Advertisement
MIRROR FOCUS

ಬೆಂಗಳೂರಿನಲ್ಲಿ ಕೃಷಿ ಮೇಳ | ಕೃಷಿ ಮೇಳದಲ್ಲಿ ವಿವಿಧ ಹೊಸ ತಳಿಗಳ ಪ್ರಾತ್ಯಕ್ಷಿಕೆ

Share

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ  ಜಿಕೆವಿಕೆ ಆವರಣದಲ್ಲಿ ಇಂದಿನಿಂದ ನ.17ರ ವರೆಗೆ ಕೃಷಿ ಮೇಳ ನಡೆಯುತ್ತಿದೆ.…..ಮುಂದೆ ಓದಿ….

ಕೃಷಿ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ, ಆಹಾರ ಉತ್ಪಾದನೆ ಹೆಚ್ಚಳದಲ್ಲಿ ಕೃಷಿ ವಿಶ್ವವಿದ್ಯಾನಿಲಯಗಳ ಸಂಶೋಧನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿಶ್ವವಿದ್ಯಾನಿಲಯಗಳು ನಿರಂತರವಾಗಿ ಹೊಸ ತಳಿಗಳನ್ನು ಸಂಶೋಧಿಸಿ ಬಿಡುಗಡೆ ಮಾಡುತ್ತಿದ್ದು ಕಡಿಮೆ ನೀರು ಹಾಗೂ ವೆಚ್ಚದಲ್ಲಿ ಹೆಚ್ಚು ಇಳುವರಿ ಪಡೆಯಬಹುದಾಗಿದೆ ಎಂದರು.

ರಾಜ್ಯದಲ್ಲಿ ಸುಮಾರು 78 ಲಕ್ಷಕ್ಕೂ ಹೆಚ್ಚು ರೈತರು ಹಾಗೂ 125 ಲಕ್ಷಕ್ಕೂ ಹೆಚ್ಚು ಕೃಷಿ ಕಾರ್ಮಿಕರು ಕೃಷಿಯಲ್ಲಿ ತೊಡಗಿದ್ದಾರೆ. ರಾಜ್ಯ ಸರ್ಕಾರ ಕೃಷಿಗೆ ಗರಿಷ್ಠ ಆದ್ಯತೆ ನೀಡಿದೆ ಕಳೆದ ಸಾಲಿನಲ್ಲಿ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ಸಬ್ಸಿಡಿಯೊಂದಿಗೆ ಯಂತ್ರೋಪಕರಣ, ನೀರಾವರಿ ಸಲಕರಣೆಗಳನ್ನು ವಿತರಿಸಿದೆ. 2100 ಕೋಟಿ ರೂಪಾಯಿ ಬೆಳೆವಿಮೆ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ರೈತರಿಗೆ ಭರಿಸಲಾಗಿದೆ. ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆ ರೂಪಿಸಿ ಅತ್ಯಧಿಕ ಆರ್ಥಿಕ ನೆರವಿನೊಂದಿಗೆ ಬೃಹತ್ ಬೆಳೆ ಕಟಾವು ಯಂತ್ರಗಳನ್ನು ವಿತರಿಸಲಾಗಿದೆ ಎಂದರು. ಕೃಷಿ ಪದವಿದರರು ಸ್ವಯಂ ಉದ್ಯೋಗ ಅಳವಡಿಸಿಕೊಂಡು ಇತರರಿಗೆ ಉದ್ಯೋಗ ಹಾಗೂ ಮಾರ್ಗದರ್ಶನ ನೀಡಬೇಕು ಎನ್ನುವುದು ನಮ್ಮ ಆಶಯ. ಇಂತಹ ಕೃಷಿ ಮೇಳಗಳು ನಾಡಿನ ರೈತರು ಹಾಗೂ ಕೃಷಿ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುತ್ತಿರುವುದು ಶ್ಲಾಘನೀಯ ಎಂದು ಚಲುವರಾಯಸ್ವಾಮಿ ಹೇಳಿದರು.

‘ಹವಾಮಾನ ಚತುರ ಡಿಜಿಟಲ್ ಕೃಷಿ’ ಘೋಷವಾಕ್ಯದೊಂದಿಗೆ ಆಯೋಜಿಸಲಾಗುತ್ತಿರುವ ಕೃಷಿ ಮೇಳದಲ್ಲಿ ವಿವಿಧ ಹೊಸ ತಳಿಗಳ ಪ್ರಾತ್ಯಕ್ಷಿಕೆ, ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಕೃಷಿ ಪರಿಕರಗಳು ಹಾಗೂ ಪ್ರಕಟಣೆಗಳ ಮಾರಾಟ ಮತ್ತಿತರ ವ್ಯವಸ್ಥೆಗಳ ಮೂಲಕ ಆಧುನಿಕ ಬೇಸಾಯದ ಬಗ್ಗೆ ರೈತರಲ್ಲಿ ಅರಿವು ಮೂಡಿಸಲಾಗುತ್ತಿದೆ. ಕೃಷಿ ಮೇಳದಲ್ಲಿ ಡಿಜಿಟಲ್ ಕೃಷಿ ತಂತ್ರಜ್ಞಾನಗಳ ಬಳಕೆ, ಕೃಷಿ ಡ್ರೋಣ್, ರೋಬೋಟಿಕ್ ಕೃಷಿ ಯಂತ್ರ, ಹಣ್ಣಿನ ವರ್ಗೀಕರಣ ಯಂತ್ರ, ಸ್ವಯಂಚಾಲಿತ ರಸಗೊಬ್ಬರ ಹರಡುವ ಯಂತ್ರ, ಆಳ ನಿಯಂತ್ರಕ ರೋಟಾ-ವೇಟರ್, ಸೌರಶಕ್ತಿಚಾಲಿತ ಬರ್ಡ್ ಸ್ಕೇರರ್ ಸೇರಿದಂತೆ ಹಲವು ತಾಂತ್ರಿಕತೆಗಳನ್ನು ಪರಿಚಯಿಸಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

4 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

5 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

7 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

8 hours ago

ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ

ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

8 hours ago

2026ರಲ್ಲಿ ಜಗತ್ತಿನ ಅಂತ್ಯವೇ..? 1960ರ ‘ಡೂಮ್ಸ್‌ಡೇ’ ಅಧ್ಯಯನದ ನಿಜಾಂಶ ಏನು..?

1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…

8 hours ago