Advertisement
MIRROR FOCUS

ಧರ್ಮದ ನಿಜವಾದ ಅರ್ಥ ಒಳ್ಳೆಯದು ಮಾಡುವುದು | ಸುಬ್ರಹ್ಮಣ್ಯದಲ್ಲಿ ಗೀತಾ ಜಯಂತಿ |

Share

ಭಗವದ್ಗೀತೆ ಆರಂಭದ ವಾಕ್ಯ ಧರ್ಮ, ಕೊನೆಯ ವಾಕ್ಯ ಜಯ. ಇಡೀ ಭಗವದ್ಗೀತೆಯ ಅರ್ಥವೇ ಇದರಲ್ಲಿ ಒಳಗೊಂಡಿದೆ. ಧರ್ಮಕ್ಕೆ ಜಯವಾಗಬೇಕು. ಧರ್ಮ ಎಂದರೆ ಒಳ್ಳೆಯದು ಮಾಡುವುದು ಎಂದರ್ಥ. ಒಳ್ಳೆಯದು ಮಾಡುವುದೇ ಭಗವದ್ಗೀತೆಯ ಒಟ್ಟು ಸಾರ ಎಂದು ವಿವೇಕಾನಂದ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಶೀಶಕುಮಾರ್‌ ಹೇಳಿದರು.

Advertisement
Advertisement

Advertisement

 

ಅವರು ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆದ ಗೀತಾ ಜಯಂತಿ ಹಾಗೂ ಮೆಟ್ರಿಕ್‌ ಮೇಳ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಗವದ್ಗೀತೆಯ ಆರಂಭವಾಗುವುದು ಧರ್ಮ ಕ್ಷೇತ್ರ-ಕುರುಕ್ಷೇತ್ರದ ವಾಕ್ಯಗಳಿಂದ. ಕುರು ಅಂದರೆ ಮಾಡು ಎಂದರ್ಥವೂ ಇದೆ. ಅಂದರೆ  ಧರ್ಮ ಕ್ಷೇತ್ರದಲ್ಲಿ ಒಳ್ಳೆಯದು ಮಾಡು ಎಂದರ್ಥ. ಹೀಗಾಗಿ ಮಾಡುವ ಎಲ್ಲಾ ಕೆಸಲಗಳು, ತೊಡಗಿಸಿಕೊಳ್ಳುವ ಎಲ್ಲಾ ಕ್ಷೇತ್ರಗಳಲ್ಲೂ ಒಳ್ಳೆಯದು ಮಾಡು. ಧರ್ಮವನ್ನು ಮಾಡು ಎಂಬುದೇ ಇಡೀ ಗೀತೆಯ ಸಂದೇಶವಾಗಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ಧರ್ಮ ಪಾಲನೆ, ಶಿಕ್ಷಕರು ಶಿಕ್ಷಣ ಕ್ಷೇತ್ರದ ಧರ್ಮ ಪಾಲನೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಆಯಾ ಕ್ಷೇತ್ರದ ಧರ್ಮ ಪಾಲನೆಯೇ ಅಗತ್ಯವಾಗಿದೆ. ಇದನ್ನೇ ಶ್ರೀಕೃಷ್ಣನು ಭಗವದ್ಗೀತೆಯ ಮೂಲಕ ತಿಳಿಸಿದ್ದಾರೆ.  ಇದಕ್ಕಾಗಿಯೇ ಭಗವದ್ಗೀತೆಯು ಒಂದು ಅಧ್ಬುತವಾದ ಮನಶಾಸ್ತ್ರ ಗ್ರಂಥವಾಗಿಯೂ, ಮ್ಯಾನೇಜ್‌ ಮೆಂಟ್‌ ಕ್ಷೇತ್ರಕ್ಕೆ ನಿರ್ವಹಣಾ ಗ್ರಂಥವಾಗಿಯೂ ಪರಮಶ್ರೇಷ್ಟವಾಗಿದೆ. ಇದಕ್ಕಾಗಿಯೇ ಭಗವದ್ಗೀತೆಯನ್ನು ಓದಿದಂತೆಯೇ ಸಕಾರಾತ್ಮಕ ಬದಲಾವಣೆಗಳು ಸಾಧ್ಯವಿದೆ ಎಂದು ಹೇಳಿದರು.

Advertisement

ಮೆಟ್ರಿಕ್‌ ಮೇಳವನ್ನು ಉದ್ಘಾಟಿಸಿದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಭಾರತಿ ದಿನೇಶ್‌ , ಮಕ್ಕಳಿಗೆ ಎಲ್ಲಾ ರೀತಿಯ ಶಿಕ್ಷಣ ಅಗತ್ಯ ಇದೆ. ವ್ಯಾಪಾರ ವಹಿವಾಟಿನ ಮೂಲಕವೂ ಶಿಕ್ಷಣ ಅಗತ್ಯ ಇದೆ ಎಂದರು.

Advertisement

ಸಭಾಧ್ಯಕ್ಷತೆಯನ್ನು ವಿದ್ಯಾರ್ಥಿನಿ ಶ್ರೀಪೂರ್ಣ ಜಿ ಎಲ್‌ ವಹಿಸಿದ್ದರು. ವೇದಿಕೆಯಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಗಳ ಅಧ್ಯಕ್ಷ ಗಣೇಶ್‌ ಪ್ರಸಾದ್‌ ನಾಯರ್‌, ಸಂಚಾಲಕ ಚಂದ್ರಶೇಖರ ನಾಯರ್‌, ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ, ಪಿ ಯು ಕಾಲೇಜಿನ ಪ್ರಾಂಶುಪಾಲ ಸಂಕೀರ್ತನ್‌ ಹೆಬ್ಬಾರ್‌ ಉಪಸ್ಥಿತರಿದ್ದರು.

 

Advertisement

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಮೇಳದತ್ತೊಂದು ಪಯಣ ಮಾಡೋಣವೇ? : ಪುತ್ತೂರಿನಲ್ಲಿ ಹಲಸು ಮೇಳ

ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…

26 mins ago

ಸಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು : ನೈಸರ್ಗಿಕ ಕೃಷಿಯಲ್ಲಿ ದೇಶಿ ಗೋವಿನ ಮಹತ್ವ ಬಹಳ ಮುಖ್ಯ

ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…

47 mins ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

1 hour ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

2 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

3 hours ago