ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ.
ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾನಿಲಯದ 14 ನೇ ಘಟಿಕೋತ್ಸವದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಪದಕ ಪ್ರದಾನ ಮಾಡಿ ಮಾತನಾಡಿದ ಅವರು ಭಾರತ ಇಂದು ಸೂಕ್ಷ್ಮ ಹಾಗೂ ಸುಂದರವಾದ ಹೂಗಳ ಉತ್ಪಾದನೆಗೆ ಜಾಗತಿಕ ಮನ್ನಣೆ ಪಡೆಯುತ್ತಿದೆ. ಇಂದು ಸೌಂದರ್ಯವರ್ಧಕ ಹಾಗೂ ಸುಹಾಸಿತ ಉತ್ಪನ್ನಗಳಿಗೆ ಹೆಚ್ಚಿಗೆ ಬೇಡಿಕೆ ಇದ್ದು, ರೈತರು ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.
ಹೈದರಾಬಾದನ ಅಂತಾರಾಷ್ಟ್ರೀಯ ಬೆಳೆಗಳ ಸಂಶೋಧನಾ ಸಂಸ್ಥೆಯ ಮಹಾ ನಿರ್ದೇಶಕ ಡಾ.ಹಿಮಾಂಶು ಪಾಠಕ್ ಮಾತನಾಡಿ ತೋಟಗಾರಿಕೆಯು ಆರ್ಥಿಕ ಅಭಿವೃದ್ದಿಯ ಎಂಜಿನ್ ಆಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…