#ಕೃಷಿಮಾತು | ಕೃಷಿಕನ ಮನೆಯ ಅನಿಲ ಸ್ಥಾವರ | ಕೃಷಿಕ ಎ ಪಿ ಸದಾಶಿವ ಬರೆಯುತ್ತಾರೆ

October 8, 2021
2:59 PM

ಕೃಷಿಕ ಎ ಪಿ ಸದಾಶಿವ ಮರಿಕೆ ಅವರು ಅನಿಲ ಸ್ಥಾಪರದ ಬಗ್ಗೆ ಅನುಭವದ ಮಾತು ಹಂಚಿಕೊಂಡಿದ್ದಾರೆ. ಗೋ ಆಧಾರಿತ ಕೃಷಿಯಿಂದ ಕೃಷಿಕರಿಗೆ, ಭೂಮಿಗೆ ಪ್ರಯೋಜನ ಏನು ಎಂದು ಕೃಷಿ ಮಾತಿನಲ್ಲಿ  ತಿಳಿಸಿದ್ದಾರೆ.

Advertisement

ಗೋವುಗಳು ವಿಸರ್ಜಿಸುವ ಸೆಗಣಿ ಕೃಷಿಗೆ ಮೇಲುಗೊಬ್ಬರವಾದಂತೆ, ಗೊಬ್ಬರ ಕಳಿಯುವ ಸಂದರ್ಭದಲ್ಲಿ ಅದರಿಂದ ಹೊರಡುವ ಅನಿಲಗಳನ್ನು ಸಂಗ್ರಹಿಸಿದರೆ ಬೆಂಕಿಯ ಮೂಲವಾಗಬಹುದು ಎಂಬುದನ್ನು ಕಂಡುಹಿಡಿದ. ಅದರ ಫಲವೇ ಗೊಬ್ಬರದ ಅನಿಲ ಸ್ಥಾವರಗಳು.

ಪಂಚಭೂತಗಳಲ್ಲಿ ಒಂದಾದ ಬೆಂಕಿ ಇಲ್ಲದೆ ಮಾನವ ಜೀವಿಸಲು ಸಾಧ್ಯವಿಲ್ಲ. ಮೂರು ಹೊತ್ತಿನ ಉಣ್ಣುವಿಕಿಗೆ ಆಹಾರ ಎಷ್ಟು ಮುಖ್ಯವೋ ಬೆಂಕಿಯು ಅಷ್ಟೇ ಮುಖ್ಯ. ಬೆಂಕಿಯನ್ನು ಸೃಷ್ಟಿ ಮಾಡಿದ ಪ್ರಕೃತಿ ಉರಿಯಲು ಬೇಕಾದ ಮೂಲವಸ್ತು ಮರಗಳನ್ನು ಸೃಷ್ಟಿ ಮಾಡಿದೆ. ನಾಗರಿಕತೆ ಮುಂದುವರಿದಂತೆ ಮರಗಳ ಲಭ್ಯತೆ ಕಡಿಮೆಯಾದಾಗ,ಬೆಂಕಿ ಉರಿಸಲು ಸುಲಭ ಮೂಲಗಳು ಯಾವುದು ಇದೆ ಎಂದು ಹುಡುಕಾಟದಲ್ಲಿ ಮನುಷ್ಯ ತೊಡಗಿದ. ಪಂಚಭೂತಗಳನ್ನು ಸೃಷ್ಟಿಸಿದ ಪ್ರಕೃತಿ ಮಾನವನ ಬದುಕಿಗೋಸ್ಕರ ಗೋವುಗಳನ್ನು ಸೃಷ್ಟಿಸಿದ್ದ. ಗೋವುಗಳು ವಿಸರ್ಜಿಸುವ ಸೆಗಣಿ ಕೃಷಿಗೆ ಮೇಲುಗೊಬ್ಬರವಾದಂತೆ, ಗೊಬ್ಬರ ಕಳಿಯುವ ಸಂದರ್ಭದಲ್ಲಿ ಅದರಿಂದ ಹೊರಡುವ ಅನಿಲಗಳನ್ನು ಸಂಗ್ರಹಿಸಿದರೆ ಬೆಂಕಿಯ ಮೂಲವಾಗಬಹುದು ಎಂಬುದನ್ನು ಕಂಡುಹಿಡಿದ. ಅದರ ಫಲವೇ ಗೊಬ್ಬರದ ಅನಿಲ ಸ್ಥಾವರಗಳು.

1976 ನೇ ಇಸವಿಯಲ್ಲಿ ಈ ವಿಷಯವನ್ನು ನನ್ನ ಅಪ್ಪನಿಗೆ ಯಾರೋ ತಿಳಿಸಿದರು. ಹೊಸ ವಿಷಯಗಳನ್ನು ತಿಳಿಯುವುದರಲ್ಲಿ, ಅದರ ಸಾಧಕ ಬಾಧಕಗಳನ್ನು ವಿಶ್ಲೇಷಿಸಿ ಮುಂದುವರಿಯುವುದು ನನ್ನಪ್ಪನ ಅಭ್ಯಾಸ. ಅಂತೆಯೇ ವಿಷಯಗಳನ್ನು ಸಂಗ್ರಹಿಸಿ ಆಗಿನ ಕಾಲದಲ್ಲಿ ಬಲು ಅಪರೂಪವಾದ ಗೊಬ್ಬರದ ಅನಿಲ ಸ್ಥಾವರ ನಿರ್ಮಾಣಕ್ಕೆ ಧುಮುಕಿಯೇ ಬಿಟ್ಟರು. 16 ಅಡಿಯ ಬಾವಿ (ಸಂಪೂರ್ಣ ಮುರಕಲ್ಲು ಕಟ್ಟಿ ಸಿಮೆಂಟು ಲೇಪಿತ ), ಸೆಗಣಿಯ ಬಗ್ಗಡ ಒಳ ಹೋಗುವಂತೆ ಒಂದು ಕೊಳವೆ, ಹೊರಬರುವಂತೆ1 ಕೊಳವೆ, ಅನಿಲ ಸಂಗ್ರಹಕ್ಕೆ ಕಬ್ಬಿಣದ ಧಾರಕ( ಡ್ರಮ್). ಆ ಕಾಲದಲ್ಲಿ ಧಾರಕಗಳು ಸೆಗಣಿಯಲ್ಲಿ ಮುಳುಗಿ ಏಳುವಂತದ್ದು ಮತ್ತು ಎಣ್ಣೆಯಲ್ಲಿ ಮುಳುಗಿ ಏಳುವಂತಹ ಎರಡು ಮಾದರಿಯಲ್ಲಿ ರಚನೆ ಮಾಡುತ್ತಿದ್ದರು. ಕಬ್ಬಿಣದ ಧಾರಕಗಳ ದೀರ್ಘಾಯುಷ್ಯದ ದೃಷ್ಟಿಯಿಂದ ನಮ್ಮಲ್ಲಿ ಎರಡನೇ ಮಾದರಿಯನ್ನು ಆಯ್ಕೆ ಮಾಡಿಕೊಂಡು ಅನಿಲ ಸ್ಥಾವರ ಸ್ಥಾಪನೆಯಾಯಿತು. ನಿರಂತರ 45 ವರ್ಷಗಳಿಂದ ನಮ್ಮ ಮನೆಯ ಅಡುಗೆ,ಬಿಸಿನೀರು, ಸಣ್ಣಸಣ್ಣ ಕಾರ್ಯಕ್ರಮಗಳು ಎಲ್ಲವನ್ನೂ ಬಹು ಅಚ್ಚುಕಟ್ಟಾಗಿ ಪೂರೈಸುತ್ತಾ ಬಂದಿದೆ. ಚಳಿಗಾಲದ ಕೆಲ ಸಂದರ್ಭಗಳಲ್ಲಿ ಅನಿಲ ಉತ್ಪಾದನೆ ಕಡಿಮೆ ಆಗುವುದರಿಂದ ಸಮಸ್ಯೆ ಆಗಬಾರದೆಂದು ಈಗಿನ ಹದಿನೈದು ವರ್ಷಗಳ ಹಿಂದೆ ದೀನಬಂಧು ಮಾದರಿಯನ್ನು ಹೊಸದಾಗಿ ಸೇರಿಸಿದೆ. ಗೊಬ್ಬರದ ಅನಿಲ ಸ್ಥಾವರದ ಉಪಯೋಗದಿಂದ ನಮಗಾಗುವ ಲಾಭಗಳನ್ನು ಈ ಕೆಳಗಿನಂತೆ ಪಟ್ಟಿಮಾಡಬಹುದು.

1. ನಾವು ಚಿಕ್ಕವರಿದ್ದಾಗ ನಮ್ಮ ಅಮ್ಮನಿಗೆ ಕೆಮ್ಮು ದಮ್ಮಿನ ಸಮಸ್ಯೆ ಇತ್ತು. ಯಾವಾಗ ಅಡುಗೆಮನೆ ಹೊಗೆ ಮುಕ್ತವಾಯಿತೋ ಅಮ್ಮನ ಸಮಸ್ಯೆಗಳು ಪರಿಹಾರವಾಯಿತು.
2. ಪಾತ್ರೆಗಳನ್ನು ತೊಳೆಯುವ ಕೆಲಸ ಅರ್ಧಕ್ಕೆ ಅರ್ಧ ಕಡಿಮೆಯಾಯಿತು.
3. ಆಧುನಿಕ ಅನಿಲ ಜಾಡಿಗಳನ್ನು ಬಳಕೆ ಮಾಡುತ್ತಿದ್ದಲ್ಲಿ ತಿಂಗಳಿಗೆ ಎರಡು ಜಾಡಿಗಳು ನಮ್ಮ ಮನೆಗೆ ಅನಿವಾರ್ಯ. ಇಂದು ಅನಿಲ ಜಾಡಿಗಳಿಗೆ ರೂ ಒಂಬೈನೂರ ರಂತೆ 24 ಜಾಡಿಗಳ ದರ ಎಷ್ಟಾಗಬಹುದು ಎಂದು ಲೆಕ್ಕ ಹಾಕಿಕೊಳ್ಳಿ.
4.ಮಾರುಕಟ್ಟೆಯಲ್ಲಿ ಅನಿಲ ಜಾಡಿಗಳ ಸಹಾಯ ಸಹಾಯಧನ ಹೋಯಿತು ಕ್ರಯ ಏರಿತು ಎಂಬ ಯಾವ ಚಿಂತೆಯೂ ನನಗಿಲ್ಲ.
5. 45 ವರ್ಷಗಳಿಂದ ನಾನು ಸರಕಾರಕ್ಕೆ ಉಳಿಸಿಕೊಟ್ಟ ಸಹಾಯಧನದ ಮೊತ್ತ ಎಷ್ಟಾಗಬಹುದು. ನಾವು ದಾನಿಗಳು ಆಗಬೇಕೇ ವಿನಃ ದೇಹಿಗಳು ಆಗಬಾರದು.
6. ನಾವು ಕೃಷಿಕರಾಗಿದ್ದು, ದನ ಸಾಕುವ ಎಲ್ಲಾ ಸಾಮರ್ಥ್ಯಗಳು ಇದ್ದೂ ಸ್ವಾವಲಂಬನೆಯನ್ನು ಸಾಧಿಸದೆ ಪರಾವಲಂಬನೆಯ ಕಡೆಗಿನ ನಡುಗೆ ಆಶ್ಚರ್ಯವಾಗುತ್ತದೆ.( ಸಮಾಜದಲ್ಲಿ ಹಿಂದುಳಿವರಾಗಲು ಇರುವ ತುಡಿತ ಮುಂದುವರಿದವರಾಗಲು ಇರುವುದಿಲ್ಲ!)
7. ಅನಿಲ ಜಾಡಿ ಗಳಂತೆ ಬೆಂಕಿಯ ಯಾವುದೇ ಅಪಘಾತದ ಭಯವಿಲ್ಲ. ಕಷ್ಟಪಟ್ಟರೆ ಎಲ್ಲವನ್ನೂ ಕೊಡುವ,ಪಂಚ ಭೂತಗಳನ್ನು ಸುಸ್ಥಿತಿಯಲ್ಲಿಡುವ ಗೋವುಗಳನ್ನು ಸ್ಮರಿಸುತ್ತಾ ನೆಮ್ಮದಿಯಲ್ಲಿರೋಣ.

Advertisement

# ಎ.ಪಿ.ಸದಾಶಿವ ಮರಿಕೆ , ಕೃಷಿಕ

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

ಇದನ್ನೂ ಓದಿ

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು
July 14, 2025
10:56 PM
by: ನಾ.ಕಾರಂತ ಪೆರಾಜೆ
ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!
July 13, 2025
11:36 AM
by: ಮಹೇಶ್ ಪುಚ್ಚಪ್ಪಾಡಿ
ಹೊಸರುಚಿ | ಹಲಸಿನ ಬೀಜದ ಪರೋಟ
July 12, 2025
7:11 AM
by: ದಿವ್ಯ ಮಹೇಶ್
ಸೆಕ್ಸ್ ಎಂದರೆ ಜತೆಯಲ್ಲಿ ಕಾಫಿ ಕುಡಿದಂತಲ್ಲ!?
July 10, 2025
7:53 PM
by: ಡಾ.ಚಂದ್ರಶೇಖರ ದಾಮ್ಲೆ
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಪ್ರಮುಖ ಸುದ್ದಿ

MIRROR FOCUS

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್
July 15, 2025
9:31 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು
July 15, 2025
9:29 PM
by: The Rural Mirror ಸುದ್ದಿಜಾಲ
ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |
July 15, 2025
8:01 AM
by: The Rural Mirror ಸುದ್ದಿಜಾಲ

Editorial pick

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….
July 3, 2025
10:43 AM
by: ಮಹೇಶ್ ಪುಚ್ಚಪ್ಪಾಡಿ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ
ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್
July 15, 2025
9:31 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು
July 15, 2025
9:29 PM
by: The Rural Mirror ಸುದ್ದಿಜಾಲ
ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |
July 15, 2025
8:01 AM
by: The Rural Mirror ಸುದ್ದಿಜಾಲ
ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ
July 15, 2025
7:26 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ
July 14, 2025
11:16 PM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು
July 14, 2025
10:56 PM
by: ನಾ.ಕಾರಂತ ಪೆರಾಜೆ
ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |
July 14, 2025
1:02 PM
by: ಸಾಯಿಶೇಖರ್ ಕರಿಕಳ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್
July 14, 2025
7:47 AM
by: ದ ರೂರಲ್ ಮಿರರ್.ಕಾಂ

ವಿಶೇಷ ವರದಿ

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಕೃಷಿ ಅರಣ್ಯೀಕರಣ ಉತ್ತೇಜನಕ್ಕೆ ಕ್ರಮ | ಕೃಷಿ ಭೂಮಿಯಲ್ಲಿರುವ ಮರ ಕಡಿಯಲು ನಿಯಮಾವಳಿ |
June 30, 2025
6:13 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ
June 27, 2025
8:40 PM
by: ದ ರೂರಲ್ ಮಿರರ್.ಕಾಂ

OPINION

ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group