ದುಪ್ಪಟ್ಟು ದರ ಕೊಟ್ಟು ಖರೀದಿಸುವ ರಾಸುಗಳಿಗೆ ರೈತರು ತಪ್ಪದೇ ಜೀವ ವಿಮೆ ಮಾಡಿಸಬೇಕೆಂದು ಹಾಲು ಒಕ್ಕೂಟದ ನಿರ್ದೇಶಕ ಎನ್.ಹನುಮೇಶ್ ತಿಳಿಸಿದರು.
ಕೋಲಾರ –ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮತ್ತು ಶ್ರೀನಿವಾಸಪುರ ಶಿಬಿರ ಕಚೇರಿ ಅವರಿಂದ ಏರ್ಪಡಿಸಿದ್ದ ಸಹಕಾರ ಸಂಘಗಳಲ್ಲಿನ ನಿವೃತ್ತರಿಗೆ ಪ್ರೋತ್ಸಾಹಧನ ಮತ್ತು ಮೃತ ರಾಸುಗಳ ಪಾಲಕರಿಗೆ ಜೀವ ವಿಮಾ ಚೆಕ್ ವಿತರಿಸಿ ಮಾತನಾಡಿದರು. ಮಳೆಯಾಶ್ರಿತ ಕೃಷಿ ಬೆಳೆಗಳನ್ನು ನಂಬಿದರೆ ಜೀವನ ಮಾಡುವುದು ಕಷ್ಟಕರ. ನೀರಾವರಿ ಇಲ್ಲದೇ ಕಷ್ಟವಾಗುತ್ತಿರುವುದರಿಂದ ಹೈನೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದರು. ಪ್ರಗತಿ ಹೊಂದಿರುವ ಸಹಕಾರ ಸಂಘಗಳ ಹಾಲು ಡೇರಿಗಳಿಗೆ ಗುಣಮಟ್ಟದ ಹಾಲು ಹಾಕುವ ಮೂಲಕ ಹೆಚ್ಚಿನ ಆದಾಯ ಗಳಿಸಬಹುದು. ಪ್ರತಿ ಹಸುಗಳಿಗೆ ವಿಮಾ ಸೌಲಭ್ಯ ಮಾಡಿಸಬೇಕು. ಒಂದು ವೇಳೆ ಅನಾರೋಗ್ಯದಿಂದ ಹಸುಗಳು ಮೃತಪಟ್ಟರೆ ವಿಮಾ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…