Advertisement
MIRROR FOCUS

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

Share

ಘಾನಾ ಸರ್ಕಾರವು ದೇಶದ ಕೃಷಿ ಕ್ಷೇತ್ರವನ್ನು ಬಲಪಡಿಸಲು ಮತ್ತು ರೈತರ ಆದಾಯ ಹೆಚ್ಚಿಸಲು ಮರ ಬೆಳೆ ವೈವಿಧ್ಯೀಕರಣ (Tree Crop Diversification) ಯೋಜನೆಯನ್ನು ರಾಷ್ಟ್ರವ್ಯಾಪಿಯಾಗಿ ಆರಂಭಿಸಿದೆ. ಈ ಯೋಜನೆ ಮೂಲಕ ಕೋಕೋ, ಗೇರು, ತೆಂಗು ಮತ್ತು ರಬ್ಬರ್ ಬೆಳೆಗಳ ಉತ್ಪಾದನೆ ಹಾಗೂ ಮಾರುಕಟ್ಟೆ ವ್ಯವಸ್ಥೆಯನ್ನು ಸುಧಾರಿಸುವ ಗುರಿ ಹೊಂದಿದೆ.

ಆಫ್ರಿಕಾ ದೇಶದ ಘಾನಾ ತನ್ನ ಕೃಷಿ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗೆ ಹೆಜ್ಜೆ ಇಟ್ಟಿದ್ದು, ರಾಷ್ಟ್ರವ್ಯಾಪಿ Tree Crop Diversification Drive ಅನ್ನು ಘೋಷಿಸಿದೆ. ಈ ಮಹತ್ವಾಕಾಂಕ್ಷಿ ಯೋಜನೆಯ ಉದ್ದೇಶ ರೈತರ ಆದಾಯವನ್ನು ಹೆಚ್ಚಿಸುವುದು, ಕೃಷಿಯಲ್ಲಿ ಸ್ಥಿರತೆಯನ್ನು ತರುವುದು ಮತ್ತು ದೇಶದ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವುದಾಗಿದೆ.

ಈ ಯೋಜನೆ ಮುಖ್ಯವಾಗಿ ಕೋಕೋ, ಗೇರು, ತೆಂಗು ಮತ್ತು ರಬ್ಬರ್ ಬೆಳೆಗಳ ಮೇಲೆ ಕೇಂದ್ರೀಕರಿಸಿದೆ. ಈಗಾಗಲೇ ಕೋಕೋ ಮೇಲೆ ಹೆಚ್ಚು ಅವಲಂಬಿತವಾಗಿರುವ ಘಾನಾ, ಇತರ ಮರ ಬೆಳೆಗಳತ್ತ ಗಮನ ಹರಿಸುವ ಮೂಲಕ ಕೃಷಿಯಲ್ಲಿ ವೈವಿಧ್ಯತೆ ತರುವ ಪ್ರಯತ್ನ ಮಾಡುತ್ತಿದೆ.

ಘಾನಾದ ಕೃಷಿ ಆರ್ಥಿಕತೆಯಲ್ಲಿ ಮರ ಬೆಳೆಗಳು ಪ್ರಮುಖ ಪಾತ್ರವಹಿಸುತ್ತಿವೆ. ಒಟ್ಟಾರೆ ಕೃಷಿ ರಫ್ತುಗಳಲ್ಲಿ ಸುಮಾರು 85% ಪಾಲು ಮರ ಬೆಳೆಗಳಿಂದಲೇ ಬರುತ್ತದೆ, ಇದರಲ್ಲಿ ಕೋಕೋ ಪ್ರಮುಖವಾಗಿದೆ.

 ಯೋಜನೆಯ ಪ್ರಮುಖ ಉದ್ದೇಶಗಳಲ್ಲಿ ರೈತರ ಉತ್ಪಾದಕತೆ ಹೆಚ್ಚಿಸುವುದು, ಮೌಲ್ಯವರ್ಧನೆ (Value Addition) ಉತ್ತೇಜಿಸುವುದು, ಮಾರುಕಟ್ಟೆ ಪ್ರವೇಶ ಸುಧಾರಣೆ, ಖಾಸಗಿ ವಲಯದ ಪಾತ್ರ ಬಲಪಡಿಸುವುದು, ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಕೃಷಿ ವ್ಯವಸ್ಥೆ ನಿರ್ಮಾಣ ಮಾಡುವುದು  ಇದರ ಉದ್ದೇಶವಾಗಿದೆ.  ಈ ಯೋಜನೆಗೆ ಸುಮಾರು 227.5 ಮಿಲಿಯನ್ ಡಾಲರ್‌ (ಸುಮಾರು ₹1,800 ಕೋಟಿ) ಹೂಡಿಕೆ ಮಾಡಲಾಗಿದ್ದು, ವಿಶ್ವ ಬ್ಯಾಂಕ್ ಸಹಭಾಗಿತ್ವದಲ್ಲಿ ಜಾರಿಗೆ ತರಲಾಗುತ್ತಿದೆ.

ಹಾಗೆಯೇ, ಈ ಯೋಜನೆಯ ಮೂಲಕ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಕಡಿಮೆ ಮಾಡಲು climate-resilient crop varieties, ಡಿಜಿಟಲ್ ಸಲಹಾ ಸೇವೆಗಳು ಮತ್ತು ತಂತ್ರಜ್ಞಾನ ಬಳಕೆಯನ್ನೂ ಉತ್ತೇಜಿಸಲಾಗುತ್ತಿದೆ.

ಏಕೆ ಈ ಯೋಜನೆ ಮಹತ್ವದ್ದು? :  ಘಾನಾದ ಕೃಷಿ ಬಹುತೇಕ ಒಂದು ಅಥವಾ ಎರಡು ಬೆಳೆಗಳ ಮೇಲೆ ಅವಲಂಬಿತವಾಗಿದ್ದು, ಇದರಿಂದ ರೈತರು ಆರ್ಥಿಕ ಅಪಾಯಕ್ಕೆ ಒಳಗಾಗುತ್ತಾರೆ. ವೈವಿಧ್ಯೀಕರಣದಿಂದ ಆದಾಯದ ಮೂಲಗಳು ಹೆಚ್ಚಾಗುತ್ತವೆ, ಬೆಳೆ ವಿಫಲವಾದರೂ ನಷ್ಟ ಕಡಿಮೆಯಾಗುತ್ತದೆ, ಗ್ರಾಮೀಣ ಉದ್ಯೋಗ ಸೃಷ್ಟಿಯಾಗುತ್ತದೆ

ರೈತರಿಗೆ ಲಾಭ ಏನು? :  ಈ ಯೋಜನೆಯಿಂದ ಉತ್ತಮ ಗುಣಮಟ್ಟದ ಬೀಜಗಳು, ತರಬೇತಿ ಮತ್ತು ತಾಂತ್ರಿಕ ಸಹಾಯ, ಮಾರುಕಟ್ಟೆ ಸಂಪರ್ಕ, ಹೆಚ್ಚಿನ ಆದಾಯದ ಅವಕಾಶ ಇವುಗಳ ಮೂಲಕ ರೈತರ ಜೀವನಮಟ್ಟದಲ್ಲಿ ಸುಧಾರಣೆ ಕಾಣುವ ನಿರೀಕ್ಷೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Ghana has launched a nationwide Tree Crop Diversification Drive to transform its agriculture sector. The project focuses on crops like cocoa, cashew, coconut, and rubber, aiming to boost farmer income, improve productivity, and enhance climate resilience. Backed by a $227.5 million investment with World Bank support, the initiative seeks to diversify agricultural output and strengthen rural livelihoods.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

3 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

5 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

12 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

18 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago