ಮಹಿಳಾ ರೈತರ ಸಬಲೀಕರಣಕ್ಕೆ ಗೋದ್ರೆಜ್–ಮಹಾರಾಷ್ಟ್ರ ಸರ್ಕಾರದ ಮಹತ್ವದ ಒಪ್ಪಂದ

January 22, 2026
6:55 AM

ದೇಶದ ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರವನ್ನು ಬಲಪಡಿಸಲು ಮತ್ತು ಸುಸ್ಥಿರ ಕೃಷಿಯನ್ನು ಉತ್ತೇಜಿಸಲು ಗೋದ್ರೆಜ್ ಅಗ್ರೋವೆಟ್ ಲಿಮಿಟೆಡ್ (GAVL) ಮತ್ತು ಮಹಾರಾಷ್ಟ್ರ ಸರ್ಕಾರದ ರಾಜ್ಯ ಗ್ರಾಮೀಣ ಜೀವನೋಪಾಯ ಮಿಷನ್ (MSRLM–UMED) ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಸಹಭಾಗಿತ್ವದ ಮೂಲಕ ರಾಜ್ಯದ ಸಾವಿರಾರು ಮಹಿಳಾ ರೈತರ ಬದುಕಿನಲ್ಲಿ ಹೊಸ ಬದಲಾವಣೆ ತರುವ ಗುರಿ ಹೊಂದಲಾಗಿದೆ. ಈ ಒಪ್ಪಂದವು ಕೇವಲ ತರಬೇತಿಗೆ ಸೀಮಿತವಾಗಿಲ್ಲ; ಇದು ಮಹಿಳಾ ರೈತರನ್ನು ಕೃಷಿ ಉದ್ಯಮಿಗಳನ್ನಾಗಿ ಮಾಡುವ ಮತ್ತು ಅವರ ಆದಾಯವನ್ನು ದ್ವಿಗುಣಗೊಳಿಸುವ ಒಂದು ದೂರದೃಷ್ಟಿಯ ಯೋಜನೆಯಾಗಿದೆ ಎಂದು ಸರ್ಕಾರ ತಿಳಿಸಿದೆ.

ಯೋಜನೆಯ ಮುಖ್ಯಾಂಶಗಳು: ಈ ಯೋಜನೆಯು ಮೂರು ವರ್ಷಗಳ ಅವಧಿಯಲ್ಲಿರುತ್ತದೆ. ಮಹಾರಾಷ್ಟ್ರ ರಾಜ್ಯದ 9 ಪ್ರಮುಖ ಕೃಷಿ ಜಿಲ್ಲೆಗಳ ಮಹಿಳಾ ರೈತರನ್ನು ಈ ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ಸುಮಾರು 5000 ಮಹಿಳೆಯರಿಗೆ ಲಾಭವಾಗುವ ನಿರೀಕ್ಷೆ ಇದೆ. ಮೊದಲ ಹಂತದಲ್ಲಿ ಹತ್ತಿ ಬೆಳೆಗಾರರಿಗೆ ತರಬೇತಿ ನೀಡಲಿದ್ದು, ಮುಂದಿನ ದಿನಗಳಲ್ಲಿ ಮೆಕ್ಕೆಜೋಳ ಬೆಳೆಗಾರರಿಗೂ ಇದನ್ನು ವಿಸ್ತರಿಸಲಾಗುವುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳ (SHG) ಸದಸ್ಯರಿಗೆ ಆಧುನಿಕ ಕೃಷಿ ಪದ್ಧತಿಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಗುತ್ತದೆ. ಮುಖ್ಯವಾಗಿ ಉತ್ತಮ ಕೃಷಿ ಪದ್ಧತಿಗಳು (GAP), ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಇಳುವರಿ ಪಡೆಯುವ ತಂತ್ರಗಳು. ಸಮಗ್ರ ಕೀಟ ನಿರ್ವಹಣೆ (IPM), ರೋಗಗಳನ್ನು ಹತೋಟಿಗೆ ತರಲು ರಾಸಾಯನಿಕಗಳಿಗಿಂತ ಜೈವಿಕ ವಿಧಾನಗಳಿಗೆ ಆದ್ಯತೆ. ರೈತ ಮಹಿಳೆಯರಿಗೆ ಕೃಷಿ ಕಾರ್ಯಾಗಾರಗಳ ಜೊತೆಗೆ ಸುರಕ್ಷತಾ ಕಿಟ್‌ಗಳನ್ನು ಸಹ ವಿತರಿಸಲಾಗುತ್ತದೆ.

ಮಹಾರಾಷ್ಟ್ರ ಸರ್ಕಾರದ UMED ಸಂಸ್ಥೆಯು ಮಹಿಳಾ ರೈತರನ್ನು ಸಂಘಟಿಸುವ ಕೆಲಸ ಮಾಡಲಿದ್ದರೆ, ಗೋದ್ರೆಜ್‌ ಅಗ್ರೋವೆಟ್‌ ಸಂಸ್ಥೆಯು ತಾಂತ್ರಿಕ ಪರಿಣತಿ, ಸಂಪನ್ಮೂಲ ಮತ್ತು ಕ್ಷೇತ್ರ ಮಟ್ಟದ ಮಾರ್ಗದರ್ಶನವನ್ನು ಒದಗಿಸಲಿದೆ. ಯೋಜನೆಯ ಮೂಲಕ ಗ್ರಾಮೀಣ ಭಾಗದಲ್ಲಿ ಸುಸ್ಥಿರ ಕೃಷಿ ಮತ್ತು ಮಹಿಳಾ ನಾಯಕತ್ವಕ್ಕೆ ಹೊಸ ಚೈತನ್ಯ ಸಿಗುವ ನಿರೀಕ್ಷೆಯಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror