ದುಪ್ಪಟ್ಟು ದರ ಕೊಟ್ಟು ಖರೀದಿಸುವ ರಾಸುಗಳಿಗೆ ರೈತರು ತಪ್ಪದೇ ಜೀವ ವಿಮೆ ಮಾಡಿಸಬೇಕೆಂದು ಹಾಲು ಒಕ್ಕೂಟದ ನಿರ್ದೇಶಕ ಎನ್.ಹನುಮೇಶ್ ತಿಳಿಸಿದರು.
ಕೋಲಾರ –ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮತ್ತು ಶ್ರೀನಿವಾಸಪುರ ಶಿಬಿರ ಕಚೇರಿ ಅವರಿಂದ ಏರ್ಪಡಿಸಿದ್ದ ಸಹಕಾರ ಸಂಘಗಳಲ್ಲಿನ ನಿವೃತ್ತರಿಗೆ ಪ್ರೋತ್ಸಾಹಧನ ಮತ್ತು ಮೃತ ರಾಸುಗಳ ಪಾಲಕರಿಗೆ ಜೀವ ವಿಮಾ ಚೆಕ್ ವಿತರಿಸಿ ಮಾತನಾಡಿದರು. ಮಳೆಯಾಶ್ರಿತ ಕೃಷಿ ಬೆಳೆಗಳನ್ನು ನಂಬಿದರೆ ಜೀವನ ಮಾಡುವುದು ಕಷ್ಟಕರ. ನೀರಾವರಿ ಇಲ್ಲದೇ ಕಷ್ಟವಾಗುತ್ತಿರುವುದರಿಂದ ಹೈನೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದರು. ಪ್ರಗತಿ ಹೊಂದಿರುವ ಸಹಕಾರ ಸಂಘಗಳ ಹಾಲು ಡೇರಿಗಳಿಗೆ ಗುಣಮಟ್ಟದ ಹಾಲು ಹಾಕುವ ಮೂಲಕ ಹೆಚ್ಚಿನ ಆದಾಯ ಗಳಿಸಬಹುದು. ಪ್ರತಿ ಹಸುಗಳಿಗೆ ವಿಮಾ ಸೌಲಭ್ಯ ಮಾಡಿಸಬೇಕು. ಒಂದು ವೇಳೆ ಅನಾರೋಗ್ಯದಿಂದ ಹಸುಗಳು ಮೃತಪಟ್ಟರೆ ವಿಮಾ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದರು.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…