ಆಹಾರ ಭದ್ರತೆಗೆ ಸಂಬಂಧಿಸಿದ ಮತ್ತು ಆಹಾರ ಪದ್ಧತಿಗೆ ಸಂಬಂಧಿಸಿದ ಸವಾಲುಗಳನ್ನು ಎದುರಿಸುವಲ್ಲಿ ಸಿರಿಧಾನ್ಯಗಳು ನೆರವಾಗಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು. ದೆಹಲಿಯಲ್ಲಿ 2 ದಿನಗಳ ಕಾಲ ನಡೆಲಿರುವ ‘ಜಾಗತಿಕ ಸಿರಿಧಾನ್ಯ (ಶ್ರೀ ಅನ್ನ) ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಆಹಾರಗಳ ಪಟ್ಟಿಯಲ್ಲಿ ಪೌಷ್ಟಿಕಾಂಶಯುಕ್ತ ಧಾನ್ಯಗಳ ಪಾಲನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಕೃಷಿ ವಿಜ್ಞಾನಿಗಳಿಗೆ ಮನವಿ ಮಾಡಿದರು. ಭಾರತದ ಪ್ರಸ್ತಾವನೆ ಮತ್ತು ಪ್ರಯತ್ನಗಳನ್ನು ಮನ್ನಿಸಿರುವ ವಿಶ್ವಸಂಸ್ಥೆಯು 2023ನೇ ವರ್ಷವನ್ನು ‘ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ’ ಎಂದು ಘೋಷಣೆ ಮಾಡಿದೆ. ಇದು ದೇಶಕ್ಕೆ ಗೌರವದ ವಿಷಯವಾಗಿದೆ. ಭಾರತವು ಸಿರಿಧಾನ್ಯ ಅಥವಾ ಶ್ರೀ ಅನ್ನವನ್ನು ಜಾಗತಿಕ ಚಳವಳಿಯಾಗಿ ಮಾರ್ಪಡಿಸಿ ಉತ್ತೇಜನ ನೀಡಲು ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಮೋದಿ ಹೇಳಿದರು.
ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಲ್ಲಿ, ರಾಸಾಯನಿಕಗಳು ಮತ್ತು ರಸಗೊಬ್ಬರಗಳಿಲ್ಲದೆ ಸಿರಿಧಾನ್ಯಗಳನ್ನು ಸುಲಭವಾಗಿ ಬೆಳೆಯಬಹುದು. ಸಿರಿಧಾನ್ಯ ಮಿಷನ್ನಿಂದ ದೇಶದ 2.5 ಕೋಟಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರಯೋಜನವಾಗಲಿದೆ. ಇಂದು ದೇಶದ ಆಹಾರದ ಪಟ್ಟಿಯಲ್ಲಿ ಸಿರಿಧಾನ್ಯಗಳು ಶೇ 5-6ರಷ್ಟು ಸ್ಥಾನ ಪಡೆದಿವೆ. ಈ ಪಾಲನ್ನು ಹೆಚ್ಚಿಸಲು ತ್ವರಿತವಾಗಿ ಕೆಲಸ ಮಾಡಬೇಕೆಂದು ದೇಶದ ವಿಜ್ಞಾನಿಗಳು ಮತ್ತು ಕೃಷಿ ತಜ್ಞರನ್ನು ಒತ್ತಾಯಿಸುತ್ತೇನೆ ಎಂದು ಮೋದಿ ಹೇಳಿದರು.
ಆಹಾರ ಸಂಸ್ಕರಣಾ ಕ್ಷೇತ್ರಕ್ಕೆ ಸರ್ಕಾರವು ಉತ್ಪಾದನೆ ಆಧಾರಿತ ಭತ್ಯೆ (ಪಿಎಲ್ಐ) ಯೋಜನೆ ಆರಂಭಿಸಿದೆ. ಕಂಪನಿಗಳು ಇದರ ಪ್ರಯೋಜನ ಪಡೆದುಕೊಂಡು ಸಿರಿಧಾನ್ಯ ಆಧಾರಿತ ಉತ್ಪನ್ನಗಳ ಉತ್ಪಾದನೆಯನ್ನು ಹೆಚ್ಚಿಸಬೇಕು ಎಂದು ಮೋದಿ ಮನವಿ ಮಾಡಿದರು.
ಸಿರಿಧಾನ್ಯ ಅಥವಾ ಪೌಷ್ಟಿಕಾಂಶಯುಕ್ತ ಧಾನ್ಯಗಳ ಪ್ರಾಮುಖ್ಯತೆಯನ್ನು ಗುರುತಿಸುವುದು, ಜನರಿಗೆ ಪೌಷ್ಟಿಕ ಆಹಾರವನ್ನು ಒದಗಿಸುವುದರೊಂದಿಗೆ ದೇಶೀಯ ಮತ್ತು ಜಾಗತಿಕ ಬೇಡಿಕೆಯನ್ನು ಸೃಷ್ಟಿಸುವ ದೃಷ್ಟಿಯಿಂದ 2023 ಅನ್ನು ‘ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ’ ಎಂದು ಘೋಷಣೆ ಮಾಡುವಂತೆ ಭಾರತವು ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಗೆ ಪ್ರಸ್ತಾವ ಸಲ್ಲಿಸಿತ್ತು. ಈ ಪ್ರಸ್ತಾವನೆಗೆ 72 ದೇಶಗಳಿಂದ ಬೆಂಬಲ ದೊರೆತಿತ್ತು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…