ಕರ್ನಾಟಕ ವಾರ್ತಾ ಇಲಾಖೆ ನಿರ್ಮಾಣದ, ಪಂಡಿತ್ ವೆಂಕಟೇಶ್ ಕುಮಾರ್ ಜೀವನ ಕುರಿತ ‘ನಾದದ ನವನೀತ’ ಸಾಕ್ಷ್ಯಚಿತ್ರ ಈ ಸಾಲಿನ ರಜತ ಕಮಲ ಪ್ರಶಸ್ತಿಗೆ ಭಾಜನವಾಗಿದೆ.ಈ ಹಿನ್ನೆಲೆ ಸಾಕ್ಷ್ಯಚಿತ್ರವನ್ನು ನಿರ್ದೇಶಿಸಿದ, ಖ್ಯಾತ ಚಲನಚಿತ್ರ ನಿರ್ದೇಶಕ, ಗಿರೀಶ್ ಕಾಸರವಳ್ಳಿಯವರನ್ನು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಸನ್ಮಾನಿಸಿದರು.
ಈ ಸಂದರ್ಭ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ, ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ, ಕನ್ನಡ ಚಿತ್ರ ರಂಗದ ಗಣ್ಯರೂ ಹಾಗೂ ಇತರರು ಉಪಸ್ಥಿತರಿದ್ದರು. ಸೆ.30ರಂದು ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ನಾದದ ನವನೀತ’ ಸಾಕ್ಷ್ಯಚಿತ್ರಕ್ಕೆ ಅತ್ಯುತ್ತಮ ಕಲೆ ಮತ್ತು ಸಂಸ್ಕೃತಿಯ ಚಿತ್ರವಾಗಿ ರಜತ ಕಮಲ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…