ದುಪ್ಪಟ್ಟು ದರ ಕೊಟ್ಟು ಖರೀದಿಸುವ ರಾಸುಗಳಿಗೆ ರೈತರು ತಪ್ಪದೇ ಜೀವ ವಿಮೆ ಮಾಡಿಸಬೇಕೆಂದು ಹಾಲು ಒಕ್ಕೂಟದ ನಿರ್ದೇಶಕ ಎನ್.ಹನುಮೇಶ್ ತಿಳಿಸಿದರು.
ಕೋಲಾರ –ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮತ್ತು ಶ್ರೀನಿವಾಸಪುರ ಶಿಬಿರ ಕಚೇರಿ ಅವರಿಂದ ಏರ್ಪಡಿಸಿದ್ದ ಸಹಕಾರ ಸಂಘಗಳಲ್ಲಿನ ನಿವೃತ್ತರಿಗೆ ಪ್ರೋತ್ಸಾಹಧನ ಮತ್ತು ಮೃತ ರಾಸುಗಳ ಪಾಲಕರಿಗೆ ಜೀವ ವಿಮಾ ಚೆಕ್ ವಿತರಿಸಿ ಮಾತನಾಡಿದರು. ಮಳೆಯಾಶ್ರಿತ ಕೃಷಿ ಬೆಳೆಗಳನ್ನು ನಂಬಿದರೆ ಜೀವನ ಮಾಡುವುದು ಕಷ್ಟಕರ. ನೀರಾವರಿ ಇಲ್ಲದೇ ಕಷ್ಟವಾಗುತ್ತಿರುವುದರಿಂದ ಹೈನೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದರು. ಪ್ರಗತಿ ಹೊಂದಿರುವ ಸಹಕಾರ ಸಂಘಗಳ ಹಾಲು ಡೇರಿಗಳಿಗೆ ಗುಣಮಟ್ಟದ ಹಾಲು ಹಾಕುವ ಮೂಲಕ ಹೆಚ್ಚಿನ ಆದಾಯ ಗಳಿಸಬಹುದು. ಪ್ರತಿ ಹಸುಗಳಿಗೆ ವಿಮಾ ಸೌಲಭ್ಯ ಮಾಡಿಸಬೇಕು. ಒಂದು ವೇಳೆ ಅನಾರೋಗ್ಯದಿಂದ ಹಸುಗಳು ಮೃತಪಟ್ಟರೆ ವಿಮಾ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…