ಮಂಗಳೂರಿನಲ್ಲಿ ಗೆಡ್ಡೆಗೆಣಸು ಮೇಳ | ಬೆಳೆಸುವವರಿಂದ ಬಳಕೆದಾರರವರೆಗೆ |

January 5, 2025
11:27 AM
ಮಂಗಳೂರಿನಲ್ಲಿ ರಾಜ್ಯಮಟ್ಟದ ಗೆಡ್ಡೆಗೆಣಸು ಮೇಳ ನಡೆಯುತ್ತಿದೆ. ರೈತರು ಹಾಗೂ ಗ್ರಾಹಕರ ನಡುವೆ ಸಂಪರ್ಕ ಸಾಧಿಸುವಲ್ಲಿ ಈ ಮೇಳವು ಮಹತ್ವದ ಹೆಜ್ಜೆ ಇರಿಸಿದೆ. ಮಂಗಳೂರಿನ ಸಾವಯವ ಕೃಷಿ ಬಳಗವು ನಗರದ ಮಂದಿಗೆ ಸಾವಯವ ತರಕಾರಿಗಳನ್ನೂ ಪರಿಚಯಿಸಿದೆ.

ಮಂಗಳೂರಿನ ಸಂಘನಿಕೇತನದ ವಠಾರದಲ್ಲಿ ಎರಡು ದಿನಗಳ ಗೆಡ್ಡೆ ಗೆಣಸು ಮೇಳ ಆರಂಭವಾಗಿದೆ. ನಗರದ ಹಲವಾರು ಮಂದಿ ಮೇಳಕ್ಕೆ ಆಗಮಿಸಿ ಖರೀದಿ ಮಾಡುತ್ತಿದ್ದರು. ಒಂದೇ ದಿನದಲ್ಲಿ ಬಹುಪಾಲು ಗೆಡ್ಡೆಗೆಣಸು-ಸೊಪ್ಪುಗಳು ಖಾಲಿಯಾಗುತ್ತಿದ್ದವು, ಮೇಳದ ಉದ್ದೇಶ ಸಾರ್ಥಕ ಕಂಡಿದೆ.…..ಮುಂದೆ ಓದಿ….

ರಾಜ್ಯಮಟ್ಟದ ಮೇಳ ಇದಾಗಿದೆ. ಮಂಗಳೂರಿನ ಸಾವಯವ ಬಳಗದ ನೇತೃತ್ವದಲ್ಲಿ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಈ ಮೇಳ ಆಯೋಜನೆಗೊಂಡಿದೆ.ಕೇರಳ-ಕರ್ನಾಟಕ ಸೇರಿದಂತೆ ಹಲವಾರು ರೈತರು ಆಗಮಿಸಿದ್ದಾರೆ. ತಾವೇ ಬೆಳೆದ ಗೆಡ್ಡೆಗೆಣಸುಗಳನ್ನು-ಸೊಪ್ಪುಗಳನ್ನು ಮಾರಾಟ ಮಾಡುತ್ತಿದ್ದರು. ಅದರ ಜೊತೆಗೆ ಗೆಡ್ಡೆಗಳನ್ನು ಬಿತ್ತಲು ಕೂಡಾ ಕೊಂಡೊಯ್ಯುತ್ತಿದ್ದಾರೆ. ಸುಮಾರು 45 ಮಳಿಗೆಗಳು ಇವೆ. ಬಹುಪಾಲು ಮಳಿಗೆಗಳು ಗೆಡ್ಡೆ ಗೆಣಸುಗಳು-ಸೊಪ್ಪುಗಳಿಗೇ ಮೀಸಲಾಗಿವೆ. ಗೆಡ್ಡೆ ಗೆಣಸುಗಳಿಂದಲೇ ತಯಾರಿಸುವ ಖಾದ್ಯಗಳ ಮಳಿಗೆಗಳೂ ಇವೆ. ವಿಶೇಷವಾಗಿ ಗೆಡ್ಡೆ ಗೆಣಸಿನ ಐಸ್ ಕ್ರೀಂ, ಹೋಳಿಗೆ, ಸೊಪ್ಪಿನ ದೋಸೆ ಹಾಗೂ ಮೌಲ್ಯ ವರ್ಧಿತ ಆಹಾರ ಪದಾರ್ಥಗಳು ಕಂಡವು. ಅನೇಕರು ಇಂತಹ ಮಳಿಗೆಯ ಕಡೆಗೆ ಭೇಟಟಿ ನೀಡಿ ಖಾದ್ಯಗಳನ್ನು ಪರಿಚಯ ಮಾಡಿಕೊಳ್ಳುತ್ತಿದ್ದರು. ಮೇಳದಲ್ಲಿ ಕೈತೋಟಗಳಲ್ಲಿ ಬೆಳೆಬಹುದಾದ ಸೊಪ್ಪು-ತರಕಾರಿ, ಗೆಡ್ಡೆ ಗೆಣಸುಗಳ ಪರಿಚಯವೂ ಇತ್ತು. ತೋಟಗಳಲ್ಲಿ ಇರುವ ಸೊಪ್ಪುಗಳ ಬಳಕೆಯ ಪ್ಲೆಕ್ಸ್‌ ಕೂಡಾ ಕಂಡುಬಂತು. ಹೀಗಾಗಿ ಮೇಳಕ್ಕೆ ಬಂದಿರುವ ಎಲ್ಲರಿಗೂ ತಮ್ಮ ಆಸಕ್ತಿಯ ವಿಭಾಗದಲ್ಲಿ ಭಾಗವಹಿಸಬಹುದಾಗಿತ್ತು.ಅನೇಕ ಸಮಯಗಳ ಪ್ರಯತ್ನವು ಯಶಸ್ಸು ಕಂಡಿದೆ. ಮೇಳಗಳ ಉದ್ದೇಶವೂ ಬೆಳೆಯುವವರಿಂದ ಬಳಕೆದಾರರಿಗೆ ಪರಿಚಯಿಸುವುದು. ಈ ಉದ್ದೇಶ ಯಶಸ್ಸು ಕಂಡಿದೆ.

ರೈತರು ಹಲವು ಉತ್ಪನ್ನಗಳನ್ನು ಬೆಳೆಯುತ್ತಾರೆ. ವಿಶೇಷವಾದ ತಳಿ, ಗಿಡ, ಫಸಲು ಇದ್ದರೂ ಮಾರುಕಟ್ಟೆ ಸಮಸ್ಯೆಯನ್ನು ಬಹುಪಾಲು ರೈತರು ಅನುಭವಿಸುತ್ತಾರೆ. ಜೋಯಿಡಾದಂತಹ ಪ್ರದೇಶದಲ್ಲಿ ಹಲವು ಬಗೆಯ ಗೆಡ್ಡೆಗೆಣಸು ಬೆಳೆಯುತ್ತಾರೆ, ಸೊಪ್ಪು ತರಕಾರಿ ಇದೆ,  ಹೊಸ ಹೊಸ ಬಳಕೆ ಅಲ್ಲಿದೆ. ಆದರೆ ಮಾರುಕಟ್ಟೆಯ ಕಡೆಗೆ ಬಂದಾಗ ಎಲ್ಲಾ ರೈತರು ಅನುಭವಿಸುವ ಸಮಸ್ಯೆಯನ್ನೇ ಅನುಭವಿಸುತ್ತಾರೆ. ಹೀಗಾಗಿ ಇಂತಹ ಮೇಳಗಳು ರೈತರಿಗೆ ದೊಡ್ಡ ವೇದಿಕೆ. ಇಲ್ಲಿ ತಾವು ಬೆಳೆಯುವ ಉತ್ಪನ್ನಗಳ ಪರಿಚಯ ಮಾಡಿ ಮಾರುಕಟ್ಟೆಯನ್ನು ಕಂಡುಕೊಳ್ಳಲು ಸಾಧ್ಯವಿದೆ. ಹೀಗಾಗಿ ರೈತರಿಗೆ ಇದೊಂದು ಉತ್ತಮವಾದ ವೇದಿಕೆ.

 

 

ನಗರದಲ್ಲಿ ಇರುವ ಬಹುಪಾಲು ಮಂದಿಗೆ ತರಕಾರಿಗಳನ್ನು ನೇರವಾಗಿ ರೈತರಿಂದಲೇ ಖರೀದಿ ಮಾಡಬೇಕು ಎನ್ನುವ ಅಭಿಲಾಷೆ ಇದ್ದರೂ ಸಾಧ್ಯವಾಗುವುದಿಲ್ಲ. ಮಂಗಳೂರಿನ ಸಾವಯವ ಬಳಗ ಈ ವೇದಿಕೆಯನ್ನು ಹಲವು ಸಮಯಗಳಿಂದ ನೀಡುತ್ತಿದೆ. ಆದರೆ ಗೆಡ್ಡೆ ಗೆಣಸು-ಸೊಪ್ಪು ತರಕಾರಿಯ ಮೇಳದ ಮೂಲಕ ಗ್ರಾಹಕರನ್ನು ಸೆಳೆದು ರೈತರಿಗೂ ಅನುಕೂಲ ಮಾಡಿಕೊಟ್ಟಿದೆ, ಗ್ರಾಹಕರಿಗೂ ಅವಕಾಶ ಕಲ್ಪಿಸಿದೆ. ಹೀಗಾಗಿ ಈ ಮೇಳವು ಮಹತ್ವವಾಗಿದೆ.

ಮೇಳದಲ್ಲಿ ವಿಶೇಷವಾಗಿ ಗೆಡ್ಡೆಗೆಣಸು ಪಾನಿಪೂರಿ, ತೆಂಗಿನಕಾಯಿನಿಂದಲೇ ತಯಾರಿಸುವ ಐಸ್‌ಕ್ರೀಂ, ಗೆಣಸು ಐಸ್‌ಕ್ರೀಂ, ಚಿಪ್ಸ್‌, ಮರಗೆಣಸು ಇತ್ಯಾದಿಗಳು ಗೆಡ್ಡೆ ಗೆಣಸುಗಳ ಬಳಕೆ ಮಾಡುವ ವಿಧಾನಗಳನ್ನೂ ಪರಿಚಯಿಸಿತು. ಹೀಗೂ ಗೆಡ್ಡೆ ಗೆಣಸುಗಳನ್ನು ಬಳಕೆ ಮಾಡಲು ಸಾಧ್ಯವಿದೆ ಎನ್ನುವ ಸಂದೇಶವೂ ಲಭ್ಯವಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ
April 12, 2026
3:03 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror