Advertisement
MIRROR FOCUS

ಮಂಗಳೂರಿನಲ್ಲಿ ಗೆಡ್ಡೆಗೆಣಸು ಮೇಳ | ಬೆಳೆಸುವವರಿಂದ ಬಳಕೆದಾರರವರೆಗೆ |

Share

ಮಂಗಳೂರಿನ ಸಂಘನಿಕೇತನದ ವಠಾರದಲ್ಲಿ ಎರಡು ದಿನಗಳ ಗೆಡ್ಡೆ ಗೆಣಸು ಮೇಳ ಆರಂಭವಾಗಿದೆ. ನಗರದ ಹಲವಾರು ಮಂದಿ ಮೇಳಕ್ಕೆ ಆಗಮಿಸಿ ಖರೀದಿ ಮಾಡುತ್ತಿದ್ದರು. ಒಂದೇ ದಿನದಲ್ಲಿ ಬಹುಪಾಲು ಗೆಡ್ಡೆಗೆಣಸು-ಸೊಪ್ಪುಗಳು ಖಾಲಿಯಾಗುತ್ತಿದ್ದವು, ಮೇಳದ ಉದ್ದೇಶ ಸಾರ್ಥಕ ಕಂಡಿದೆ.…..ಮುಂದೆ ಓದಿ….

ರಾಜ್ಯಮಟ್ಟದ ಮೇಳ ಇದಾಗಿದೆ. ಮಂಗಳೂರಿನ ಸಾವಯವ ಬಳಗದ ನೇತೃತ್ವದಲ್ಲಿ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಈ ಮೇಳ ಆಯೋಜನೆಗೊಂಡಿದೆ.ಕೇರಳ-ಕರ್ನಾಟಕ ಸೇರಿದಂತೆ ಹಲವಾರು ರೈತರು ಆಗಮಿಸಿದ್ದಾರೆ. ತಾವೇ ಬೆಳೆದ ಗೆಡ್ಡೆಗೆಣಸುಗಳನ್ನು-ಸೊಪ್ಪುಗಳನ್ನು ಮಾರಾಟ ಮಾಡುತ್ತಿದ್ದರು. ಅದರ ಜೊತೆಗೆ ಗೆಡ್ಡೆಗಳನ್ನು ಬಿತ್ತಲು ಕೂಡಾ ಕೊಂಡೊಯ್ಯುತ್ತಿದ್ದಾರೆ. ಸುಮಾರು 45 ಮಳಿಗೆಗಳು ಇವೆ. ಬಹುಪಾಲು ಮಳಿಗೆಗಳು ಗೆಡ್ಡೆ ಗೆಣಸುಗಳು-ಸೊಪ್ಪುಗಳಿಗೇ ಮೀಸಲಾಗಿವೆ. ಗೆಡ್ಡೆ ಗೆಣಸುಗಳಿಂದಲೇ ತಯಾರಿಸುವ ಖಾದ್ಯಗಳ ಮಳಿಗೆಗಳೂ ಇವೆ. ವಿಶೇಷವಾಗಿ ಗೆಡ್ಡೆ ಗೆಣಸಿನ ಐಸ್ ಕ್ರೀಂ, ಹೋಳಿಗೆ, ಸೊಪ್ಪಿನ ದೋಸೆ ಹಾಗೂ ಮೌಲ್ಯ ವರ್ಧಿತ ಆಹಾರ ಪದಾರ್ಥಗಳು ಕಂಡವು. ಅನೇಕರು ಇಂತಹ ಮಳಿಗೆಯ ಕಡೆಗೆ ಭೇಟಟಿ ನೀಡಿ ಖಾದ್ಯಗಳನ್ನು ಪರಿಚಯ ಮಾಡಿಕೊಳ್ಳುತ್ತಿದ್ದರು. ಮೇಳದಲ್ಲಿ ಕೈತೋಟಗಳಲ್ಲಿ ಬೆಳೆಬಹುದಾದ ಸೊಪ್ಪು-ತರಕಾರಿ, ಗೆಡ್ಡೆ ಗೆಣಸುಗಳ ಪರಿಚಯವೂ ಇತ್ತು. ತೋಟಗಳಲ್ಲಿ ಇರುವ ಸೊಪ್ಪುಗಳ ಬಳಕೆಯ ಪ್ಲೆಕ್ಸ್‌ ಕೂಡಾ ಕಂಡುಬಂತು. ಹೀಗಾಗಿ ಮೇಳಕ್ಕೆ ಬಂದಿರುವ ಎಲ್ಲರಿಗೂ ತಮ್ಮ ಆಸಕ್ತಿಯ ವಿಭಾಗದಲ್ಲಿ ಭಾಗವಹಿಸಬಹುದಾಗಿತ್ತು.ಅನೇಕ ಸಮಯಗಳ ಪ್ರಯತ್ನವು ಯಶಸ್ಸು ಕಂಡಿದೆ. ಮೇಳಗಳ ಉದ್ದೇಶವೂ ಬೆಳೆಯುವವರಿಂದ ಬಳಕೆದಾರರಿಗೆ ಪರಿಚಯಿಸುವುದು. ಈ ಉದ್ದೇಶ ಯಶಸ್ಸು ಕಂಡಿದೆ.

ರೈತರು ಹಲವು ಉತ್ಪನ್ನಗಳನ್ನು ಬೆಳೆಯುತ್ತಾರೆ. ವಿಶೇಷವಾದ ತಳಿ, ಗಿಡ, ಫಸಲು ಇದ್ದರೂ ಮಾರುಕಟ್ಟೆ ಸಮಸ್ಯೆಯನ್ನು ಬಹುಪಾಲು ರೈತರು ಅನುಭವಿಸುತ್ತಾರೆ. ಜೋಯಿಡಾದಂತಹ ಪ್ರದೇಶದಲ್ಲಿ ಹಲವು ಬಗೆಯ ಗೆಡ್ಡೆಗೆಣಸು ಬೆಳೆಯುತ್ತಾರೆ, ಸೊಪ್ಪು ತರಕಾರಿ ಇದೆ,  ಹೊಸ ಹೊಸ ಬಳಕೆ ಅಲ್ಲಿದೆ. ಆದರೆ ಮಾರುಕಟ್ಟೆಯ ಕಡೆಗೆ ಬಂದಾಗ ಎಲ್ಲಾ ರೈತರು ಅನುಭವಿಸುವ ಸಮಸ್ಯೆಯನ್ನೇ ಅನುಭವಿಸುತ್ತಾರೆ. ಹೀಗಾಗಿ ಇಂತಹ ಮೇಳಗಳು ರೈತರಿಗೆ ದೊಡ್ಡ ವೇದಿಕೆ. ಇಲ್ಲಿ ತಾವು ಬೆಳೆಯುವ ಉತ್ಪನ್ನಗಳ ಪರಿಚಯ ಮಾಡಿ ಮಾರುಕಟ್ಟೆಯನ್ನು ಕಂಡುಕೊಳ್ಳಲು ಸಾಧ್ಯವಿದೆ. ಹೀಗಾಗಿ ರೈತರಿಗೆ ಇದೊಂದು ಉತ್ತಮವಾದ ವೇದಿಕೆ.

 

 

ನಗರದಲ್ಲಿ ಇರುವ ಬಹುಪಾಲು ಮಂದಿಗೆ ತರಕಾರಿಗಳನ್ನು ನೇರವಾಗಿ ರೈತರಿಂದಲೇ ಖರೀದಿ ಮಾಡಬೇಕು ಎನ್ನುವ ಅಭಿಲಾಷೆ ಇದ್ದರೂ ಸಾಧ್ಯವಾಗುವುದಿಲ್ಲ. ಮಂಗಳೂರಿನ ಸಾವಯವ ಬಳಗ ಈ ವೇದಿಕೆಯನ್ನು ಹಲವು ಸಮಯಗಳಿಂದ ನೀಡುತ್ತಿದೆ. ಆದರೆ ಗೆಡ್ಡೆ ಗೆಣಸು-ಸೊಪ್ಪು ತರಕಾರಿಯ ಮೇಳದ ಮೂಲಕ ಗ್ರಾಹಕರನ್ನು ಸೆಳೆದು ರೈತರಿಗೂ ಅನುಕೂಲ ಮಾಡಿಕೊಟ್ಟಿದೆ, ಗ್ರಾಹಕರಿಗೂ ಅವಕಾಶ ಕಲ್ಪಿಸಿದೆ. ಹೀಗಾಗಿ ಈ ಮೇಳವು ಮಹತ್ವವಾಗಿದೆ.

ಮೇಳದಲ್ಲಿ ವಿಶೇಷವಾಗಿ ಗೆಡ್ಡೆಗೆಣಸು ಪಾನಿಪೂರಿ, ತೆಂಗಿನಕಾಯಿನಿಂದಲೇ ತಯಾರಿಸುವ ಐಸ್‌ಕ್ರೀಂ, ಗೆಣಸು ಐಸ್‌ಕ್ರೀಂ, ಚಿಪ್ಸ್‌, ಮರಗೆಣಸು ಇತ್ಯಾದಿಗಳು ಗೆಡ್ಡೆ ಗೆಣಸುಗಳ ಬಳಕೆ ಮಾಡುವ ವಿಧಾನಗಳನ್ನೂ ಪರಿಚಯಿಸಿತು. ಹೀಗೂ ಗೆಡ್ಡೆ ಗೆಣಸುಗಳನ್ನು ಬಳಕೆ ಮಾಡಲು ಸಾಧ್ಯವಿದೆ ಎನ್ನುವ ಸಂದೇಶವೂ ಲಭ್ಯವಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

19 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

20 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

20 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago