ದುಪ್ಪಟ್ಟು ದರ ಕೊಟ್ಟು ಖರೀದಿಸುವ ರಾಸುಗಳಿಗೆ ರೈತರು ತಪ್ಪದೇ ಜೀವ ವಿಮೆ ಮಾಡಿಸಬೇಕೆಂದು ಹಾಲು ಒಕ್ಕೂಟದ ನಿರ್ದೇಶಕ ಎನ್.ಹನುಮೇಶ್ ತಿಳಿಸಿದರು.
ಕೋಲಾರ –ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮತ್ತು ಶ್ರೀನಿವಾಸಪುರ ಶಿಬಿರ ಕಚೇರಿ ಅವರಿಂದ ಏರ್ಪಡಿಸಿದ್ದ ಸಹಕಾರ ಸಂಘಗಳಲ್ಲಿನ ನಿವೃತ್ತರಿಗೆ ಪ್ರೋತ್ಸಾಹಧನ ಮತ್ತು ಮೃತ ರಾಸುಗಳ ಪಾಲಕರಿಗೆ ಜೀವ ವಿಮಾ ಚೆಕ್ ವಿತರಿಸಿ ಮಾತನಾಡಿದರು. ಮಳೆಯಾಶ್ರಿತ ಕೃಷಿ ಬೆಳೆಗಳನ್ನು ನಂಬಿದರೆ ಜೀವನ ಮಾಡುವುದು ಕಷ್ಟಕರ. ನೀರಾವರಿ ಇಲ್ಲದೇ ಕಷ್ಟವಾಗುತ್ತಿರುವುದರಿಂದ ಹೈನೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದರು. ಪ್ರಗತಿ ಹೊಂದಿರುವ ಸಹಕಾರ ಸಂಘಗಳ ಹಾಲು ಡೇರಿಗಳಿಗೆ ಗುಣಮಟ್ಟದ ಹಾಲು ಹಾಕುವ ಮೂಲಕ ಹೆಚ್ಚಿನ ಆದಾಯ ಗಳಿಸಬಹುದು. ಪ್ರತಿ ಹಸುಗಳಿಗೆ ವಿಮಾ ಸೌಲಭ್ಯ ಮಾಡಿಸಬೇಕು. ಒಂದು ವೇಳೆ ಅನಾರೋಗ್ಯದಿಂದ ಹಸುಗಳು ಮೃತಪಟ್ಟರೆ ವಿಮಾ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದರು.
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…