ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸಿದ ಜರ್ಮನ್ ಸಚಿವ : ಭಾರತದ ಡಿಜಿಟಲ್‌ ಮೂಲ ಸೌಕರ್ಯದ ಬಗ್ಗೆ ಆಶ್ಚರ್ಯ

August 21, 2023
6:32 PM
ಜರ್ಮನಿಯ ಡಿಜಿಟಲ್ ಮತ್ತು ಸಾರಿಗೆ ಫೆಡೆರಲ್ ಮಂತ್ರಿ ವೋಲ್ಕರ್ ವಿಸ್ಸಿಂಗ್, ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬೆಂಗಳೂರಿನ ಮಾರುಕಟ್ಟೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಡಿಜಿಟಲ್ ಪೇಮೆಂಟ್ ಮಾಡಿ ತರಕಾರಿ ಖರೀದಿಸಿರುವ ಫೋಟೋ ಮತ್ತು ವಿಡಿಯೋವನ್ನು ಜರ್ಮನಿ ಅಂಬೆಸ್ಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.

ಭಾರತ ಇತ್ತೀಚೆಗೆ ಅನೇಕ ವಿಚಾರದಲ್ಲಿ ಮುಂದುವರೆದಿದೆ. ಅದರಲ್ಲೂ ಡಿಜಿಟಲ್‌ ಪೇಮೆಂಟ್‌ ವಿಷಯದಲ್ಲಂತೂ ಸಾಕಷ್ಟು ಬೆಳವಣಿಗೆ ಕಂಡಿದೆ. ಬೆಂಗಳೂರಿನ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸಿದ ಜರ್ಮನ್ ಸಚಿವ ಭಾರತದ ಡಿಜಿಟಲ್ ಯುಗದ ಬಗ್ಗೆ ಹಾಡಿ ಹೊಗಳಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಡಿಜಿಟಲ್ ಪಾವತಿ ಆರಂಭವಾಗಿ ವರ್ಷಗಳೇ ಕಳೆದಿವೆ. ಇಂದು ಒಂದು ಟೀ ಕುಡಿದರೂ ಡಿಜಿಟಲ್ ಮೂಲಕವೇ ಹಣ ಪಾವತಿಸುತ್ತಾರೆ. ಸಾರಿಗೆ ವಾಹನಗಳಲ್ಲಿಯೂ ಯುಪಿಐ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇನ್ನು ಮಾರುಕಟ್ಟೆಗಳಲ್ಲಿ ಎಲ್ಲಾ ಅಂಗಡಿಗಳಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಇದೆ. ಈ ವ್ಯವಸ್ಥೆಯಿಂದ ಚಿಲ್ಲರೆ ಕೊಡುವ ಸಮಸ್ಯೆಗೆ ಕಡಿವಾಣ ಬಿದ್ದಿದೆ.

ಕೇವಲ ತರಕಾರಿ ಅಂಗಡಿ ಅಲ್ಲದೇ ವ್ಯವಹಾರ ನಡೆಯುವ ಪ್ರತಿ ಕ್ಷೇತ್ರದ ಹಳ್ಳಿ ಹಳ್ಳಿಗೂ ಡಿಜಿಟಲ್ ಪಾವತಿ ಕಾಲಿಟ್ಟಿದೆ. ಒಬ್ಬರ ಖಾತೆಯಿಂದ ಮತ್ತೊಂದು ಖಾತೆಗೂ ಹಣವನ್ನು ಇಂದು ಸುಲಭವಾಗಿ ಕಳಿಸಬಹುದು. ಜರ್ಮನಿಯ ಡಿಜಿಟಲ್ ಮತ್ತು ಸಾರಿಗೆ ಫೆಡೆರಲ್ ಮಂತ್ರಿ ವೋಲ್ಕರ್ ವಿಸ್ಸಿಂಗ್, ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬೆಂಗಳೂರಿನ ಮಾರುಕಟ್ಟೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಡಿಜಿಟಲ್ ಪೇಮೆಂಟ್ ಮಾಡಿ ತರಕಾರಿ ಖರೀದಿಸಿರುವ ಫೋಟೋ ಮತ್ತು ವಿಡಿಯೋವನ್ನು ಜರ್ಮನಿ ಅಂಬೆಸ್ಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.

ಭಾರತದ ಡಿಜಿಟಲ್ ಯುಗದ ಬಗ್ಗೆ ಹೇಳಿದ್ದೇನು? : ಭಾರತದಲ್ಲಿಯ ಡಿಜಿಟಲ್ ಮೂಲ ಸೌಕರ್ಯ ಇಲ್ಲಿಯ ಯಶಸ್ಸು. ಇಲ್ಲಿಯ ಪ್ರತಿಯೊಬ್ಬರು ಯುಪಿಐ ವ್ಯವಸ್ಥೆಯನ್ನು ಬಳಸುತ್ತಾರೆ. ಕೆಲವೇ ಸೆಕೆಂಡ್ ಗಳಲ್ಲಿ ಯುಪಿಐ ಮೂಲಕ ವ್ಯವಹಾರ ನಡೆಸಬಹುದಾಗಿದೆ. ವೋಲ್ಕರ್ ವಿಸ್ಸಿಂಗ್ ಅವರ ಸಹ ಈ ಸರಳ ವಿಧಾನದ ಮೂಲಕ ವ್ಯವಹರಿಸುವ ಅನುಭವವನ್ನು ಪಡೆದುಕೊಂಡರು ಎಂದು ಬರೆಯಲಾಗಿದೆ. ಆಗಸ್ಟ್ 19ರಂದು ಬೆಂಗಳೂರಿನಲ್ಲಿ ನಡೆದ ಜಿ20 ಡಿಜಿಟಲ್ ಮಂತ್ರಿಗಳ ಸಭೆಯಲ್ಲಿ ಸಾರಿಗೆ ಫೆಡೆರಲ್ ಮಂತ್ರಿ ವೋಲ್ಕರ್ ವಿಸ್ಸಿಂಗ್ ಭಾಗಿಯಾಗಿದ್ದರು. ಈ ಸಮಯದಲ್ಲಿ ಬೆಂಗಳೂರಿನ ಮಾರುಕಟ್ಟೆಯಲ್ಲಿ ಸುತ್ತಾಡಿದ್ದಾರೆ.

Source : Twitter

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ
July 13, 2026
2:42 PM
by: ಸಾಯಿಶೇಖರ್ ಕರಿಕಳ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror