Advertisement
ಪ್ರಮುಖ

ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸಿದ ಜರ್ಮನ್ ಸಚಿವ : ಭಾರತದ ಡಿಜಿಟಲ್‌ ಮೂಲ ಸೌಕರ್ಯದ ಬಗ್ಗೆ ಆಶ್ಚರ್ಯ

Share

ಭಾರತ ಇತ್ತೀಚೆಗೆ ಅನೇಕ ವಿಚಾರದಲ್ಲಿ ಮುಂದುವರೆದಿದೆ. ಅದರಲ್ಲೂ ಡಿಜಿಟಲ್‌ ಪೇಮೆಂಟ್‌ ವಿಷಯದಲ್ಲಂತೂ ಸಾಕಷ್ಟು ಬೆಳವಣಿಗೆ ಕಂಡಿದೆ. ಬೆಂಗಳೂರಿನ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸಿದ ಜರ್ಮನ್ ಸಚಿವ ಭಾರತದ ಡಿಜಿಟಲ್ ಯುಗದ ಬಗ್ಗೆ ಹಾಡಿ ಹೊಗಳಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

Advertisement
Advertisement

ಭಾರತದಲ್ಲಿ ಡಿಜಿಟಲ್ ಪಾವತಿ ಆರಂಭವಾಗಿ ವರ್ಷಗಳೇ ಕಳೆದಿವೆ. ಇಂದು ಒಂದು ಟೀ ಕುಡಿದರೂ ಡಿಜಿಟಲ್ ಮೂಲಕವೇ ಹಣ ಪಾವತಿಸುತ್ತಾರೆ. ಸಾರಿಗೆ ವಾಹನಗಳಲ್ಲಿಯೂ ಯುಪಿಐ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇನ್ನು ಮಾರುಕಟ್ಟೆಗಳಲ್ಲಿ ಎಲ್ಲಾ ಅಂಗಡಿಗಳಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಇದೆ. ಈ ವ್ಯವಸ್ಥೆಯಿಂದ ಚಿಲ್ಲರೆ ಕೊಡುವ ಸಮಸ್ಯೆಗೆ ಕಡಿವಾಣ ಬಿದ್ದಿದೆ.

Advertisement

ಕೇವಲ ತರಕಾರಿ ಅಂಗಡಿ ಅಲ್ಲದೇ ವ್ಯವಹಾರ ನಡೆಯುವ ಪ್ರತಿ ಕ್ಷೇತ್ರದ ಹಳ್ಳಿ ಹಳ್ಳಿಗೂ ಡಿಜಿಟಲ್ ಪಾವತಿ ಕಾಲಿಟ್ಟಿದೆ. ಒಬ್ಬರ ಖಾತೆಯಿಂದ ಮತ್ತೊಂದು ಖಾತೆಗೂ ಹಣವನ್ನು ಇಂದು ಸುಲಭವಾಗಿ ಕಳಿಸಬಹುದು. ಜರ್ಮನಿಯ ಡಿಜಿಟಲ್ ಮತ್ತು ಸಾರಿಗೆ ಫೆಡೆರಲ್ ಮಂತ್ರಿ ವೋಲ್ಕರ್ ವಿಸ್ಸಿಂಗ್, ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬೆಂಗಳೂರಿನ ಮಾರುಕಟ್ಟೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಡಿಜಿಟಲ್ ಪೇಮೆಂಟ್ ಮಾಡಿ ತರಕಾರಿ ಖರೀದಿಸಿರುವ ಫೋಟೋ ಮತ್ತು ವಿಡಿಯೋವನ್ನು ಜರ್ಮನಿ ಅಂಬೆಸ್ಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.

Advertisement

ಭಾರತದ ಡಿಜಿಟಲ್ ಯುಗದ ಬಗ್ಗೆ ಹೇಳಿದ್ದೇನು? : ಭಾರತದಲ್ಲಿಯ ಡಿಜಿಟಲ್ ಮೂಲ ಸೌಕರ್ಯ ಇಲ್ಲಿಯ ಯಶಸ್ಸು. ಇಲ್ಲಿಯ ಪ್ರತಿಯೊಬ್ಬರು ಯುಪಿಐ ವ್ಯವಸ್ಥೆಯನ್ನು ಬಳಸುತ್ತಾರೆ. ಕೆಲವೇ ಸೆಕೆಂಡ್ ಗಳಲ್ಲಿ ಯುಪಿಐ ಮೂಲಕ ವ್ಯವಹಾರ ನಡೆಸಬಹುದಾಗಿದೆ. ವೋಲ್ಕರ್ ವಿಸ್ಸಿಂಗ್ ಅವರ ಸಹ ಈ ಸರಳ ವಿಧಾನದ ಮೂಲಕ ವ್ಯವಹರಿಸುವ ಅನುಭವವನ್ನು ಪಡೆದುಕೊಂಡರು ಎಂದು ಬರೆಯಲಾಗಿದೆ. ಆಗಸ್ಟ್ 19ರಂದು ಬೆಂಗಳೂರಿನಲ್ಲಿ ನಡೆದ ಜಿ20 ಡಿಜಿಟಲ್ ಮಂತ್ರಿಗಳ ಸಭೆಯಲ್ಲಿ ಸಾರಿಗೆ ಫೆಡೆರಲ್ ಮಂತ್ರಿ ವೋಲ್ಕರ್ ವಿಸ್ಸಿಂಗ್ ಭಾಗಿಯಾಗಿದ್ದರು. ಈ ಸಮಯದಲ್ಲಿ ಬೆಂಗಳೂರಿನ ಮಾರುಕಟ್ಟೆಯಲ್ಲಿ ಸುತ್ತಾಡಿದ್ದಾರೆ.

Source : Twitter

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

13 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

13 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

13 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

13 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

13 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

13 hours ago