Advertisement
ಸುದ್ದಿಗಳು

`ಜಾಗತಿಕ ಸಿರಿಧಾನ್ಯ ಸಮಾವೇಶ’ : ಆಹಾರ ಭದ್ರತೆ ಸವಾಲು ಎದುರಿಸಲು ಸಿರಿಧಾನ್ಯ ನೆರವಾಗಬಹುದು – ಪ್ರಧಾನಿ ಮೋದಿ

Share

ಆಹಾರ ಭದ್ರತೆಗೆ ಸಂಬಂಧಿಸಿದ ಮತ್ತು ಆಹಾರ ಪದ್ಧತಿಗೆ ಸಂಬಂಧಿಸಿದ ಸವಾಲುಗಳನ್ನು ಎದುರಿಸುವಲ್ಲಿ ಸಿರಿಧಾನ್ಯಗಳು ನೆರವಾಗಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು. ದೆಹಲಿಯಲ್ಲಿ 2 ದಿನಗಳ ಕಾಲ ನಡೆಲಿರುವ ‘ಜಾಗತಿಕ ಸಿರಿಧಾನ್ಯ (ಶ್ರೀ ಅನ್ನ) ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಆಹಾರಗಳ ಪಟ್ಟಿಯಲ್ಲಿ ಪೌಷ್ಟಿಕಾಂಶಯುಕ್ತ ಧಾನ್ಯಗಳ ಪಾಲನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಕೃಷಿ ವಿಜ್ಞಾನಿಗಳಿಗೆ ಮನವಿ ಮಾಡಿದರು. ಭಾರತದ ಪ್ರಸ್ತಾವನೆ ಮತ್ತು ಪ್ರಯತ್ನಗಳನ್ನು ಮನ್ನಿಸಿರುವ ವಿಶ್ವಸಂಸ್ಥೆಯು 2023ನೇ ವರ್ಷವನ್ನು ‘ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ’ ಎಂದು ಘೋಷಣೆ ಮಾಡಿದೆ. ಇದು ದೇಶಕ್ಕೆ ಗೌರವದ ವಿಷಯವಾಗಿದೆ. ಭಾರತವು ಸಿರಿಧಾನ್ಯ ಅಥವಾ ಶ್ರೀ ಅನ್ನವನ್ನು ಜಾಗತಿಕ ಚಳವಳಿಯಾಗಿ ಮಾರ್ಪಡಿಸಿ ಉತ್ತೇಜನ ನೀಡಲು ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಮೋದಿ ಹೇಳಿದರು.

ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಲ್ಲಿ, ರಾಸಾಯನಿಕಗಳು ಮತ್ತು ರಸಗೊಬ್ಬರಗಳಿಲ್ಲದೆ ಸಿರಿಧಾನ್ಯಗಳನ್ನು ಸುಲಭವಾಗಿ ಬೆಳೆಯಬಹುದು. ಸಿರಿಧಾನ್ಯ ಮಿಷನ್​ನಿಂದ ದೇಶದ 2.5 ಕೋಟಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರಯೋಜನವಾಗಲಿದೆ. ಇಂದು ದೇಶದ ಆಹಾರದ ಪಟ್ಟಿಯಲ್ಲಿ ಸಿರಿಧಾನ್ಯಗಳು ಶೇ 5-6ರಷ್ಟು ಸ್ಥಾನ ಪಡೆದಿವೆ. ಈ ಪಾಲನ್ನು ಹೆಚ್ಚಿಸಲು ತ್ವರಿತವಾಗಿ ಕೆಲಸ ಮಾಡಬೇಕೆಂದು ದೇಶದ ವಿಜ್ಞಾನಿಗಳು ಮತ್ತು ಕೃಷಿ ತಜ್ಞರನ್ನು ಒತ್ತಾಯಿಸುತ್ತೇನೆ ಎಂದು ಮೋದಿ ಹೇಳಿದರು.

ಆಹಾರ ಸಂಸ್ಕರಣಾ ಕ್ಷೇತ್ರಕ್ಕೆ ಸರ್ಕಾರವು ಉತ್ಪಾದನೆ ಆಧಾರಿತ ಭತ್ಯೆ (ಪಿಎಲ್​ಐ) ಯೋಜನೆ ಆರಂಭಿಸಿದೆ. ಕಂಪನಿಗಳು ಇದರ ಪ್ರಯೋಜನ ಪಡೆದುಕೊಂಡು ಸಿರಿಧಾನ್ಯ ಆಧಾರಿತ ಉತ್ಪನ್ನಗಳ ಉತ್ಪಾದನೆಯನ್ನು ಹೆಚ್ಚಿಸಬೇಕು ಎಂದು ಮೋದಿ ಮನವಿ ಮಾಡಿದರು.

ಸಿರಿಧಾನ್ಯ ಅಥವಾ ಪೌಷ್ಟಿಕಾಂಶಯುಕ್ತ ಧಾನ್ಯಗಳ ಪ್ರಾಮುಖ್ಯತೆಯನ್ನು ಗುರುತಿಸುವುದು, ಜನರಿಗೆ ಪೌಷ್ಟಿಕ ಆಹಾರವನ್ನು ಒದಗಿಸುವುದರೊಂದಿಗೆ ದೇಶೀಯ ಮತ್ತು ಜಾಗತಿಕ ಬೇಡಿಕೆಯನ್ನು ಸೃಷ್ಟಿಸುವ ದೃಷ್ಟಿಯಿಂದ 2023 ಅನ್ನು ‘ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ’ ಎಂದು ಘೋಷಣೆ ಮಾಡುವಂತೆ ಭಾರತವು ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಗೆ ಪ್ರಸ್ತಾವ ಸಲ್ಲಿಸಿತ್ತು. ಈ ಪ್ರಸ್ತಾವನೆಗೆ 72 ದೇಶಗಳಿಂದ ಬೆಂಬಲ ದೊರೆತಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

6 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

7 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

22 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago