ದುಪ್ಪಟ್ಟು ದರ ಕೊಟ್ಟು ಖರೀದಿಸುವ ರಾಸುಗಳಿಗೆ ರೈತರು ತಪ್ಪದೇ ಜೀವ ವಿಮೆ ಮಾಡಿಸಬೇಕೆಂದು ಹಾಲು ಒಕ್ಕೂಟದ ನಿರ್ದೇಶಕ ಎನ್.ಹನುಮೇಶ್ ತಿಳಿಸಿದರು.
ಕೋಲಾರ –ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮತ್ತು ಶ್ರೀನಿವಾಸಪುರ ಶಿಬಿರ ಕಚೇರಿ ಅವರಿಂದ ಏರ್ಪಡಿಸಿದ್ದ ಸಹಕಾರ ಸಂಘಗಳಲ್ಲಿನ ನಿವೃತ್ತರಿಗೆ ಪ್ರೋತ್ಸಾಹಧನ ಮತ್ತು ಮೃತ ರಾಸುಗಳ ಪಾಲಕರಿಗೆ ಜೀವ ವಿಮಾ ಚೆಕ್ ವಿತರಿಸಿ ಮಾತನಾಡಿದರು. ಮಳೆಯಾಶ್ರಿತ ಕೃಷಿ ಬೆಳೆಗಳನ್ನು ನಂಬಿದರೆ ಜೀವನ ಮಾಡುವುದು ಕಷ್ಟಕರ. ನೀರಾವರಿ ಇಲ್ಲದೇ ಕಷ್ಟವಾಗುತ್ತಿರುವುದರಿಂದ ಹೈನೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದರು. ಪ್ರಗತಿ ಹೊಂದಿರುವ ಸಹಕಾರ ಸಂಘಗಳ ಹಾಲು ಡೇರಿಗಳಿಗೆ ಗುಣಮಟ್ಟದ ಹಾಲು ಹಾಕುವ ಮೂಲಕ ಹೆಚ್ಚಿನ ಆದಾಯ ಗಳಿಸಬಹುದು. ಪ್ರತಿ ಹಸುಗಳಿಗೆ ವಿಮಾ ಸೌಲಭ್ಯ ಮಾಡಿಸಬೇಕು. ಒಂದು ವೇಳೆ ಅನಾರೋಗ್ಯದಿಂದ ಹಸುಗಳು ಮೃತಪಟ್ಟರೆ ವಿಮಾ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದರು.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…