Advertisement
ಸುದ್ದಿಗಳು

`ಜಾಗತಿಕ ಸಿರಿಧಾನ್ಯ ಸಮಾವೇಶ’ : ಆಹಾರ ಭದ್ರತೆ ಸವಾಲು ಎದುರಿಸಲು ಸಿರಿಧಾನ್ಯ ನೆರವಾಗಬಹುದು – ಪ್ರಧಾನಿ ಮೋದಿ

Share

ಆಹಾರ ಭದ್ರತೆಗೆ ಸಂಬಂಧಿಸಿದ ಮತ್ತು ಆಹಾರ ಪದ್ಧತಿಗೆ ಸಂಬಂಧಿಸಿದ ಸವಾಲುಗಳನ್ನು ಎದುರಿಸುವಲ್ಲಿ ಸಿರಿಧಾನ್ಯಗಳು ನೆರವಾಗಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು. ದೆಹಲಿಯಲ್ಲಿ 2 ದಿನಗಳ ಕಾಲ ನಡೆಲಿರುವ ‘ಜಾಗತಿಕ ಸಿರಿಧಾನ್ಯ (ಶ್ರೀ ಅನ್ನ) ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಆಹಾರಗಳ ಪಟ್ಟಿಯಲ್ಲಿ ಪೌಷ್ಟಿಕಾಂಶಯುಕ್ತ ಧಾನ್ಯಗಳ ಪಾಲನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಕೃಷಿ ವಿಜ್ಞಾನಿಗಳಿಗೆ ಮನವಿ ಮಾಡಿದರು. ಭಾರತದ ಪ್ರಸ್ತಾವನೆ ಮತ್ತು ಪ್ರಯತ್ನಗಳನ್ನು ಮನ್ನಿಸಿರುವ ವಿಶ್ವಸಂಸ್ಥೆಯು 2023ನೇ ವರ್ಷವನ್ನು ‘ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ’ ಎಂದು ಘೋಷಣೆ ಮಾಡಿದೆ. ಇದು ದೇಶಕ್ಕೆ ಗೌರವದ ವಿಷಯವಾಗಿದೆ. ಭಾರತವು ಸಿರಿಧಾನ್ಯ ಅಥವಾ ಶ್ರೀ ಅನ್ನವನ್ನು ಜಾಗತಿಕ ಚಳವಳಿಯಾಗಿ ಮಾರ್ಪಡಿಸಿ ಉತ್ತೇಜನ ನೀಡಲು ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಮೋದಿ ಹೇಳಿದರು.

ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಲ್ಲಿ, ರಾಸಾಯನಿಕಗಳು ಮತ್ತು ರಸಗೊಬ್ಬರಗಳಿಲ್ಲದೆ ಸಿರಿಧಾನ್ಯಗಳನ್ನು ಸುಲಭವಾಗಿ ಬೆಳೆಯಬಹುದು. ಸಿರಿಧಾನ್ಯ ಮಿಷನ್​ನಿಂದ ದೇಶದ 2.5 ಕೋಟಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರಯೋಜನವಾಗಲಿದೆ. ಇಂದು ದೇಶದ ಆಹಾರದ ಪಟ್ಟಿಯಲ್ಲಿ ಸಿರಿಧಾನ್ಯಗಳು ಶೇ 5-6ರಷ್ಟು ಸ್ಥಾನ ಪಡೆದಿವೆ. ಈ ಪಾಲನ್ನು ಹೆಚ್ಚಿಸಲು ತ್ವರಿತವಾಗಿ ಕೆಲಸ ಮಾಡಬೇಕೆಂದು ದೇಶದ ವಿಜ್ಞಾನಿಗಳು ಮತ್ತು ಕೃಷಿ ತಜ್ಞರನ್ನು ಒತ್ತಾಯಿಸುತ್ತೇನೆ ಎಂದು ಮೋದಿ ಹೇಳಿದರು.

Advertisement

ಆಹಾರ ಸಂಸ್ಕರಣಾ ಕ್ಷೇತ್ರಕ್ಕೆ ಸರ್ಕಾರವು ಉತ್ಪಾದನೆ ಆಧಾರಿತ ಭತ್ಯೆ (ಪಿಎಲ್​ಐ) ಯೋಜನೆ ಆರಂಭಿಸಿದೆ. ಕಂಪನಿಗಳು ಇದರ ಪ್ರಯೋಜನ ಪಡೆದುಕೊಂಡು ಸಿರಿಧಾನ್ಯ ಆಧಾರಿತ ಉತ್ಪನ್ನಗಳ ಉತ್ಪಾದನೆಯನ್ನು ಹೆಚ್ಚಿಸಬೇಕು ಎಂದು ಮೋದಿ ಮನವಿ ಮಾಡಿದರು.

Advertisement

ಸಿರಿಧಾನ್ಯ ಅಥವಾ ಪೌಷ್ಟಿಕಾಂಶಯುಕ್ತ ಧಾನ್ಯಗಳ ಪ್ರಾಮುಖ್ಯತೆಯನ್ನು ಗುರುತಿಸುವುದು, ಜನರಿಗೆ ಪೌಷ್ಟಿಕ ಆಹಾರವನ್ನು ಒದಗಿಸುವುದರೊಂದಿಗೆ ದೇಶೀಯ ಮತ್ತು ಜಾಗತಿಕ ಬೇಡಿಕೆಯನ್ನು ಸೃಷ್ಟಿಸುವ ದೃಷ್ಟಿಯಿಂದ 2023 ಅನ್ನು ‘ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ’ ಎಂದು ಘೋಷಣೆ ಮಾಡುವಂತೆ ಭಾರತವು ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಗೆ ಪ್ರಸ್ತಾವ ಸಲ್ಲಿಸಿತ್ತು. ಈ ಪ್ರಸ್ತಾವನೆಗೆ 72 ದೇಶಗಳಿಂದ ಬೆಂಬಲ ದೊರೆತಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

3 hours ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

4 hours ago

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

12 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

13 hours ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

14 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

15 hours ago