ಕರ್ನಾಟಕ ವಾರ್ತಾ ಇಲಾಖೆ ನಿರ್ಮಾಣದ, ಪಂಡಿತ್ ವೆಂಕಟೇಶ್ ಕುಮಾರ್ ಜೀವನ ಕುರಿತ ‘ನಾದದ ನವನೀತ’ ಸಾಕ್ಷ್ಯಚಿತ್ರ ಈ ಸಾಲಿನ ರಜತ ಕಮಲ ಪ್ರಶಸ್ತಿಗೆ ಭಾಜನವಾಗಿದೆ.ಈ ಹಿನ್ನೆಲೆ ಸಾಕ್ಷ್ಯಚಿತ್ರವನ್ನು ನಿರ್ದೇಶಿಸಿದ, ಖ್ಯಾತ ಚಲನಚಿತ್ರ ನಿರ್ದೇಶಕ, ಗಿರೀಶ್ ಕಾಸರವಳ್ಳಿಯವರನ್ನು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಸನ್ಮಾನಿಸಿದರು.
ಈ ಸಂದರ್ಭ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ, ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ, ಕನ್ನಡ ಚಿತ್ರ ರಂಗದ ಗಣ್ಯರೂ ಹಾಗೂ ಇತರರು ಉಪಸ್ಥಿತರಿದ್ದರು. ಸೆ.30ರಂದು ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ನಾದದ ನವನೀತ’ ಸಾಕ್ಷ್ಯಚಿತ್ರಕ್ಕೆ ಅತ್ಯುತ್ತಮ ಕಲೆ ಮತ್ತು ಸಂಸ್ಕೃತಿಯ ಚಿತ್ರವಾಗಿ ರಜತ ಕಮಲ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…