾಗುತ್ತದೆ. ಬ್ರಿಗೇಡ್​ನಲ್ಲಿ ಗೀತಾ ವಾಚನದ ಕುರಿತು ಸಿಪಿಎಂ ಮುಖಂಡ ಸುಜನ್ ಚಕ್ರವರ್ತಿ ಮಾತನಾಡಿ, ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಮತಾಂಧತೆ ಹಾಗೂ ಕೋಮುವಾದವನ್ನು ತುಂಬಲು ಬಿಜೆಪಿ ಸಿದ್ಧವಾಗಿದೆ. ವರ್ಷಕ್ಕೆ 2 ಕೋಟಿ ರೂ ಉದ್ಯೋಗಗಳ ಭರವಸೆ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದಾರೆ. ಮತ್ತೊಂದೆಡೆ, ತೃಣಮೂಲ ವಕ್ತಾರ ಕುನಾಲ್ ಘೋಷ್ ಮಾತನಾಡಿ, ಗೀತಾವನ್ನು ರಾಜಕೀಯಕ್ಕೆ ತರಬೇಡಿ ಎಂದು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

5 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

5 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

23 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 days ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago