ದುಪ್ಪಟ್ಟು ದರ ಕೊಟ್ಟು ಖರೀದಿಸುವ ರಾಸುಗಳಿಗೆ ರೈತರು ತಪ್ಪದೇ ಜೀವ ವಿಮೆ ಮಾಡಿಸಬೇಕೆಂದು ಹಾಲು ಒಕ್ಕೂಟದ ನಿರ್ದೇಶಕ ಎನ್.ಹನುಮೇಶ್ ತಿಳಿಸಿದರು.
ಕೋಲಾರ –ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮತ್ತು ಶ್ರೀನಿವಾಸಪುರ ಶಿಬಿರ ಕಚೇರಿ ಅವರಿಂದ ಏರ್ಪಡಿಸಿದ್ದ ಸಹಕಾರ ಸಂಘಗಳಲ್ಲಿನ ನಿವೃತ್ತರಿಗೆ ಪ್ರೋತ್ಸಾಹಧನ ಮತ್ತು ಮೃತ ರಾಸುಗಳ ಪಾಲಕರಿಗೆ ಜೀವ ವಿಮಾ ಚೆಕ್ ವಿತರಿಸಿ ಮಾತನಾಡಿದರು. ಮಳೆಯಾಶ್ರಿತ ಕೃಷಿ ಬೆಳೆಗಳನ್ನು ನಂಬಿದರೆ ಜೀವನ ಮಾಡುವುದು ಕಷ್ಟಕರ. ನೀರಾವರಿ ಇಲ್ಲದೇ ಕಷ್ಟವಾಗುತ್ತಿರುವುದರಿಂದ ಹೈನೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದರು. ಪ್ರಗತಿ ಹೊಂದಿರುವ ಸಹಕಾರ ಸಂಘಗಳ ಹಾಲು ಡೇರಿಗಳಿಗೆ ಗುಣಮಟ್ಟದ ಹಾಲು ಹಾಕುವ ಮೂಲಕ ಹೆಚ್ಚಿನ ಆದಾಯ ಗಳಿಸಬಹುದು. ಪ್ರತಿ ಹಸುಗಳಿಗೆ ವಿಮಾ ಸೌಲಭ್ಯ ಮಾಡಿಸಬೇಕು. ಒಂದು ವೇಳೆ ಅನಾರೋಗ್ಯದಿಂದ ಹಸುಗಳು ಮೃತಪಟ್ಟರೆ ವಿಮಾ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದರು.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…