Advertisement
MIRROR FOCUS

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

Share

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆಗಳು ಐತಿಹಾಸಿಕ ಏರಿಕೆ ದಾಖಲಿಸಿದ್ದು, ಮೊದಲ ಬಾರಿಗೆ ಕೆಜಿಗೆ ₹300 ಗಡಿಯನ್ನು ದಾಟಿವೆ. ಪ್ರಮುಖ ಉತ್ಪಾದಕ ರಾಷ್ಟ್ರಗಳಲ್ಲಿ ಪೂರೈಕೆ ಕೊರತೆ, ಹವಾಮಾನ ವೈಪರೀತ್ಯ ಹಾಗೂ ಜಾಗತಿಕ ಬೇಡಿಕೆ ಹೆಚ್ಚಳದಿಂದ ರಬ್ಬರ್ ಬೆಲೆಗಳು ಗಗನಕ್ಕೇರಿವೆ.

ಭಾರತೀಯ ಮಾರುಕಟ್ಟೆಯಲ್ಲಿಯೂ ಈ ಪರಿಣಾಮ ಗೋಚರಿಸಿದೆ. RSS-4 ದರ್ಜೆಯ ಶೀಟ್ ರಬ್ಬರ್ ಬೆಲೆ ಕೆಜಿಗೆ ₹265 ಕ್ಕೆ ತಲುಪಿದೆ. ಇದು ದೇಶೀಯ ಮಾರುಕಟ್ಟೆಯಲ್ಲಿ ದಾಖಲೆಯ ಮಟ್ಟದ ಬೆಲೆಗಳಲ್ಲಿ ಒಂದಾಗಿದೆ. ರಬ್ಬರ್ ಬೆಲೆಗಳ ನಿರಂತರ ಏರಿಕೆಯಿಂದ ರಬ್ಬರ್ ಬೆಳೆಗಾರರಲ್ಲಿ ಆಶಾವಾದ ಮೂಡಿದರೆ, ಟೈರ್ ಹಾಗೂ ರಬ್ಬರ್ ಆಧಾರಿತ ಕೈಗಾರಿಕೆಗಳಿಗೆ ಉತ್ಪಾದನಾ ವೆಚ್ಚ ಹೆಚ್ಚಳದ ಸವಾಲು ಎದುರಾಗಿದೆ.

ತಜ್ಞರ ಪ್ರಕಾರ ಥೈಲ್ಯಾಂಡ್, ಇಂಡೋನೇಷ್ಯಾ ಹಾಗೂ ವಿಯೆಟ್ನಾಂ ಸೇರಿದಂತೆ ಪ್ರಮುಖ ಉತ್ಪಾದಕ ರಾಷ್ಟ್ರಗಳಲ್ಲಿ ಉತ್ಪಾದನೆ ಕುಸಿತ ಕಂಡುಬಂದಿದ್ದು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಒತ್ತಡ ಹೆಚ್ಚಾಗಿದೆ. ಇದರ ಜೊತೆಗೆ ವಾಹನ ಉದ್ಯಮದ ಬೇಡಿಕೆ ಮತ್ತು ಕೈಗಾರಿಕಾ ಬಳಕೆ ಹೆಚ್ಚಳವೂ ಬೆಲೆ ಏರಿಕೆಗೆ ಕಾರಣವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಭಾರತದಲ್ಲಿ ಕಳೆದ ಕೆಲವು ತಿಂಗಳುಗಳಿಂದ ರಬ್ಬರ್ ಬೆಲೆಗಳು ಏರಿಕೆಯ ಹಾದಿಯಲ್ಲಿದ್ದು, ರೈತರಿಗೆ ಉತ್ತಮ ಆದಾಯ ತಂದುಕೊಡುತ್ತಿದೆ. ಆದರೆ ದೀರ್ಘಾವಧಿಯಲ್ಲಿ ಬೆಲೆ ಸ್ಥಿರತೆ ಹಾಗೂ ಉತ್ಪಾದನೆ ಹೆಚ್ಚಳದತ್ತ ಗಮನ ಹರಿಸಬೇಕಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ರಬ್ಬರ್‌ ಉತ್ಪಾದನೆ, ಇಳುವರಿ ಕೊರತೆ ಕೂಡಾ ರಬ್ಬರ್‌ ಬೆಳೆಗಾರರಿಗೆ ಈಗ ಸಮಸ್ಯೆಯಾಗಿದೆ. ಧಾರಣೆ ಇದ್ದರೂ ಕೈಗೆ ಸಿಗದ ಪರಿಸ್ಥಿತಿಯಾಗಿದೆ.

Global natural rubber prices have crossed the historic ₹300 per kg mark amid supply shortages and rising demand. In India, RSS-4 rubber prices have climbed to ₹265 per kg, benefiting growers but increasing costs for rubber-based industries.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

2 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

3 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

3 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

15 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

24 hours ago