Advertisement
MIRROR FOCUS

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

Share

ಘಾನಾ ಸರ್ಕಾರವು ದೇಶದ ಕೃಷಿ ಕ್ಷೇತ್ರವನ್ನು ಬಲಪಡಿಸಲು ಮತ್ತು ರೈತರ ಆದಾಯ ಹೆಚ್ಚಿಸಲು ಮರ ಬೆಳೆ ವೈವಿಧ್ಯೀಕರಣ (Tree Crop Diversification) ಯೋಜನೆಯನ್ನು ರಾಷ್ಟ್ರವ್ಯಾಪಿಯಾಗಿ ಆರಂಭಿಸಿದೆ. ಈ ಯೋಜನೆ ಮೂಲಕ ಕೋಕೋ, ಗೇರು, ತೆಂಗು ಮತ್ತು ರಬ್ಬರ್ ಬೆಳೆಗಳ ಉತ್ಪಾದನೆ ಹಾಗೂ ಮಾರುಕಟ್ಟೆ ವ್ಯವಸ್ಥೆಯನ್ನು ಸುಧಾರಿಸುವ ಗುರಿ ಹೊಂದಿದೆ.

ಆಫ್ರಿಕಾ ದೇಶದ ಘಾನಾ ತನ್ನ ಕೃಷಿ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗೆ ಹೆಜ್ಜೆ ಇಟ್ಟಿದ್ದು, ರಾಷ್ಟ್ರವ್ಯಾಪಿ Tree Crop Diversification Drive ಅನ್ನು ಘೋಷಿಸಿದೆ. ಈ ಮಹತ್ವಾಕಾಂಕ್ಷಿ ಯೋಜನೆಯ ಉದ್ದೇಶ ರೈತರ ಆದಾಯವನ್ನು ಹೆಚ್ಚಿಸುವುದು, ಕೃಷಿಯಲ್ಲಿ ಸ್ಥಿರತೆಯನ್ನು ತರುವುದು ಮತ್ತು ದೇಶದ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವುದಾಗಿದೆ.

Advertisement

ಈ ಯೋಜನೆ ಮುಖ್ಯವಾಗಿ ಕೋಕೋ, ಗೇರು, ತೆಂಗು ಮತ್ತು ರಬ್ಬರ್ ಬೆಳೆಗಳ ಮೇಲೆ ಕೇಂದ್ರೀಕರಿಸಿದೆ. ಈಗಾಗಲೇ ಕೋಕೋ ಮೇಲೆ ಹೆಚ್ಚು ಅವಲಂಬಿತವಾಗಿರುವ ಘಾನಾ, ಇತರ ಮರ ಬೆಳೆಗಳತ್ತ ಗಮನ ಹರಿಸುವ ಮೂಲಕ ಕೃಷಿಯಲ್ಲಿ ವೈವಿಧ್ಯತೆ ತರುವ ಪ್ರಯತ್ನ ಮಾಡುತ್ತಿದೆ.

ಘಾನಾದ ಕೃಷಿ ಆರ್ಥಿಕತೆಯಲ್ಲಿ ಮರ ಬೆಳೆಗಳು ಪ್ರಮುಖ ಪಾತ್ರವಹಿಸುತ್ತಿವೆ. ಒಟ್ಟಾರೆ ಕೃಷಿ ರಫ್ತುಗಳಲ್ಲಿ ಸುಮಾರು 85% ಪಾಲು ಮರ ಬೆಳೆಗಳಿಂದಲೇ ಬರುತ್ತದೆ, ಇದರಲ್ಲಿ ಕೋಕೋ ಪ್ರಮುಖವಾಗಿದೆ.

Advertisement

 ಯೋಜನೆಯ ಪ್ರಮುಖ ಉದ್ದೇಶಗಳಲ್ಲಿ ರೈತರ ಉತ್ಪಾದಕತೆ ಹೆಚ್ಚಿಸುವುದು, ಮೌಲ್ಯವರ್ಧನೆ (Value Addition) ಉತ್ತೇಜಿಸುವುದು, ಮಾರುಕಟ್ಟೆ ಪ್ರವೇಶ ಸುಧಾರಣೆ, ಖಾಸಗಿ ವಲಯದ ಪಾತ್ರ ಬಲಪಡಿಸುವುದು, ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಕೃಷಿ ವ್ಯವಸ್ಥೆ ನಿರ್ಮಾಣ ಮಾಡುವುದು  ಇದರ ಉದ್ದೇಶವಾಗಿದೆ.  ಈ ಯೋಜನೆಗೆ ಸುಮಾರು 227.5 ಮಿಲಿಯನ್ ಡಾಲರ್‌ (ಸುಮಾರು ₹1,800 ಕೋಟಿ) ಹೂಡಿಕೆ ಮಾಡಲಾಗಿದ್ದು, ವಿಶ್ವ ಬ್ಯಾಂಕ್ ಸಹಭಾಗಿತ್ವದಲ್ಲಿ ಜಾರಿಗೆ ತರಲಾಗುತ್ತಿದೆ.

ಹಾಗೆಯೇ, ಈ ಯೋಜನೆಯ ಮೂಲಕ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಕಡಿಮೆ ಮಾಡಲು climate-resilient crop varieties, ಡಿಜಿಟಲ್ ಸಲಹಾ ಸೇವೆಗಳು ಮತ್ತು ತಂತ್ರಜ್ಞಾನ ಬಳಕೆಯನ್ನೂ ಉತ್ತೇಜಿಸಲಾಗುತ್ತಿದೆ.

Advertisement

ಏಕೆ ಈ ಯೋಜನೆ ಮಹತ್ವದ್ದು? :  ಘಾನಾದ ಕೃಷಿ ಬಹುತೇಕ ಒಂದು ಅಥವಾ ಎರಡು ಬೆಳೆಗಳ ಮೇಲೆ ಅವಲಂಬಿತವಾಗಿದ್ದು, ಇದರಿಂದ ರೈತರು ಆರ್ಥಿಕ ಅಪಾಯಕ್ಕೆ ಒಳಗಾಗುತ್ತಾರೆ. ವೈವಿಧ್ಯೀಕರಣದಿಂದ ಆದಾಯದ ಮೂಲಗಳು ಹೆಚ್ಚಾಗುತ್ತವೆ, ಬೆಳೆ ವಿಫಲವಾದರೂ ನಷ್ಟ ಕಡಿಮೆಯಾಗುತ್ತದೆ, ಗ್ರಾಮೀಣ ಉದ್ಯೋಗ ಸೃಷ್ಟಿಯಾಗುತ್ತದೆ

ರೈತರಿಗೆ ಲಾಭ ಏನು? :  ಈ ಯೋಜನೆಯಿಂದ ಉತ್ತಮ ಗುಣಮಟ್ಟದ ಬೀಜಗಳು, ತರಬೇತಿ ಮತ್ತು ತಾಂತ್ರಿಕ ಸಹಾಯ, ಮಾರುಕಟ್ಟೆ ಸಂಪರ್ಕ, ಹೆಚ್ಚಿನ ಆದಾಯದ ಅವಕಾಶ ಇವುಗಳ ಮೂಲಕ ರೈತರ ಜೀವನಮಟ್ಟದಲ್ಲಿ ಸುಧಾರಣೆ ಕಾಣುವ ನಿರೀಕ್ಷೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement

Ghana has launched a nationwide Tree Crop Diversification Drive to transform its agriculture sector. The project focuses on crops like cocoa, cashew, coconut, and rubber, aiming to boost farmer income, improve productivity, and enhance climate resilience. Backed by a $227.5 million investment with World Bank support, the initiative seeks to diversify agricultural output and strengthen rural livelihoods.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

12 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

21 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago