ಭೌಗೋಳಿಕ ಸೂಚ್ಯಂಕ (GI) ಮಾನ್ಯತೆ ಪಡೆದ ರಾಜ್ಯದ ಹೆಮ್ಮೆಯ ನಂಜನಗೂಡು ರಸಬಾಳೆ, ಮೈಸೂರು ವೀಳ್ಯದೆಲೆ ಮತ್ತು ಇಂಡಿ ಲಿಂಬೆ ಹಣ್ಣುಗಳು ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್ ಗೆ ರಫ್ತಾಗಿವೆ. ಇದೇ 15ರಂದು ಈ ಐತಿಹಾಸಿಕ ರಫ್ತು ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದ್ದು, ಇದು ಭಾರತದ ಕೃಷಿ ಉತ್ಪನ್ನಗಳ ಅಂತಾರಾಷ್ಟ್ರೀಯ ಮಾರುಕಟ್ಟೆ ವಿಸ್ತರಣೆಯಲ್ಲಿ ಹೊಸ ಮೈಲಿಗಲ್ಲು ಆಗಿದೆ.
ಈ ಮಹತ್ವದ ರಫ್ತು ಕಾರ್ಯವು ಅಪೆಡಾ ( Agricultural and Processed Food Products Export Development Authority (APEDA), ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆ ಹಾಗೂ ಐಸಿಎಆರ್ ಸಂಸ್ಥೆಗಳ ಸಮನ್ವಯದೊಂದಿಗೆ ಯಶಸ್ವಿಯಾಗಿ ನೆರವೇರಿದೆ. ಮೈಸೂರು ಮತ್ತು ವಿಜಯಪುರ ಜಿಲ್ಲೆಗಳ ರೈತರಿಂದ ನೇರವಾಗಿ ಉತ್ಪನ್ನಗಳನ್ನು ಖರೀದಿಸಿ, ಜಾಗತಿಕ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಸಂಸ್ಕರಣೆ ಹಾಗೂ ಪ್ಯಾಕೇಜಿಂಗ್ ನಡೆಸಿ ವಿಮಾನ ಮಾರ್ಗದ ಮೂಲಕ ರಫ್ತು ಮಾಡಲಾಗಿದೆ.
ಈ ರಫ್ತು ಕಾರ್ಯದಿಂದ ಜಿಐ ಮಾನ್ಯತೆ ಪಡೆದ ಸ್ಥಳೀಯ ಕೃಷಿ ಉತ್ಪನ್ನಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಮಾರುಕಟ್ಟೆ ಸಿಗುವ ಜೊತೆಗೆ, ರೈತರ ಆದಾಯ ವೃದ್ಧಿಗೂ ಸಹಕಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…