Advertisement
MIRROR FOCUS

ಧರ್ಮದ ನಿಜವಾದ ಅರ್ಥ ಒಳ್ಳೆಯದು ಮಾಡುವುದು | ಸುಬ್ರಹ್ಮಣ್ಯದಲ್ಲಿ ಗೀತಾ ಜಯಂತಿ |

Share

ಭಗವದ್ಗೀತೆ ಆರಂಭದ ವಾಕ್ಯ ಧರ್ಮ, ಕೊನೆಯ ವಾಕ್ಯ ಜಯ. ಇಡೀ ಭಗವದ್ಗೀತೆಯ ಅರ್ಥವೇ ಇದರಲ್ಲಿ ಒಳಗೊಂಡಿದೆ. ಧರ್ಮಕ್ಕೆ ಜಯವಾಗಬೇಕು. ಧರ್ಮ ಎಂದರೆ ಒಳ್ಳೆಯದು ಮಾಡುವುದು ಎಂದರ್ಥ. ಒಳ್ಳೆಯದು ಮಾಡುವುದೇ ಭಗವದ್ಗೀತೆಯ ಒಟ್ಟು ಸಾರ ಎಂದು ವಿವೇಕಾನಂದ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಶೀಶಕುಮಾರ್‌ ಹೇಳಿದರು.

Advertisement

 

ಅವರು ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆದ ಗೀತಾ ಜಯಂತಿ ಹಾಗೂ ಮೆಟ್ರಿಕ್‌ ಮೇಳ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಗವದ್ಗೀತೆಯ ಆರಂಭವಾಗುವುದು ಧರ್ಮ ಕ್ಷೇತ್ರ-ಕುರುಕ್ಷೇತ್ರದ ವಾಕ್ಯಗಳಿಂದ. ಕುರು ಅಂದರೆ ಮಾಡು ಎಂದರ್ಥವೂ ಇದೆ. ಅಂದರೆ  ಧರ್ಮ ಕ್ಷೇತ್ರದಲ್ಲಿ ಒಳ್ಳೆಯದು ಮಾಡು ಎಂದರ್ಥ. ಹೀಗಾಗಿ ಮಾಡುವ ಎಲ್ಲಾ ಕೆಸಲಗಳು, ತೊಡಗಿಸಿಕೊಳ್ಳುವ ಎಲ್ಲಾ ಕ್ಷೇತ್ರಗಳಲ್ಲೂ ಒಳ್ಳೆಯದು ಮಾಡು. ಧರ್ಮವನ್ನು ಮಾಡು ಎಂಬುದೇ ಇಡೀ ಗೀತೆಯ ಸಂದೇಶವಾಗಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ಧರ್ಮ ಪಾಲನೆ, ಶಿಕ್ಷಕರು ಶಿಕ್ಷಣ ಕ್ಷೇತ್ರದ ಧರ್ಮ ಪಾಲನೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಆಯಾ ಕ್ಷೇತ್ರದ ಧರ್ಮ ಪಾಲನೆಯೇ ಅಗತ್ಯವಾಗಿದೆ. ಇದನ್ನೇ ಶ್ರೀಕೃಷ್ಣನು ಭಗವದ್ಗೀತೆಯ ಮೂಲಕ ತಿಳಿಸಿದ್ದಾರೆ.  ಇದಕ್ಕಾಗಿಯೇ ಭಗವದ್ಗೀತೆಯು ಒಂದು ಅಧ್ಬುತವಾದ ಮನಶಾಸ್ತ್ರ ಗ್ರಂಥವಾಗಿಯೂ, ಮ್ಯಾನೇಜ್‌ ಮೆಂಟ್‌ ಕ್ಷೇತ್ರಕ್ಕೆ ನಿರ್ವಹಣಾ ಗ್ರಂಥವಾಗಿಯೂ ಪರಮಶ್ರೇಷ್ಟವಾಗಿದೆ. ಇದಕ್ಕಾಗಿಯೇ ಭಗವದ್ಗೀತೆಯನ್ನು ಓದಿದಂತೆಯೇ ಸಕಾರಾತ್ಮಕ ಬದಲಾವಣೆಗಳು ಸಾಧ್ಯವಿದೆ ಎಂದು ಹೇಳಿದರು.

ಮೆಟ್ರಿಕ್‌ ಮೇಳವನ್ನು ಉದ್ಘಾಟಿಸಿದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಭಾರತಿ ದಿನೇಶ್‌ , ಮಕ್ಕಳಿಗೆ ಎಲ್ಲಾ ರೀತಿಯ ಶಿಕ್ಷಣ ಅಗತ್ಯ ಇದೆ. ವ್ಯಾಪಾರ ವಹಿವಾಟಿನ ಮೂಲಕವೂ ಶಿಕ್ಷಣ ಅಗತ್ಯ ಇದೆ ಎಂದರು.

ಸಭಾಧ್ಯಕ್ಷತೆಯನ್ನು ವಿದ್ಯಾರ್ಥಿನಿ ಶ್ರೀಪೂರ್ಣ ಜಿ ಎಲ್‌ ವಹಿಸಿದ್ದರು. ವೇದಿಕೆಯಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಗಳ ಅಧ್ಯಕ್ಷ ಗಣೇಶ್‌ ಪ್ರಸಾದ್‌ ನಾಯರ್‌, ಸಂಚಾಲಕ ಚಂದ್ರಶೇಖರ ನಾಯರ್‌, ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ, ಪಿ ಯು ಕಾಲೇಜಿನ ಪ್ರಾಂಶುಪಾಲ ಸಂಕೀರ್ತನ್‌ ಹೆಬ್ಬಾರ್‌ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

9 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

10 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

10 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

10 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

19 hours ago