ಭಾರತ ಇತ್ತೀಚೆಗೆ ಅನೇಕ ವಿಚಾರದಲ್ಲಿ ಮುಂದುವರೆದಿದೆ. ಅದರಲ್ಲೂ ಡಿಜಿಟಲ್ ಪೇಮೆಂಟ್ ವಿಷಯದಲ್ಲಂತೂ ಸಾಕಷ್ಟು ಬೆಳವಣಿಗೆ ಕಂಡಿದೆ. ಬೆಂಗಳೂರಿನ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸಿದ ಜರ್ಮನ್ ಸಚಿವ ಭಾರತದ ಡಿಜಿಟಲ್ ಯುಗದ ಬಗ್ಗೆ ಹಾಡಿ ಹೊಗಳಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿ ಡಿಜಿಟಲ್ ಪಾವತಿ ಆರಂಭವಾಗಿ ವರ್ಷಗಳೇ ಕಳೆದಿವೆ. ಇಂದು ಒಂದು ಟೀ ಕುಡಿದರೂ ಡಿಜಿಟಲ್ ಮೂಲಕವೇ ಹಣ ಪಾವತಿಸುತ್ತಾರೆ. ಸಾರಿಗೆ ವಾಹನಗಳಲ್ಲಿಯೂ ಯುಪಿಐ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇನ್ನು ಮಾರುಕಟ್ಟೆಗಳಲ್ಲಿ ಎಲ್ಲಾ ಅಂಗಡಿಗಳಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಇದೆ. ಈ ವ್ಯವಸ್ಥೆಯಿಂದ ಚಿಲ್ಲರೆ ಕೊಡುವ ಸಮಸ್ಯೆಗೆ ಕಡಿವಾಣ ಬಿದ್ದಿದೆ.
ಕೇವಲ ತರಕಾರಿ ಅಂಗಡಿ ಅಲ್ಲದೇ ವ್ಯವಹಾರ ನಡೆಯುವ ಪ್ರತಿ ಕ್ಷೇತ್ರದ ಹಳ್ಳಿ ಹಳ್ಳಿಗೂ ಡಿಜಿಟಲ್ ಪಾವತಿ ಕಾಲಿಟ್ಟಿದೆ. ಒಬ್ಬರ ಖಾತೆಯಿಂದ ಮತ್ತೊಂದು ಖಾತೆಗೂ ಹಣವನ್ನು ಇಂದು ಸುಲಭವಾಗಿ ಕಳಿಸಬಹುದು. ಜರ್ಮನಿಯ ಡಿಜಿಟಲ್ ಮತ್ತು ಸಾರಿಗೆ ಫೆಡೆರಲ್ ಮಂತ್ರಿ ವೋಲ್ಕರ್ ವಿಸ್ಸಿಂಗ್, ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬೆಂಗಳೂರಿನ ಮಾರುಕಟ್ಟೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಡಿಜಿಟಲ್ ಪೇಮೆಂಟ್ ಮಾಡಿ ತರಕಾರಿ ಖರೀದಿಸಿರುವ ಫೋಟೋ ಮತ್ತು ವಿಡಿಯೋವನ್ನು ಜರ್ಮನಿ ಅಂಬೆಸ್ಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
ಭಾರತದ ಡಿಜಿಟಲ್ ಯುಗದ ಬಗ್ಗೆ ಹೇಳಿದ್ದೇನು? : ಭಾರತದಲ್ಲಿಯ ಡಿಜಿಟಲ್ ಮೂಲ ಸೌಕರ್ಯ ಇಲ್ಲಿಯ ಯಶಸ್ಸು. ಇಲ್ಲಿಯ ಪ್ರತಿಯೊಬ್ಬರು ಯುಪಿಐ ವ್ಯವಸ್ಥೆಯನ್ನು ಬಳಸುತ್ತಾರೆ. ಕೆಲವೇ ಸೆಕೆಂಡ್ ಗಳಲ್ಲಿ ಯುಪಿಐ ಮೂಲಕ ವ್ಯವಹಾರ ನಡೆಸಬಹುದಾಗಿದೆ. ವೋಲ್ಕರ್ ವಿಸ್ಸಿಂಗ್ ಅವರ ಸಹ ಈ ಸರಳ ವಿಧಾನದ ಮೂಲಕ ವ್ಯವಹರಿಸುವ ಅನುಭವವನ್ನು ಪಡೆದುಕೊಂಡರು ಎಂದು ಬರೆಯಲಾಗಿದೆ. ಆಗಸ್ಟ್ 19ರಂದು ಬೆಂಗಳೂರಿನಲ್ಲಿ ನಡೆದ ಜಿ20 ಡಿಜಿಟಲ್ ಮಂತ್ರಿಗಳ ಸಭೆಯಲ್ಲಿ ಸಾರಿಗೆ ಫೆಡೆರಲ್ ಮಂತ್ರಿ ವೋಲ್ಕರ್ ವಿಸ್ಸಿಂಗ್ ಭಾಗಿಯಾಗಿದ್ದರು. ಈ ಸಮಯದಲ್ಲಿ ಬೆಂಗಳೂರಿನ ಮಾರುಕಟ್ಟೆಯಲ್ಲಿ ಸುತ್ತಾಡಿದ್ದಾರೆ.
Source : Twitter
ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…
ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್ನ ಪ್ರಬಲ ಚಂಡಮಾರುತ…
ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…