Advertisement
ಸುದ್ದಿಗಳು

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Share

ಜೈವಿಕ ಆರ್ಥಿಕತೆ (Bioeconomy) ಎಂಬ ಹೊಸ ಆರ್ಥಿಕ ಮಾದರಿಯತ್ತ ವಿಶ್ವದ ಕೈಗಾರಿಕೆಗಳು ಕ್ರಮೇಣ ಸಾಗುತ್ತಿರುವ ಸಂದರ್ಭದಲ್ಲಿ ಗೋದಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ ಮಾದರಿಯನ್ನು ಜಾಗತಿಕ ವೇದಿಕೆಯಲ್ಲಿ ಪ್ರಸ್ತುತಪಡಿಸಿದೆ.

ಸಿಂಗಾಪುರದಲ್ಲಿ ನಡೆದ Bio Innovations APAC 2026 ಸಮಾವೇಶದಲ್ಲಿ ಕಂಪನಿಯ ಪ್ರತಿನಿಧಿಗಳು ಕೃಷಿ ಸಂಪನ್ಮೂಲಗಳನ್ನು ಬಳಸಿ ಕೈಗಾರಿಕಾ ಉತ್ಪನ್ನಗಳನ್ನು ತಯಾರಿಸುವ ತಮ್ಮ ಸಮಗ್ರ ಮಾದರಿಯನ್ನು ವಿವರಿಸಿದರು.

ಸಮಾವೇಶದಲ್ಲಿ ಕಂಪನಿಯ ಅಧಿಕಾರಿಗಳು “Soil-to-Bio Products” ಎಂಬ ಕಲ್ಪನೆಯನ್ನು ಪರಿಚಯಿಸಿದರು. ಈ ಮಾದರಿಯಲ್ಲಿ, ಕೃಷಿ ಮೂಲದ ಕಚ್ಚಾ ವಸ್ತುಗಳು, ಜೈವಿಕ ತಂತ್ರಜ್ಞಾನ,  ಕೈಗಾರಿಕಾ ಸಂಸ್ಕರಣಾ ವಿಧಾನಗಳು ಇವುಗಳನ್ನು ಒಟ್ಟುಗೂಡಿಸಿ ಬಯೋ ಆಧಾರಿತ ರಸಾಯನಗಳು, ಇಂಧನ ಮತ್ತು ಇತರೆ ಉತ್ಪನ್ನಗಳು ತಯಾರಿಸಲಾಗುತ್ತದೆ.  ಈ ವಿಧಾನದಿಂದ ಪೆಟ್ರೋಲಿಯಂ ಆಧಾರಿತ ರಸಾಯನಗಳ ಬಳಕೆ ಕಡಿಮೆಯಾಗುತ್ತದೆ ಹಾಗೂ ಕಾರ್ಬನ್ ಉತ್ಸರ್ಜನೆ ಕಡಿಮೆ ಮಾಡುವ ಸಾಧ್ಯತೆ ಹೆಚ್ಚುತ್ತದೆ.

ಕೃಷಿ ಸಂಪನ್ಮೂಲಗಳಿಂದ ಕೈಗಾರಿಕಾ ಉತ್ಪನ್ನಗಳು : ಗೋದಾವರಿ ಬಯೋರೆಫೈನರೀಸ್ ಈಗಾಗಲೇ ಕೃಷಿ ಮೂಲದ ಜೈವಿಕ ಕಚ್ಚಾ ವಸ್ತುಗಳಿಂದ ಹಲವು ಉತ್ಪನ್ನಗಳನ್ನು ತಯಾರಿಸುತ್ತಿದೆ.  ಇವುಗಳಲ್ಲಿ, ಆಹಾರ ಪದಾರ್ಥಗಳಿಗೆ ಬಳಸುವ ಘಟಕಗಳು, ಜೈವಿಕ ಇಂಧನ, ವಿಶೇಷ ರಸಾಯನಗಳು.  ಇವುಗಳು ಕಾಸ್ಮೆಟಿಕ್ಸ್‌, ಅಗ್ರೋಕೆಮಿಕಲ್ಸ್‌, ಅಂಟು ಪದಾರ್ಥಗಳು, ಕೋಟಿಂಗ್‌ಗಳು ಸೇರಿದಂತೆ ಹಲವು ಕೈಗಾರಿಕೆಗಳಿಗೆ ಪೂರೈಕೆ ಆಗುತ್ತಿವೆ.

ಹವಾಮಾನ ಬದಲಾವಣೆಗೆ ಪರಿಹಾರ ಹುಡುಕುವ ಪ್ರಯತ್ನ: ಕಂಪನಿಯ ಪ್ರಕಾರ, ರಸಾಯನ ಕೈಗಾರಿಕೆಯನ್ನು ಕಾರ್ಬನ್ ಕಡಿತದತ್ತ ಕರೆದೊಯ್ಯಲು ಒಂದೇ ತಂತ್ರಜ್ಞಾನ ಸಾಕಾಗುವುದಿಲ್ಲ. ಹೊಸ ತಂತ್ರಜ್ಞಾನಗಳು, ಉತ್ಪಾದನಾ ದಕ್ಷತೆ, ಕೃಷಿ ಮೂಲದ ಕಚ್ಚಾ ವಸ್ತುಗಳ ಸುಧಾರಣೆ, ಸರಕಾರದ ನೀತಿಯ ಬೆಂಬಲ. ಇವುಗಳ ಸಮನ್ವಯದಿಂದ ಮಾತ್ರ ಸಸ್ಟೇನಬಲ್ ಕೈಗಾರಿಕಾ ವ್ಯವಸ್ಥೆ ನಿರ್ಮಾಣ ಸಾಧ್ಯ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Godavari Biorefineries showcased its integrated “soil-to-bio-products” model at the Bio Innovations APAC 2026 conference in Singapore. The company highlighted how agricultural feedstocks can be converted into bio-based chemicals, fuels, and industrial products through biotechnology and industrial processing. This approach supports the transition from fossil-based resources to a sustainable bioeconomy.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ

ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…

4 hours ago

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

22 hours ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

1 day ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

2 days ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

2 days ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

2 days ago