ದುಪ್ಪಟ್ಟು ದರ ಕೊಟ್ಟು ಖರೀದಿಸುವ ರಾಸುಗಳಿಗೆ ರೈತರು ತಪ್ಪದೇ ಜೀವ ವಿಮೆ ಮಾಡಿಸಬೇಕೆಂದು ಹಾಲು ಒಕ್ಕೂಟದ ನಿರ್ದೇಶಕ ಎನ್.ಹನುಮೇಶ್ ತಿಳಿಸಿದರು.
ಕೋಲಾರ –ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮತ್ತು ಶ್ರೀನಿವಾಸಪುರ ಶಿಬಿರ ಕಚೇರಿ ಅವರಿಂದ ಏರ್ಪಡಿಸಿದ್ದ ಸಹಕಾರ ಸಂಘಗಳಲ್ಲಿನ ನಿವೃತ್ತರಿಗೆ ಪ್ರೋತ್ಸಾಹಧನ ಮತ್ತು ಮೃತ ರಾಸುಗಳ ಪಾಲಕರಿಗೆ ಜೀವ ವಿಮಾ ಚೆಕ್ ವಿತರಿಸಿ ಮಾತನಾಡಿದರು. ಮಳೆಯಾಶ್ರಿತ ಕೃಷಿ ಬೆಳೆಗಳನ್ನು ನಂಬಿದರೆ ಜೀವನ ಮಾಡುವುದು ಕಷ್ಟಕರ. ನೀರಾವರಿ ಇಲ್ಲದೇ ಕಷ್ಟವಾಗುತ್ತಿರುವುದರಿಂದ ಹೈನೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದರು. ಪ್ರಗತಿ ಹೊಂದಿರುವ ಸಹಕಾರ ಸಂಘಗಳ ಹಾಲು ಡೇರಿಗಳಿಗೆ ಗುಣಮಟ್ಟದ ಹಾಲು ಹಾಕುವ ಮೂಲಕ ಹೆಚ್ಚಿನ ಆದಾಯ ಗಳಿಸಬಹುದು. ಪ್ರತಿ ಹಸುಗಳಿಗೆ ವಿಮಾ ಸೌಲಭ್ಯ ಮಾಡಿಸಬೇಕು. ಒಂದು ವೇಳೆ ಅನಾರೋಗ್ಯದಿಂದ ಹಸುಗಳು ಮೃತಪಟ್ಟರೆ ವಿಮಾ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದರು.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…