ನಂಜನಗೂಡು ರಸಬಾಳೆ ಸೇರಿ ಜಿಐ ಉತ್ಪನ್ನಗಳು ಮೊದಲ ಬಾರಿ ಮಾಲ್ಡೀವ್ಸ್‌ಗೆ

January 20, 2026
7:49 AM

ಭೌಗೋಳಿಕ ಸೂಚ್ಯಂಕ (GI) ಮಾನ್ಯತೆ ಪಡೆದ ರಾಜ್ಯದ ಹೆಮ್ಮೆಯ ನಂಜನಗೂಡು ರಸಬಾಳೆ, ಮೈಸೂರು ವೀಳ್ಯದೆಲೆ ಮತ್ತು ಇಂಡಿ ಲಿಂಬೆ ಹಣ್ಣುಗಳು ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್‌ ಗೆ ರಫ್ತಾಗಿವೆ. ಇದೇ 15ರಂದು ಈ ಐತಿಹಾಸಿಕ ರಫ್ತು ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದ್ದು, ಇದು ಭಾರತದ ಕೃಷಿ ಉತ್ಪನ್ನಗಳ ಅಂತಾರಾಷ್ಟ್ರೀಯ ಮಾರುಕಟ್ಟೆ ವಿಸ್ತರಣೆಯಲ್ಲಿ ಹೊಸ ಮೈಲಿಗಲ್ಲು ಆಗಿದೆ.

ಈ ಮಹತ್ವದ ರಫ್ತು ಕಾರ್ಯವು ಅಪೆಡಾ ( Agricultural and Processed Food Products Export Development Authority (APEDA), ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆ ಹಾಗೂ ಐಸಿಎಆರ್ ಸಂಸ್ಥೆಗಳ ಸಮನ್ವಯದೊಂದಿಗೆ ಯಶಸ್ವಿಯಾಗಿ ನೆರವೇರಿದೆ. ಮೈಸೂರು ಮತ್ತು ವಿಜಯಪುರ ಜಿಲ್ಲೆಗಳ ರೈತರಿಂದ ನೇರವಾಗಿ ಉತ್ಪನ್ನಗಳನ್ನು ಖರೀದಿಸಿ, ಜಾಗತಿಕ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಸಂಸ್ಕರಣೆ ಹಾಗೂ ಪ್ಯಾಕೇಜಿಂಗ್‌ ನಡೆಸಿ ವಿಮಾನ ಮಾರ್ಗದ ಮೂಲಕ ರಫ್ತು ಮಾಡಲಾಗಿದೆ.

ಈ ರಫ್ತು ಕಾರ್ಯದಿಂದ ಜಿಐ ಮಾನ್ಯತೆ ಪಡೆದ ಸ್ಥಳೀಯ ಕೃಷಿ ಉತ್ಪನ್ನಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಮಾರುಕಟ್ಟೆ ಸಿಗುವ ಜೊತೆಗೆ, ರೈತರ ಆದಾಯ ವೃದ್ಧಿಗೂ ಸಹಕಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror