Advertisement
MIRROR FOCUS

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

Share

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆಗಳು ಐತಿಹಾಸಿಕ ಏರಿಕೆ ದಾಖಲಿಸಿದ್ದು, ಮೊದಲ ಬಾರಿಗೆ ಕೆಜಿಗೆ ₹300 ಗಡಿಯನ್ನು ದಾಟಿವೆ. ಪ್ರಮುಖ ಉತ್ಪಾದಕ ರಾಷ್ಟ್ರಗಳಲ್ಲಿ ಪೂರೈಕೆ ಕೊರತೆ, ಹವಾಮಾನ ವೈಪರೀತ್ಯ ಹಾಗೂ ಜಾಗತಿಕ ಬೇಡಿಕೆ ಹೆಚ್ಚಳದಿಂದ ರಬ್ಬರ್ ಬೆಲೆಗಳು ಗಗನಕ್ಕೇರಿವೆ.

ಭಾರತೀಯ ಮಾರುಕಟ್ಟೆಯಲ್ಲಿಯೂ ಈ ಪರಿಣಾಮ ಗೋಚರಿಸಿದೆ. RSS-4 ದರ್ಜೆಯ ಶೀಟ್ ರಬ್ಬರ್ ಬೆಲೆ ಕೆಜಿಗೆ ₹265 ಕ್ಕೆ ತಲುಪಿದೆ. ಇದು ದೇಶೀಯ ಮಾರುಕಟ್ಟೆಯಲ್ಲಿ ದಾಖಲೆಯ ಮಟ್ಟದ ಬೆಲೆಗಳಲ್ಲಿ ಒಂದಾಗಿದೆ. ರಬ್ಬರ್ ಬೆಲೆಗಳ ನಿರಂತರ ಏರಿಕೆಯಿಂದ ರಬ್ಬರ್ ಬೆಳೆಗಾರರಲ್ಲಿ ಆಶಾವಾದ ಮೂಡಿದರೆ, ಟೈರ್ ಹಾಗೂ ರಬ್ಬರ್ ಆಧಾರಿತ ಕೈಗಾರಿಕೆಗಳಿಗೆ ಉತ್ಪಾದನಾ ವೆಚ್ಚ ಹೆಚ್ಚಳದ ಸವಾಲು ಎದುರಾಗಿದೆ.

ತಜ್ಞರ ಪ್ರಕಾರ ಥೈಲ್ಯಾಂಡ್, ಇಂಡೋನೇಷ್ಯಾ ಹಾಗೂ ವಿಯೆಟ್ನಾಂ ಸೇರಿದಂತೆ ಪ್ರಮುಖ ಉತ್ಪಾದಕ ರಾಷ್ಟ್ರಗಳಲ್ಲಿ ಉತ್ಪಾದನೆ ಕುಸಿತ ಕಂಡುಬಂದಿದ್ದು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಒತ್ತಡ ಹೆಚ್ಚಾಗಿದೆ. ಇದರ ಜೊತೆಗೆ ವಾಹನ ಉದ್ಯಮದ ಬೇಡಿಕೆ ಮತ್ತು ಕೈಗಾರಿಕಾ ಬಳಕೆ ಹೆಚ್ಚಳವೂ ಬೆಲೆ ಏರಿಕೆಗೆ ಕಾರಣವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಭಾರತದಲ್ಲಿ ಕಳೆದ ಕೆಲವು ತಿಂಗಳುಗಳಿಂದ ರಬ್ಬರ್ ಬೆಲೆಗಳು ಏರಿಕೆಯ ಹಾದಿಯಲ್ಲಿದ್ದು, ರೈತರಿಗೆ ಉತ್ತಮ ಆದಾಯ ತಂದುಕೊಡುತ್ತಿದೆ. ಆದರೆ ದೀರ್ಘಾವಧಿಯಲ್ಲಿ ಬೆಲೆ ಸ್ಥಿರತೆ ಹಾಗೂ ಉತ್ಪಾದನೆ ಹೆಚ್ಚಳದತ್ತ ಗಮನ ಹರಿಸಬೇಕಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ರಬ್ಬರ್‌ ಉತ್ಪಾದನೆ, ಇಳುವರಿ ಕೊರತೆ ಕೂಡಾ ರಬ್ಬರ್‌ ಬೆಳೆಗಾರರಿಗೆ ಈಗ ಸಮಸ್ಯೆಯಾಗಿದೆ. ಧಾರಣೆ ಇದ್ದರೂ ಕೈಗೆ ಸಿಗದ ಪರಿಸ್ಥಿತಿಯಾಗಿದೆ.

Global natural rubber prices have crossed the historic ₹300 per kg mark amid supply shortages and rising demand. In India, RSS-4 rubber prices have climbed to ₹265 per kg, benefiting growers but increasing costs for rubber-based industries.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

14 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago