MIRROR FOCUS

ಧರ್ಮದ ನಿಜವಾದ ಅರ್ಥ ಒಳ್ಳೆಯದು ಮಾಡುವುದು | ಸುಬ್ರಹ್ಮಣ್ಯದಲ್ಲಿ ಗೀತಾ ಜಯಂತಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಗವದ್ಗೀತೆ ಆರಂಭದ ವಾಕ್ಯ ಧರ್ಮ, ಕೊನೆಯ ವಾಕ್ಯ ಜಯ. ಇಡೀ ಭಗವದ್ಗೀತೆಯ ಅರ್ಥವೇ ಇದರಲ್ಲಿ ಒಳಗೊಂಡಿದೆ. ಧರ್ಮಕ್ಕೆ ಜಯವಾಗಬೇಕು. ಧರ್ಮ ಎಂದರೆ ಒಳ್ಳೆಯದು ಮಾಡುವುದು ಎಂದರ್ಥ. ಒಳ್ಳೆಯದು ಮಾಡುವುದೇ ಭಗವದ್ಗೀತೆಯ ಒಟ್ಟು ಸಾರ ಎಂದು ವಿವೇಕಾನಂದ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಶೀಶಕುಮಾರ್‌ ಹೇಳಿದರು.

Advertisement
Advertisement

 

ಅವರು ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆದ ಗೀತಾ ಜಯಂತಿ ಹಾಗೂ ಮೆಟ್ರಿಕ್‌ ಮೇಳ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಗವದ್ಗೀತೆಯ ಆರಂಭವಾಗುವುದು ಧರ್ಮ ಕ್ಷೇತ್ರ-ಕುರುಕ್ಷೇತ್ರದ ವಾಕ್ಯಗಳಿಂದ. ಕುರು ಅಂದರೆ ಮಾಡು ಎಂದರ್ಥವೂ ಇದೆ. ಅಂದರೆ  ಧರ್ಮ ಕ್ಷೇತ್ರದಲ್ಲಿ ಒಳ್ಳೆಯದು ಮಾಡು ಎಂದರ್ಥ. ಹೀಗಾಗಿ ಮಾಡುವ ಎಲ್ಲಾ ಕೆಸಲಗಳು, ತೊಡಗಿಸಿಕೊಳ್ಳುವ ಎಲ್ಲಾ ಕ್ಷೇತ್ರಗಳಲ್ಲೂ ಒಳ್ಳೆಯದು ಮಾಡು. ಧರ್ಮವನ್ನು ಮಾಡು ಎಂಬುದೇ ಇಡೀ ಗೀತೆಯ ಸಂದೇಶವಾಗಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ಧರ್ಮ ಪಾಲನೆ, ಶಿಕ್ಷಕರು ಶಿಕ್ಷಣ ಕ್ಷೇತ್ರದ ಧರ್ಮ ಪಾಲನೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಆಯಾ ಕ್ಷೇತ್ರದ ಧರ್ಮ ಪಾಲನೆಯೇ ಅಗತ್ಯವಾಗಿದೆ. ಇದನ್ನೇ ಶ್ರೀಕೃಷ್ಣನು ಭಗವದ್ಗೀತೆಯ ಮೂಲಕ ತಿಳಿಸಿದ್ದಾರೆ.  ಇದಕ್ಕಾಗಿಯೇ ಭಗವದ್ಗೀತೆಯು ಒಂದು ಅಧ್ಬುತವಾದ ಮನಶಾಸ್ತ್ರ ಗ್ರಂಥವಾಗಿಯೂ, ಮ್ಯಾನೇಜ್‌ ಮೆಂಟ್‌ ಕ್ಷೇತ್ರಕ್ಕೆ ನಿರ್ವಹಣಾ ಗ್ರಂಥವಾಗಿಯೂ ಪರಮಶ್ರೇಷ್ಟವಾಗಿದೆ. ಇದಕ್ಕಾಗಿಯೇ ಭಗವದ್ಗೀತೆಯನ್ನು ಓದಿದಂತೆಯೇ ಸಕಾರಾತ್ಮಕ ಬದಲಾವಣೆಗಳು ಸಾಧ್ಯವಿದೆ ಎಂದು ಹೇಳಿದರು.

ಮೆಟ್ರಿಕ್‌ ಮೇಳವನ್ನು ಉದ್ಘಾಟಿಸಿದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಭಾರತಿ ದಿನೇಶ್‌ , ಮಕ್ಕಳಿಗೆ ಎಲ್ಲಾ ರೀತಿಯ ಶಿಕ್ಷಣ ಅಗತ್ಯ ಇದೆ. ವ್ಯಾಪಾರ ವಹಿವಾಟಿನ ಮೂಲಕವೂ ಶಿಕ್ಷಣ ಅಗತ್ಯ ಇದೆ ಎಂದರು.

Advertisement

ಸಭಾಧ್ಯಕ್ಷತೆಯನ್ನು ವಿದ್ಯಾರ್ಥಿನಿ ಶ್ರೀಪೂರ್ಣ ಜಿ ಎಲ್‌ ವಹಿಸಿದ್ದರು. ವೇದಿಕೆಯಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಗಳ ಅಧ್ಯಕ್ಷ ಗಣೇಶ್‌ ಪ್ರಸಾದ್‌ ನಾಯರ್‌, ಸಂಚಾಲಕ ಚಂದ್ರಶೇಖರ ನಾಯರ್‌, ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ, ಪಿ ಯು ಕಾಲೇಜಿನ ಪ್ರಾಂಶುಪಾಲ ಸಂಕೀರ್ತನ್‌ ಹೆಬ್ಬಾರ್‌ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

7 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

8 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

9 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

10 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

11 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago