Advertisement
MIRROR FOCUS

ಧರ್ಮದ ನಿಜವಾದ ಅರ್ಥ ಒಳ್ಳೆಯದು ಮಾಡುವುದು | ಸುಬ್ರಹ್ಮಣ್ಯದಲ್ಲಿ ಗೀತಾ ಜಯಂತಿ |

Share

ಭಗವದ್ಗೀತೆ ಆರಂಭದ ವಾಕ್ಯ ಧರ್ಮ, ಕೊನೆಯ ವಾಕ್ಯ ಜಯ. ಇಡೀ ಭಗವದ್ಗೀತೆಯ ಅರ್ಥವೇ ಇದರಲ್ಲಿ ಒಳಗೊಂಡಿದೆ. ಧರ್ಮಕ್ಕೆ ಜಯವಾಗಬೇಕು. ಧರ್ಮ ಎಂದರೆ ಒಳ್ಳೆಯದು ಮಾಡುವುದು ಎಂದರ್ಥ. ಒಳ್ಳೆಯದು ಮಾಡುವುದೇ ಭಗವದ್ಗೀತೆಯ ಒಟ್ಟು ಸಾರ ಎಂದು ವಿವೇಕಾನಂದ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಶೀಶಕುಮಾರ್‌ ಹೇಳಿದರು.

 

ಅವರು ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆದ ಗೀತಾ ಜಯಂತಿ ಹಾಗೂ ಮೆಟ್ರಿಕ್‌ ಮೇಳ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಗವದ್ಗೀತೆಯ ಆರಂಭವಾಗುವುದು ಧರ್ಮ ಕ್ಷೇತ್ರ-ಕುರುಕ್ಷೇತ್ರದ ವಾಕ್ಯಗಳಿಂದ. ಕುರು ಅಂದರೆ ಮಾಡು ಎಂದರ್ಥವೂ ಇದೆ. ಅಂದರೆ  ಧರ್ಮ ಕ್ಷೇತ್ರದಲ್ಲಿ ಒಳ್ಳೆಯದು ಮಾಡು ಎಂದರ್ಥ. ಹೀಗಾಗಿ ಮಾಡುವ ಎಲ್ಲಾ ಕೆಸಲಗಳು, ತೊಡಗಿಸಿಕೊಳ್ಳುವ ಎಲ್ಲಾ ಕ್ಷೇತ್ರಗಳಲ್ಲೂ ಒಳ್ಳೆಯದು ಮಾಡು. ಧರ್ಮವನ್ನು ಮಾಡು ಎಂಬುದೇ ಇಡೀ ಗೀತೆಯ ಸಂದೇಶವಾಗಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ಧರ್ಮ ಪಾಲನೆ, ಶಿಕ್ಷಕರು ಶಿಕ್ಷಣ ಕ್ಷೇತ್ರದ ಧರ್ಮ ಪಾಲನೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಆಯಾ ಕ್ಷೇತ್ರದ ಧರ್ಮ ಪಾಲನೆಯೇ ಅಗತ್ಯವಾಗಿದೆ. ಇದನ್ನೇ ಶ್ರೀಕೃಷ್ಣನು ಭಗವದ್ಗೀತೆಯ ಮೂಲಕ ತಿಳಿಸಿದ್ದಾರೆ.  ಇದಕ್ಕಾಗಿಯೇ ಭಗವದ್ಗೀತೆಯು ಒಂದು ಅಧ್ಬುತವಾದ ಮನಶಾಸ್ತ್ರ ಗ್ರಂಥವಾಗಿಯೂ, ಮ್ಯಾನೇಜ್‌ ಮೆಂಟ್‌ ಕ್ಷೇತ್ರಕ್ಕೆ ನಿರ್ವಹಣಾ ಗ್ರಂಥವಾಗಿಯೂ ಪರಮಶ್ರೇಷ್ಟವಾಗಿದೆ. ಇದಕ್ಕಾಗಿಯೇ ಭಗವದ್ಗೀತೆಯನ್ನು ಓದಿದಂತೆಯೇ ಸಕಾರಾತ್ಮಕ ಬದಲಾವಣೆಗಳು ಸಾಧ್ಯವಿದೆ ಎಂದು ಹೇಳಿದರು.

ಮೆಟ್ರಿಕ್‌ ಮೇಳವನ್ನು ಉದ್ಘಾಟಿಸಿದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಭಾರತಿ ದಿನೇಶ್‌ , ಮಕ್ಕಳಿಗೆ ಎಲ್ಲಾ ರೀತಿಯ ಶಿಕ್ಷಣ ಅಗತ್ಯ ಇದೆ. ವ್ಯಾಪಾರ ವಹಿವಾಟಿನ ಮೂಲಕವೂ ಶಿಕ್ಷಣ ಅಗತ್ಯ ಇದೆ ಎಂದರು.

ಸಭಾಧ್ಯಕ್ಷತೆಯನ್ನು ವಿದ್ಯಾರ್ಥಿನಿ ಶ್ರೀಪೂರ್ಣ ಜಿ ಎಲ್‌ ವಹಿಸಿದ್ದರು. ವೇದಿಕೆಯಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಗಳ ಅಧ್ಯಕ್ಷ ಗಣೇಶ್‌ ಪ್ರಸಾದ್‌ ನಾಯರ್‌, ಸಂಚಾಲಕ ಚಂದ್ರಶೇಖರ ನಾಯರ್‌, ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ, ಪಿ ಯು ಕಾಲೇಜಿನ ಪ್ರಾಂಶುಪಾಲ ಸಂಕೀರ್ತನ್‌ ಹೆಬ್ಬಾರ್‌ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

6 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

1 day ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

1 day ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

3 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

5 days ago