Advertisement
MIRROR FOCUS

ಮಹಿಳಾ ರೈತರ ಸಬಲೀಕರಣಕ್ಕೆ ಗೋದ್ರೆಜ್–ಮಹಾರಾಷ್ಟ್ರ ಸರ್ಕಾರದ ಮಹತ್ವದ ಒಪ್ಪಂದ

Share

ದೇಶದ ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರವನ್ನು ಬಲಪಡಿಸಲು ಮತ್ತು ಸುಸ್ಥಿರ ಕೃಷಿಯನ್ನು ಉತ್ತೇಜಿಸಲು ಗೋದ್ರೆಜ್ ಅಗ್ರೋವೆಟ್ ಲಿಮಿಟೆಡ್ (GAVL) ಮತ್ತು ಮಹಾರಾಷ್ಟ್ರ ಸರ್ಕಾರದ ರಾಜ್ಯ ಗ್ರಾಮೀಣ ಜೀವನೋಪಾಯ ಮಿಷನ್ (MSRLM–UMED) ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಸಹಭಾಗಿತ್ವದ ಮೂಲಕ ರಾಜ್ಯದ ಸಾವಿರಾರು ಮಹಿಳಾ ರೈತರ ಬದುಕಿನಲ್ಲಿ ಹೊಸ ಬದಲಾವಣೆ ತರುವ ಗುರಿ ಹೊಂದಲಾಗಿದೆ. ಈ ಒಪ್ಪಂದವು ಕೇವಲ ತರಬೇತಿಗೆ ಸೀಮಿತವಾಗಿಲ್ಲ; ಇದು ಮಹಿಳಾ ರೈತರನ್ನು ಕೃಷಿ ಉದ್ಯಮಿಗಳನ್ನಾಗಿ ಮಾಡುವ ಮತ್ತು ಅವರ ಆದಾಯವನ್ನು ದ್ವಿಗುಣಗೊಳಿಸುವ ಒಂದು ದೂರದೃಷ್ಟಿಯ ಯೋಜನೆಯಾಗಿದೆ ಎಂದು ಸರ್ಕಾರ ತಿಳಿಸಿದೆ.

ಯೋಜನೆಯ ಮುಖ್ಯಾಂಶಗಳು: ಈ ಯೋಜನೆಯು ಮೂರು ವರ್ಷಗಳ ಅವಧಿಯಲ್ಲಿರುತ್ತದೆ. ಮಹಾರಾಷ್ಟ್ರ ರಾಜ್ಯದ 9 ಪ್ರಮುಖ ಕೃಷಿ ಜಿಲ್ಲೆಗಳ ಮಹಿಳಾ ರೈತರನ್ನು ಈ ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ಸುಮಾರು 5000 ಮಹಿಳೆಯರಿಗೆ ಲಾಭವಾಗುವ ನಿರೀಕ್ಷೆ ಇದೆ. ಮೊದಲ ಹಂತದಲ್ಲಿ ಹತ್ತಿ ಬೆಳೆಗಾರರಿಗೆ ತರಬೇತಿ ನೀಡಲಿದ್ದು, ಮುಂದಿನ ದಿನಗಳಲ್ಲಿ ಮೆಕ್ಕೆಜೋಳ ಬೆಳೆಗಾರರಿಗೂ ಇದನ್ನು ವಿಸ್ತರಿಸಲಾಗುವುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳ (SHG) ಸದಸ್ಯರಿಗೆ ಆಧುನಿಕ ಕೃಷಿ ಪದ್ಧತಿಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಗುತ್ತದೆ. ಮುಖ್ಯವಾಗಿ ಉತ್ತಮ ಕೃಷಿ ಪದ್ಧತಿಗಳು (GAP), ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಇಳುವರಿ ಪಡೆಯುವ ತಂತ್ರಗಳು. ಸಮಗ್ರ ಕೀಟ ನಿರ್ವಹಣೆ (IPM), ರೋಗಗಳನ್ನು ಹತೋಟಿಗೆ ತರಲು ರಾಸಾಯನಿಕಗಳಿಗಿಂತ ಜೈವಿಕ ವಿಧಾನಗಳಿಗೆ ಆದ್ಯತೆ. ರೈತ ಮಹಿಳೆಯರಿಗೆ ಕೃಷಿ ಕಾರ್ಯಾಗಾರಗಳ ಜೊತೆಗೆ ಸುರಕ್ಷತಾ ಕಿಟ್‌ಗಳನ್ನು ಸಹ ವಿತರಿಸಲಾಗುತ್ತದೆ.

ಮಹಾರಾಷ್ಟ್ರ ಸರ್ಕಾರದ UMED ಸಂಸ್ಥೆಯು ಮಹಿಳಾ ರೈತರನ್ನು ಸಂಘಟಿಸುವ ಕೆಲಸ ಮಾಡಲಿದ್ದರೆ, ಗೋದ್ರೆಜ್‌ ಅಗ್ರೋವೆಟ್‌ ಸಂಸ್ಥೆಯು ತಾಂತ್ರಿಕ ಪರಿಣತಿ, ಸಂಪನ್ಮೂಲ ಮತ್ತು ಕ್ಷೇತ್ರ ಮಟ್ಟದ ಮಾರ್ಗದರ್ಶನವನ್ನು ಒದಗಿಸಲಿದೆ. ಯೋಜನೆಯ ಮೂಲಕ ಗ್ರಾಮೀಣ ಭಾಗದಲ್ಲಿ ಸುಸ್ಥಿರ ಕೃಷಿ ಮತ್ತು ಮಹಿಳಾ ನಾಯಕತ್ವಕ್ಕೆ ಹೊಸ ಚೈತನ್ಯ ಸಿಗುವ ನಿರೀಕ್ಷೆಯಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

20 minutes ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

12 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

12 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

12 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

13 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

24 hours ago