Advertisement
MIRROR FOCUS

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

Share

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ ಆಫ್ರಿಕಾದ ರಾಷ್ಟ್ರವಾದ ಘಾನಾ ತನ್ನ ರೈತರಿಗೆ ನೀಡುವ ಮೂಲ ಧಾರಣೆಯಲ್ಲಿ ಕೋಕೋ ದರವನ್ನು ಕಡಿತಗೊಳಿಸಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಮೆಟ್ರಿಕ್ ಟನ್‌ಗೆ ಸುಮಾರು $4,000 ಮಟ್ಟಕ್ಕೆ ಬೆಲೆ ಇಳಿದಿರುವುದರಿಂದ, ಹೆಚ್ಚಿನ ಬೇಡಿಕೆಯನ್ನು ಉತ್ತೇಜಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಘಾನಾ ವಿಶ್ವದ ಎರಡನೇ ಅತಿದೊಡ್ಡ ಕೋಕೋ ಉತ್ಪಾದಕ ರಾಷ್ಟ್ರವಾಗಿದೆ.

ಘಾನಾ ಕೊಕೋ ಬೋರ್ಡ್‌ ಈ ಹಿಂದೆ ನಿಗದಿಪಡಿಸಿದ್ದ ರೈತರ ಮೂಲ ಧಾರಣೆ ದರ ಪ್ರತಿ ಟನ್‌ಗೆ ಸುಮಾರು $5,300 ಆಗಿತ್ತು. ಈ ಬಾರಿ ಈ ದರವನ್ನು $3,580 ಪ್ರತಿ ಮೆಟ್ರಿಕ್ ಟನ್‌ಗೆ ಇಳಿಸಲಾಗಿದೆ. ಕೋಕೋ ಬೇಡಿಕೆ ಕುಸಿದಿರುವುದರಿಂದ ರೈತರಿಗೆ ಹಣ ಪಾವತಿಸುವುದು ಅನೇಕರಿಗೆ ಕಷ್ಟವಾಗಿದೆ. ಪಾವತಿ ವಿಳಂಬದ ಪರಿಣಾಮವಾಗಿ ಸಾವಿರಾರು ರೈತರು ಕೃಷಿ ನಿರ್ವಹಣೆ ಸೇರಿದಂತೆ ಇತರ ಸಮಸ್ಯೆಗಳಿಂದ ಪರದಾಡಿದ್ದಾರೆ. ಮಾರಾಟವಾಗದ ಕೋಕೋ ಬೀನ್ಸ್‌ಗಳು ತೋಟಗಳಲ್ಲಿ ರಾಶಿಯಾಗಿ ಬಿದ್ದಿರುವುದಾಗಿ ವರದಿಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಅಧಿಕಾರಿಗಳ ಪ್ರಕಾರ, ಪರಿಣಾಮಕ್ಕೊಳಗಾದ ಎಲ್ಲಾ ಕೋಕೋ ರೈತರಿಗೆ ತಕ್ಷಣ ಮರುಪಾವತಿಯನ್ನು ಪ್ರಾರಂಭಿಸಲು ಸರ್ಕಾರವು ಕೊಕೋ ಬೋರ್ಡ್‌ ಗೆ ನಿರ್ದೇಶನ ನೀಡಿದೆ. ಜಾಗತಿಕ ಕೋಕೋ ಮಾರುಕಟ್ಟೆಯ ಚಲನೆ ಘಾನಾ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ನೀತಿ ನಿರ್ಣಯಗಳು ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

10 minutes ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

2 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

3 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

10 hours ago

ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…

11 hours ago