ದೇಶ ಎದುರಿಸುತ್ತಿರುವ ನಿರುದ್ಯೋಗವನ್ನು ಕಡಿಮೆ ಮಾಡಲು ಛತ್ತೀಸ್ಗಢ ಸರ್ಕಾರವು ಗೋಧನ್ ನ್ಯಾಯ್ ಯೋಜನೆಯನ್ನು ಅಳವಡಿಸಿಕೊಂಡಿದೆ. ಇಲ್ಲಿ ಸೆಗಣಿ ಬಳಕೆ ವರ್ಮಿ- ಕಾಂಪೋಸ್ಟ್, ಮಣ್ಣಿನ ಪಾತ್ರೆಗಳು, ಅಗರಬತ್ತಿಗಳ ತಯಾರಿಸಲು ಸೆಗಣಿ ಪ್ರತಿ ಕೆಜಿಗೆ 2 ರೂಗೆ ಖರೀದಿಸಲಾಗುತ್ತದೆ. ಈ ಯೋಜನೆಯಿಂದಾಗಿ ಒಂದೆಡೆ ದನಕರುಗಳು ಮತ್ತು ಸೆಗಣಿ ಸಂಗ್ರಹಿಸುವವರು ಹಣ ಗಳಿಸಿದರೆ ಮತ್ತೊಂದೆಡೆ ಉದ್ಯೋಗ ಸೃಷ್ಟಿಯಾಗಿದೆ.
ಗೋಧನ್ ನ್ಯಾಯ್ ಯೋಜನೆಯನ್ನು ಅಳವಡಿಸಿ, ಇದರ ಅಡಿಯಲ್ಲಿ ಗೋಥಾನ್ ಗಳನ್ನು ಹಗಲಿನಲ್ಲಿ ಜಾನುವಾರುಗಳನ್ನು ತಂದು ಆಹಾರ, ನೀರು ಮತ್ತು ಇತರ ಸೌಲಭ್ಯಗಳನ್ನು ಒದಗಿಸಲು ನಿರ್ಮಿಸಲಾಗಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, 2,80,000 ಜಾನುವಾರು ಹೊಂದಿರುವ ರೈತರು ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ ಎರಡು ಲಕ್ಷದಷ್ಟು ರೈತರು ಸೆಗಣಿ ಮಾರಾಟ ಮಾಡಿದ್ದು, 59 ಲಕ್ಷ ಕ್ವಿಂಟಲ್ ಸೆಗಣಿ ಖರೀದಿಗೆ ಕಾರಣವಾಗಿದೆ.
ಸಮಿತಿಗಳು ಖರೀದಿಸಿದ ಸೆಗಣಿಯಿಂದ 10,10,555 ಕ್ವಿಂಟಾಲ್ ವರ್ಮಿ ಕಾಂಪೋಸ್ಟ್ ತಯಾರಿಸಲಾಗಿದ್ದು, 4,31,701 ಕ್ವಿಂಟಾಲ್ ಸೂಪರ್ ಕಾಂಪೋಸ್ಟ್ ತಯಾರಿಸಲಾಗಿದೆ. ಈ ವ್ಯವಹಾರದಿಂದ 48 ಕೋಟಿ ರೂಪಾಯಿ ಆದಾಯವಾಗಿದ್ದರೆ, ವರ್ಮಿ ಕಾಂಪೋಸ್ಟ್ ತಯಾರಿಕೆಯಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರಿಗೆ 29 ಕೋಟಿ ರೂ.ಗಿಂತ ಹೆಚ್ಚು ಲಾಭಾಂಶ ನೀಡಲಾಗಿದೆ. ಇತರ ಸಂಬಂಧಿತ ವ್ಯವಹಾರಗಳು ಸಹ ಲಾಭವನ್ನು ಗಳಿಸಿದೆ. ಮತ್ತು ಅದರೊಂದಿಗೆ ಸಂಬಂಧಿಸಿದ ಜನರಿಗೆ ಲಾಭಾಂಶವನ್ನು ಒದಗಿಸಲಾಗಿದ್ದು, ಇದರಿಂದ ಬಿಡಾಡಿ ದನಗಳಿಂದ ಬೆಳೆ ಹಾನಿಯಾಗದಂತೆ ತಡೆಯುವ ಜತೆಗೆ ಉದ್ಯೋಗಾವಕಾಶವನ್ನು ಕಲ್ಪಿಸಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…