Advertisement
ಸುದ್ದಿಗಳು

ಮಕಾಡೆ ಮಲಗಿದ ಜರ್ಮನಿ; ಬಲಿಷ್ಠ ದೇಶಕ್ಕೆ ಬಂತು ಹೀನಾಯ ಸ್ಥಿತಿ : ಇದು ಭಾರತಕ್ಕೆ ತರಲಿದೆಯಾ ಆತಂಕ?

Share
ಪಾಶ್ಚಿಮಾತ್ಯ ದೇಶಗಳಲ್ಲಿ ಆರ್ಥಿಕ ಹಿನ್ನಡೆ (Economic Recession) ಬಗ್ಗೆ ಸುದ್ದಿಗಳನ್ನು ಸಾಕಷ್ಟು ಓದಿದ್ದೇವೆ. ಹೆಚ್ಚಾಗಿ ಅಮೆರಿಕ ಮತ್ತು ಬ್ರಿಟನ್​ನ ಆರ್ಥಿಕ ಸಂಕಷ್ಟದ ಬಗ್ಗೆ ವರದಿಗಳು ಬಹಳಷ್ಟು ಬಂದಿವೆ. ಇದೀಗ ಜರ್ಮನಿ ದೇಶ ಹೆಚ್ಚು ಸದ್ದಿಲ್ಲದೇ ಆರ್ಥಿಕ ಹಿಂಜರಿತಕ್ಕೆ ಸಿಲುಕಿದೆ. 2022ರ ಕೊನೆಯ ತ್ರೈಮಾಸಿಕ ಅವಧಿಯಲ್ಲಿ ಜರ್ಮನಿಯ ಆರ್ಥಿಕತೆ ಶೇ. 0.5ರಷ್ಟು ಕುಸಿತ ಕಂಡಿತ್ತು. ಅಂದರೆ, ಮೈನಸ್ 0.5ಗೆ ಇಳಿದಿತ್ತು. ಇದೀಗ 2023ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಶೇ. 0.3ರಷ್ಟು ಜಿಡಿಪಿ ಕುಸಿತವಾಗಿದೆ. ಅಂದರೆ ಮೈನಸ್ 0.3 ಆಗಿದೆ. ಜರ್ಮನಿ ಸರ್ಕಾರದ ಸಾಂಖ್ಯಿಕ ಕಚೇರಿಯಿಂದ ಈ ಮಾಹಿತಿಯನ್ನು ಮೇ 25ರಂದು ಬಿಡುಗಡೆ ಮಾಡಲಾಗಿದೆ. ಸತತ ಎರಡು ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಮೈನಸ್​ಗೆ ಹೋದರೆ ಅದು ಆರ್ಥಿಕ ಹಿಂಜರಿತದ ಸಂಕೇತವಾಗಿದೆ. 2020ರಲ್ಲಿ ಕೋವಿಡ್ ನಂತರ, 2 ವರ್ಷದ ಅಂತರದಲ್ಲಿ ಜರ್ಮನಿ ಎರಡು ಬಾರಿ ರಿಸಿಶನ್​ಗೆ ಸಿಲುಕಿದಂತಾಗಿದೆ.

ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮಗಳು ಯೂರೋಪಿಯನ್ ದೇಶಗಳ ಬುಡ ಅಲುಗಾಡಿಸಬಹುದು ಎಂದು ಭಾವಿಸಲಾಗಿತ್ತು. ಆದರೆ ಅತಿಹೆಚ್ಚು ಬಾಧಿತವಾಗಿರುವುದು ಬ್ರಿಟನ್ ಮತ್ತು ಜರ್ಮನಿ ಮಾತ್ರವೇ. ಬೇರೆ ಯೂರೋಪಿಯನ್ ದೇಶಗಳು ಆರ್ಥಿಕ ಹಿಂಜರಿತಕ್ಕೆ ಸಿಲುಕುವುದರಿಂದ ಪಾರಾಗಬಹುದು ಎಂದು ತಜ್ಞರು ಹೇಳುತ್ತಾರೆ. ರಿಷಿ ಸುನಕ್ ಪ್ರಧಾನಿಯಾದ ಬಳಿಕ ಬ್ರಿಟನ್ ದೇಶದ ಆರ್ಥಿಕತೆಯೂ ಪ್ರಪಾತಕ್ಕೆ ಬೀಳುವುದರಿಂದ ಬಚಾವ್ ಆಗಿದೆ. ಜರ್ಮನಿ ವಿಚಾರಕ್ಕೆ ಬಂದರೆ, ರಷ್ಯಾ ಉಕ್ರೇನ್ ಯುದ್ಧದಿಂದ ಮುರಿದಿದ್ದ ಸರಬರಾಜು ಸರಪಳಿ ವ್ಯವಸ್ಥೆ ಮತ್ತೆ ಕ್ರೋಢೀಕರಣಗೊಂಡರೂ ಆರ್ಥಿಕತೆಯ ಕುಸಿತವನ್ನು ತಡೆಯಲು ಸಾಧ್ಯವಾಗಿಲ್ಲ. ಹಣದುಬ್ಬರವೇ ಜರ್ಮನಿ ಪಾಲಿಗೆ ಪ್ರಮುಖ ವಿಲನ್ ಆಗಿರುವುದು.

ಜರ್ಮನಿ ಆರ್ಥಿಕ ಹಿಂಜರಿತ ಕಾಣಲು ಪ್ರಮುಖ ಕಾರಣಗಳೇನು?
  • ಹಣದುಬ್ಬರ: ಅಗತ್ಯ ವಸ್ತುಗಳ ಸತತ ಬೆಲೆ ಏರಿಕೆ.
  • ವೆಚ್ಚ ಕಡಿತ: ಜನಸಾಮಾನ್ಯರು ವೆಚ್ಚ ಪ್ರಮಾಣ ತೀರಾ ಕಡಿಮೆ ಮಾಡಿದ್ದು.
  • ಸರ್ಕಾರದಿಂದಲೂ ವೆಚ್ಚ ಕಡಿತ
  • ರಷ್ಯಾ ಉಕ್ರೇನ್ ಯುದ್ಧ ಪರಿಣಾಮ ಪೆಟ್ರೋಲ್, ಗ್ಯಾಸ್ ಸರಬರಾಜಿಗೆ ಅಡೆತಡೆ; ಪೆಟ್ರೋಲ್ ಬೆಲೆ ಏರಿಕೆ

ಜರ್ಮನಿಗೆ ಆರ್ಥಿಕವಾಗಿ ಚೇತರಿಸಿಕೊಳ್ಳುವ ಅವಕಾಶ ಇದೆಯಾ?

ಜರ್ಮನಿ ದೇಶದಲ್ಲಿ ಎಲ್ಲವೂ ತೀರಾ ಹಾಳಾಗಿಲ್ಲ. ಸತತ ಎರಡು ಕ್ವಾರ್ಟರ್ ಮಾತ್ರ ಜಿಡಿಪಿ ಬೆಳವಣಿಗೆ ಮೈನಸ್​ನಲ್ಲಿದೆ. ಆದರೆ, ಹೆಚ್ಚು ಶೀತವಿಲ್ಲದ ಚಳಿಗಾಲ, ಕೈಗಾರಿಕೆಗಳ ಚಟುವಟಿಕೆ ಗರಿಗೆದರಿರುವುದು, ಹೂಡಿಕೆ ಹೆಚ್ಚಾಗಿರುವುದು, ರಫ್ತು ಹೆಚ್ಚಾಗಿರುವುದು, ಆಮದು ಕಡಿಮೆ ಆಗಿರುವುದು ಇವೆಲ್ಲವೂ ಜರ್ಮನಿಗೆ ಪಾಸಿಟಿವ್ ಸಂಕೇತಗಳಾದರೂ, ಸದ್ಯಕ್ಕೆ ಹಿಂಜರಿತ ತಡೆಯುವಷ್ಟು ಇವು ಪರಿಣಾಮಕಾರಿ ಎನಿಸಿಲ್ಲ. ಈ ಪಾಸಿಟಿವ್ ಸಿಗ್ನಲ್​ಗಳು ಮುಂದಿನ ತಿಂಗಳಲ್ಲೂ ಮುಂದುವರಿದರೆ ಜರ್ಮನಿ ಆರ್ಥಿಕ ಹಿಂಜರಿತದ ಸುಳಿಯಿಂದ ಪಾರಾಗಲು ಸಾಧ್ಯವಾಗಬಹುದು.

ಜರ್ಮನಿಗಾದ ರಿಸಿಶನ್ ತೊಂದರೆ ಭಾರತಕ್ಕೂ ಆಗುತ್ತಾ?

ಜರ್ಮನಿ ಆರ್ಥಿಕ ಹಿಂಜರಿತಕ್ಕೆ ಸಿಲುಕಲು ಪ್ರಮುಖ ಕಾರಣವಾಗಿರುವುದು ಅದರ ಜಿಡಿಪಿ ಬೆಳವಣಿಗೆ ಕುಸಿತ ಹಾಗೂ ಪೆಟ್ರೋಲ್ ಅಭಾವ ಎಂಬೆರಡು ಅಂಶಗಳು. ಭಾರತ ಈ ವಿಚಾರದಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಷ್ಯಾ ಉಕ್ರೇನ್ ಯುದ್ಧದಿಂದಾಗಿ ಭಾರತಕ್ಕೆ ರಷ್ಯಾದಿಂದ ಅಗ್ಗದ ಬೆಲೆಗೆ ತೈಲಗಳು ಸಿಗುತ್ತಿವೆ. ಇದರಿಂದ ದೇಶದ ಬೊಕ್ಕಸಕ್ಕೆ ಒಳ್ಳೆಯ ಲಾಭವಾಗುತ್ತಿದೆ. ಭಾರತದ ಜಿಡಿಪಿ ಕೂಡ ಬೇರೆ ಉದಯೋನ್ಮುಖ ಆರ್ಥಿಕತೆಗಳಿಗೆ ಹೋಲಿಸಿದರೆ ವೇಗದಲ್ಲಿದೆ.

ಇನ್ನು, ಅಮೆರಿಕಕ್ಕೆ ತೊಂದರೆ ಆದರೆ ಭಾರತಕ್ಕೆ ಪರಿಣಾಮಗಳುಂಟು. ಯಾಕೆಂದರೆ ಭಾರತದ ಬಹುತೇಕ ಐಟಿ ಕಂಪನಿಗಳಿಗೆ ಆದಾಯ ಮೂಲವೇ ಅಮೆರಿಕಾ. ಆದರೆ, ಜರ್ಮನಿಯೊಂದಿಗೆ ಭಾರತದ ತೀರಾ ದೊಡ್ಡ ವ್ಯಾವಹಾರಿಕ ಸಂಬಂಧವಿಲ್ಲ. ಭಾರತದಲ್ಲಿ ಹೂಡಿಕೆ ಮಾಡಿರುವ ವಿದೇಶಗಳ ಪೈಕಿ ಜರ್ಮನಿ 9ನೇ ಸ್ಥಾನದಲ್ಲಿದೆ. 2021ರಲ್ಲಿ ಜರ್ಮನಿ ಭಾರತಕ್ಕೆ ರೂ 1 ಲಕ್ಷ ಕೋಟಿಯಷ್ಟು ರಫ್ತು ಮಾಡಿತ್ತು. ಆ ವರ್ಷ ಜರ್ಮನಿಗೆ ಭಾರತದಿಂದ ಹೋದ ರಫ್ತು 72,000 ಕೋಟಿ ರೂ. ಇವೇನೂ ಸಾಧಾರಣ ಮೊತ್ತವಲ್ಲವಾದರೂ ಭಾರತಕ್ಕೆ ಸದ್ಯಕ್ಕೆ ದೊಡ್ಡ ಪರಿಣಾಮವಾಗುವ ಸಾಧ್ಯತೆ ಕಡಿಮೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

21 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago